<p><strong>ಕೋಲ್ಕತ್ತ (ಪಿಟಿಐ):</strong> ರಾಜ್ಯ ಸರ್ಕಾರ ನಡೆಸುವ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿಯಾಗಬೇಕು ಎಂಬ ಮೂರು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಲು ನಿರಾಕರಿಸಿದ್ದಾರೆ. ಈ ಮುರು ಮಸೂದೆಗಳನ್ನು ಪಶ್ಚಿಮ ಬಂಗಾಳ ಸರ್ಕಾರ ವಿಧಾನಸಭೆ ಅಂಗೀಕರಿಸಿತ್ತು.</p>.<p>‘ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರೇ ವಿಶ್ವವಿದ್ಯಾಲಯಗಳಿಗೆ ಕುಲಪತಿಯಾಗಿ ಮುಂದುವರಿಯಲಿದ್ದಾರೆ’ ಎಂದು ಲೋಕ ಭವನ ಸೋಮವಾರ ತಿಳಿಸಿದೆ. ವಿಶ್ವವಿದ್ಯಾಲಯಗಳ ಆಡಳಿತದ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತೀವ್ರ ಜಗಳ ಉಂಟಾದ ಕಾರಣ ಈ ಮಸೂದೆಗಳನ್ನು ಮಂಡಿಸಲಾಗಿತ್ತು.</p>.<p>ಪಶ್ಚಿಮ ಬಂಗಾಳ (ತಿದ್ದುಪಡಿ) ಮಸೂದೆ 2022, ಆಲಿಯಾ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ 2022 ಮತ್ತು ಆರೋಗ್ಯ ವಿಜ್ಞಾನಗಳ ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ 2022– ಈ ಮೂರು ಮಸೂದೆಗಳನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗಾಗಿ 2024ರಲ್ಲಿ ಕಳುಹಿಸಿದ್ದರು. 2022ರಲ್ಲಿ ಜಗದೀಪ್ ಧನಕರ್ ಅವರು ಇಲ್ಲಿನ ರಾಜ್ಯಪಾಲರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ):</strong> ರಾಜ್ಯ ಸರ್ಕಾರ ನಡೆಸುವ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿಯಾಗಬೇಕು ಎಂಬ ಮೂರು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಲು ನಿರಾಕರಿಸಿದ್ದಾರೆ. ಈ ಮುರು ಮಸೂದೆಗಳನ್ನು ಪಶ್ಚಿಮ ಬಂಗಾಳ ಸರ್ಕಾರ ವಿಧಾನಸಭೆ ಅಂಗೀಕರಿಸಿತ್ತು.</p>.<p>‘ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರೇ ವಿಶ್ವವಿದ್ಯಾಲಯಗಳಿಗೆ ಕುಲಪತಿಯಾಗಿ ಮುಂದುವರಿಯಲಿದ್ದಾರೆ’ ಎಂದು ಲೋಕ ಭವನ ಸೋಮವಾರ ತಿಳಿಸಿದೆ. ವಿಶ್ವವಿದ್ಯಾಲಯಗಳ ಆಡಳಿತದ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತೀವ್ರ ಜಗಳ ಉಂಟಾದ ಕಾರಣ ಈ ಮಸೂದೆಗಳನ್ನು ಮಂಡಿಸಲಾಗಿತ್ತು.</p>.<p>ಪಶ್ಚಿಮ ಬಂಗಾಳ (ತಿದ್ದುಪಡಿ) ಮಸೂದೆ 2022, ಆಲಿಯಾ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ 2022 ಮತ್ತು ಆರೋಗ್ಯ ವಿಜ್ಞಾನಗಳ ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ 2022– ಈ ಮೂರು ಮಸೂದೆಗಳನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗಾಗಿ 2024ರಲ್ಲಿ ಕಳುಹಿಸಿದ್ದರು. 2022ರಲ್ಲಿ ಜಗದೀಪ್ ಧನಕರ್ ಅವರು ಇಲ್ಲಿನ ರಾಜ್ಯಪಾಲರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>