<p><strong>ದರ್ಭಾಂಗ/ಮೋತಿಹಾರಿ(ಬಿಹಾರ):</strong> ಬಿಹಾರದಲ್ಲಿ ಜಂಗಲ್ ರಾಜ್ ಆಡಳಿತ ಮತ್ತೆ ಬರದಂತೆ ತಡೆಯಲು ಇವಿಎಂನಲ್ಲಿ ಕಮಲದ ಚಿಹ್ನೆಯಿರುವ ಬಟನ್ ಅನ್ನು ಒತ್ತಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.</p><p>ಇಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, ಆರ್ಜೆಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>‘15 ವರ್ಷಗಳ ಲಾಲೂ–ರಾಬ್ರಿ ‘ಜಂಗಲ್ ರಾಜ್’ ಆಳ್ವಿಕೆಯಲ್ಲಿ ಬಿಹಾರವನ್ನು ಸಂಪೂರ್ಣವಾಗಿ ನಾಶಗೊಳಿಸಲಾಯಿತು. ಜಂಗಲ್ ರಾಜ್ ಮತ್ತೆ ಬರದಂತೆ ತಡೆಯಲು ಕಮಲದ ಚಿಹ್ನೆಗೆ ಮತ ಹಾಕಬೇಕಿದೆ’ ಎಂದು ಅವರು ಹೇಳಿದ್ದಾರೆ.</p><p>‘ನವೆಂಬರ್ 6ರ ಮತದಾನ ದಿನದಂದು ನೀವು ಕಮಲದ ಚಿಹ್ನೆಗೆ ಮತ ಹಾಕದೆ ತಪ್ಪು ಮಾಡಿದರೆ, ಮತ್ತೆ ಬಿಹಾರದಲ್ಲಿ ಕೊಲೆ, ಲೂಟಿ, ಅಪಹರಣ, ಸುಲಿಗೆ ಸಾಮಾನ್ಯ ಸಂಗತಿಗಳಾಗುತ್ತವೆ’ ಎಂದು ಎಚ್ಚರಿಸಿದ್ದಾರೆ.</p><p>ಮುಂದುವರಿದು, ‘'ಜೀವಿಕಾ ದೀದಿ’ ಯೋಜನೆಯಡಿ ನೀಡಲಾಗುತ್ತಿದ್ದ ₹10 ಸಾವಿರ ಹಿಂಪಡೆಯುವಂತೆ ಕೋರಿ ಚುನಾವಣಾ ಆಯೋಗಕ್ಕೆ ಆರ್ಜೆಡಿ ದೂರು ನೀಡಿದೆ. ಸ್ವಸಹಾಯ ಗುಂಪುಗಳಿಗೆ ವರ್ಗಾಯಿಸಲಾದ ಹಣವನ್ನು ಲಾಲೂ ಅವರ ಮೂರು ತಲೆಮಾರುಗಳು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.</p><p>‘ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಮಾನಿಸಿದ ಆರ್ಜೆಡಿ–ಕಾಂಗ್ರೆಸ್ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ನಿರ್ಗಮನದ ದ್ವಾರವನ್ನು ತೋರಿಸುವ ಮೂಲಕ ಬಿಹಾರದ ಜನರು ಸೇಡು ತೀರಿಸಿಕೊಳ್ಳಲಿದ್ದಾರೆ’ ಎಂದಿದ್ದಾರೆ.</p><p>ಇನ್ನು, ‘ಎನ್ಡಿಎ ಅಧಿಕಾರಕ್ಕೆ ಬಂದರೆ ಸುಮಾರು ₹26 ಕೋಟಿ ವೆಚ್ಚದಲ್ಲಿ ಮಿಥಿಲಾಂಚಲ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗುತ್ತದೆ. ಇದಕ್ಕೆ ಕೋಶಿ ನದಿ ನೀರನ್ನು ಬಳಸಿಕೊಳ್ಳಲಾಗುವುದು. ಈ ಭಾಗದಲ್ಲಿ ಪ್ರವಾಹವಾಗುವುದನ್ನು ತಡೆಗಟ್ಟಲಾಗುವುದು. ಕೋಶಿ ಅಲ್ಲದೇ ಗಂಗಾ, ಗಂಡಕ್ ನದಿಗಳ ನೀರನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.</p><p>‘ರಾಜ್ಯದಲ್ಲಿ ಎನ್ಡಿಎ ಅಧಿಕಾರವನ್ನು ಉಳಿಸಿಕೊಂಡರೆ, ಚಿಕಿತ್ಸೆಗಾಗಿ ಮಿಥಿಲಾ, ಕೋಶಿ ಮತ್ತು ತಿರ್ಹತ್ನ ಜನರು ಪಟ್ನಾ ಅಥವಾ ದೆಹಲಿಗೆ ಹೋಗುವ ಅಗತ್ಯವಿಲ್ಲ. ಅವರಿಗೆ ಏಮ್ಸ್-ದರ್ಭಂಗಾದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳು ಒದಗಿಸಲಾಗುತ್ತದೆ’ ಎಂದು ಭರವಸೆ ನೀಡಿದ್ದಾರೆ.</p><p>ಅಲ್ಲದೇ, ಪ್ರತಿ ಜಿಲ್ಲೆಗೆ ಒಂದು ಎಂಜಿನಿಯರಿಂಗ್ ಮತ್ತು ಒಂದು ಮೆಡಿಕಲ್ ಕಾಲೇಜು ಸ್ಥಾಪಿಸುವುದಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದರ್ಭಾಂಗ/ಮೋತಿಹಾರಿ(ಬಿಹಾರ):</strong> ಬಿಹಾರದಲ್ಲಿ ಜಂಗಲ್ ರಾಜ್ ಆಡಳಿತ ಮತ್ತೆ ಬರದಂತೆ ತಡೆಯಲು ಇವಿಎಂನಲ್ಲಿ ಕಮಲದ ಚಿಹ್ನೆಯಿರುವ ಬಟನ್ ಅನ್ನು ಒತ್ತಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.</p><p>ಇಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, ಆರ್ಜೆಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>‘15 ವರ್ಷಗಳ ಲಾಲೂ–ರಾಬ್ರಿ ‘ಜಂಗಲ್ ರಾಜ್’ ಆಳ್ವಿಕೆಯಲ್ಲಿ ಬಿಹಾರವನ್ನು ಸಂಪೂರ್ಣವಾಗಿ ನಾಶಗೊಳಿಸಲಾಯಿತು. ಜಂಗಲ್ ರಾಜ್ ಮತ್ತೆ ಬರದಂತೆ ತಡೆಯಲು ಕಮಲದ ಚಿಹ್ನೆಗೆ ಮತ ಹಾಕಬೇಕಿದೆ’ ಎಂದು ಅವರು ಹೇಳಿದ್ದಾರೆ.</p><p>‘ನವೆಂಬರ್ 6ರ ಮತದಾನ ದಿನದಂದು ನೀವು ಕಮಲದ ಚಿಹ್ನೆಗೆ ಮತ ಹಾಕದೆ ತಪ್ಪು ಮಾಡಿದರೆ, ಮತ್ತೆ ಬಿಹಾರದಲ್ಲಿ ಕೊಲೆ, ಲೂಟಿ, ಅಪಹರಣ, ಸುಲಿಗೆ ಸಾಮಾನ್ಯ ಸಂಗತಿಗಳಾಗುತ್ತವೆ’ ಎಂದು ಎಚ್ಚರಿಸಿದ್ದಾರೆ.</p><p>ಮುಂದುವರಿದು, ‘'ಜೀವಿಕಾ ದೀದಿ’ ಯೋಜನೆಯಡಿ ನೀಡಲಾಗುತ್ತಿದ್ದ ₹10 ಸಾವಿರ ಹಿಂಪಡೆಯುವಂತೆ ಕೋರಿ ಚುನಾವಣಾ ಆಯೋಗಕ್ಕೆ ಆರ್ಜೆಡಿ ದೂರು ನೀಡಿದೆ. ಸ್ವಸಹಾಯ ಗುಂಪುಗಳಿಗೆ ವರ್ಗಾಯಿಸಲಾದ ಹಣವನ್ನು ಲಾಲೂ ಅವರ ಮೂರು ತಲೆಮಾರುಗಳು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.</p><p>‘ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಮಾನಿಸಿದ ಆರ್ಜೆಡಿ–ಕಾಂಗ್ರೆಸ್ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ನಿರ್ಗಮನದ ದ್ವಾರವನ್ನು ತೋರಿಸುವ ಮೂಲಕ ಬಿಹಾರದ ಜನರು ಸೇಡು ತೀರಿಸಿಕೊಳ್ಳಲಿದ್ದಾರೆ’ ಎಂದಿದ್ದಾರೆ.</p><p>ಇನ್ನು, ‘ಎನ್ಡಿಎ ಅಧಿಕಾರಕ್ಕೆ ಬಂದರೆ ಸುಮಾರು ₹26 ಕೋಟಿ ವೆಚ್ಚದಲ್ಲಿ ಮಿಥಿಲಾಂಚಲ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗುತ್ತದೆ. ಇದಕ್ಕೆ ಕೋಶಿ ನದಿ ನೀರನ್ನು ಬಳಸಿಕೊಳ್ಳಲಾಗುವುದು. ಈ ಭಾಗದಲ್ಲಿ ಪ್ರವಾಹವಾಗುವುದನ್ನು ತಡೆಗಟ್ಟಲಾಗುವುದು. ಕೋಶಿ ಅಲ್ಲದೇ ಗಂಗಾ, ಗಂಡಕ್ ನದಿಗಳ ನೀರನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.</p><p>‘ರಾಜ್ಯದಲ್ಲಿ ಎನ್ಡಿಎ ಅಧಿಕಾರವನ್ನು ಉಳಿಸಿಕೊಂಡರೆ, ಚಿಕಿತ್ಸೆಗಾಗಿ ಮಿಥಿಲಾ, ಕೋಶಿ ಮತ್ತು ತಿರ್ಹತ್ನ ಜನರು ಪಟ್ನಾ ಅಥವಾ ದೆಹಲಿಗೆ ಹೋಗುವ ಅಗತ್ಯವಿಲ್ಲ. ಅವರಿಗೆ ಏಮ್ಸ್-ದರ್ಭಂಗಾದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳು ಒದಗಿಸಲಾಗುತ್ತದೆ’ ಎಂದು ಭರವಸೆ ನೀಡಿದ್ದಾರೆ.</p><p>ಅಲ್ಲದೇ, ಪ್ರತಿ ಜಿಲ್ಲೆಗೆ ಒಂದು ಎಂಜಿನಿಯರಿಂಗ್ ಮತ್ತು ಒಂದು ಮೆಡಿಕಲ್ ಕಾಲೇಜು ಸ್ಥಾಪಿಸುವುದಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>