<p><strong>ನವದೆಹಲಿ: </strong>ಭಯೋತ್ಪಾದಕನಾಗಿ, ನಂತರ ಪರಿವರ್ತನೆಗೊಂಡು ಸೇನೆಗೆ ಸೇರಿ ಹುತಾತ್ಮರಾಗಿದ್ದ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾನಿ ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದ ‘ಅಶೋಕ ಚಕ್ರ’ಗೌರವವನ್ನು, ಹುತಾತ್ಮ ಯೋಧನಪತ್ನಿ ಮಹಜಬೀನ್ ಸ್ವೀಕರಿಸಿದರು.</p>.<p>ಯುದ್ಧ ಭೂಮಿಯಲ್ಲಿ ಅಪ್ರತಿಮ ಸಾಹಸ, ಕೆಚ್ಚೆದೆಯ ಹೋರಾಟ ನಡೆಸಿ ಹುತಾತ್ಮರಾದ ಯೋಧರಿಗೆ ನೀಡಲಾಗುವ ಸೇನೆಯ ಶಾಂತಿಕಾಲದ ಅತ್ಯುನ್ನತ ಸೇನಾ ಗೌರವವನ್ನುಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.</p>.<p>38 ವರ್ಷದ ವಾನಿ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ಅಶ್ಮುಜಿಯವರು. ಮೊದಲಿಗೆ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರಾಗಿ ಸೇನೆಯ ವಿರುದ್ಧವೇ ಹೋರಾಡುತ್ತಿದ್ದರು. 2004ರಲ್ಲಿ ಮನಃಪರಿವರ್ತನೆಗೊಂಡು, ಭಾರತೀಯ ಸೇನೆ ಸೇರಿ ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.</p>.<p>ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶೋಪಿಯಾನ್ ಜಿಲ್ಲೆಯ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕೆಚ್ಚೆದೆಯ ಹೋರಾಟವನ್ನು ಪ್ರದರ್ಶಿಸಿ, ಹುತಾತ್ಮರಾಗಿದ್ದರು.</p>.<p>ಹುತಾತ್ಮರಾಗುವ ಮುನ್ನ ಅಸಾಧಾರಣ ಹೋರಾಟ ನಡೆಸಿದ್ದ ’ವಾನಿಗೆ ಸೇನಾ ಮೆಡಲ್‘ಅನ್ನೂ ನೀಡಿ ಗೌರವಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಯೋತ್ಪಾದಕನಾಗಿ, ನಂತರ ಪರಿವರ್ತನೆಗೊಂಡು ಸೇನೆಗೆ ಸೇರಿ ಹುತಾತ್ಮರಾಗಿದ್ದ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾನಿ ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದ ‘ಅಶೋಕ ಚಕ್ರ’ಗೌರವವನ್ನು, ಹುತಾತ್ಮ ಯೋಧನಪತ್ನಿ ಮಹಜಬೀನ್ ಸ್ವೀಕರಿಸಿದರು.</p>.<p>ಯುದ್ಧ ಭೂಮಿಯಲ್ಲಿ ಅಪ್ರತಿಮ ಸಾಹಸ, ಕೆಚ್ಚೆದೆಯ ಹೋರಾಟ ನಡೆಸಿ ಹುತಾತ್ಮರಾದ ಯೋಧರಿಗೆ ನೀಡಲಾಗುವ ಸೇನೆಯ ಶಾಂತಿಕಾಲದ ಅತ್ಯುನ್ನತ ಸೇನಾ ಗೌರವವನ್ನುಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.</p>.<p>38 ವರ್ಷದ ವಾನಿ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ಅಶ್ಮುಜಿಯವರು. ಮೊದಲಿಗೆ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರಾಗಿ ಸೇನೆಯ ವಿರುದ್ಧವೇ ಹೋರಾಡುತ್ತಿದ್ದರು. 2004ರಲ್ಲಿ ಮನಃಪರಿವರ್ತನೆಗೊಂಡು, ಭಾರತೀಯ ಸೇನೆ ಸೇರಿ ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.</p>.<p>ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶೋಪಿಯಾನ್ ಜಿಲ್ಲೆಯ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕೆಚ್ಚೆದೆಯ ಹೋರಾಟವನ್ನು ಪ್ರದರ್ಶಿಸಿ, ಹುತಾತ್ಮರಾಗಿದ್ದರು.</p>.<p>ಹುತಾತ್ಮರಾಗುವ ಮುನ್ನ ಅಸಾಧಾರಣ ಹೋರಾಟ ನಡೆಸಿದ್ದ ’ವಾನಿಗೆ ಸೇನಾ ಮೆಡಲ್‘ಅನ್ನೂ ನೀಡಿ ಗೌರವಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>