<p><strong>ಲಖನೌ:</strong> ರಾಜ್ಯದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳನ್ನು ತಡೆಯಲು ಗೋಸಾಗಾಣಿಕೆಗೆ ಪರವಾನಗಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಉತ್ತರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ.</p>.<p>‘ಗೋಸೇವಾ ಆಯೋಗ’ದ ಸಭೆಯಲ್ಲಿ ಸೋಮವಾರ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ರಾಜ್ಯದೊಳಗೆ ಅಥವಾ ರಾಜ್ಯದಿಂದ ಹೊರಗೆ ಗೋವುಗಳನ್ನು ಸಾಗಾಣಿಕೆ ಮಾಡುವವರಿಗೆ ಗೋಸೇವಾ ಆಯೋಗವೇ ಪರವಾನಗಿ ನೀಡಬೇಕು’ ಎಂದರು.</p>.<p>‘ಪರವಾನಗಿ ಪಡೆದು ಗೋವುಗಳನ್ನು ಸಾಗಾಟ ಮಾಡುವವರಿಗೆ ಸುರಕ್ಷತೆಯ ಖಾತರಿಯನ್ನು ಸಹ ಆಯೋಗ ನೀಡಬೇಕು. ಇಂಥ ಕ್ರಮದಿಂದ ರಾಜ್ಯದಲ್ಲಿ ಗುಂಪು ಹಲ್ಲೆ ನಡೆಯುವುದನ್ನು ತಡೆಯಬಹುದು’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಗೋ ಸಾಕಾಣಿಕೆ ಮಾಡುವವರಿಗೆ ಮೇವು ಹಾಗೂ ಇತರ ಅಗತ್ಯ ವಸ್ತುಗಳನ್ನು ಖರೀದಿಸಲು, ತಾವು ಸಾಕಿದ ಒಂದು ಹಸುವಿಗೆ ದಿನವೊಂದಕ್ಕೆ ₹ 30ರಂತೆ ಆರ್ಥಿಕ ನೆರವು ನೀಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಬೇಕು. ವಾಣಿಜ್ಯ ಉದ್ದೇಶಕ್ಕೆ ಗೋವುಗಳನ್ನು ಸಾಕುವವರಿಗೆ ಈ ಹಣ ನೀಡಬಾರದು’ ಎಂದು ಸೂಚಿಸಿದರು.</p>.<p>ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನೇಕ ವಧಾಕೇಂದ್ರಗಳನ್ನು ಮುಚ್ಚಿದ್ದರಿಂದ ಮತ್ತು ಗೋ ಸಾಗಾಣಿಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರ ಪರಿಣಾಮವಾಗಿ ಉತ್ತರಪ್ರದೇಶದಲ್ಲಿ ಬೀಡಾಡಿ ದನಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅನೇಕ ಕಡೆಗಳಲ್ಲಿ ಬೀಡಾಡಿ ಹಸುಗಳು ರೈತರಿಗೆ ಸಮಸ್ಯೆ ಉಂಟುಮಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ರಾಜ್ಯದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳನ್ನು ತಡೆಯಲು ಗೋಸಾಗಾಣಿಕೆಗೆ ಪರವಾನಗಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಉತ್ತರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ.</p>.<p>‘ಗೋಸೇವಾ ಆಯೋಗ’ದ ಸಭೆಯಲ್ಲಿ ಸೋಮವಾರ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ರಾಜ್ಯದೊಳಗೆ ಅಥವಾ ರಾಜ್ಯದಿಂದ ಹೊರಗೆ ಗೋವುಗಳನ್ನು ಸಾಗಾಣಿಕೆ ಮಾಡುವವರಿಗೆ ಗೋಸೇವಾ ಆಯೋಗವೇ ಪರವಾನಗಿ ನೀಡಬೇಕು’ ಎಂದರು.</p>.<p>‘ಪರವಾನಗಿ ಪಡೆದು ಗೋವುಗಳನ್ನು ಸಾಗಾಟ ಮಾಡುವವರಿಗೆ ಸುರಕ್ಷತೆಯ ಖಾತರಿಯನ್ನು ಸಹ ಆಯೋಗ ನೀಡಬೇಕು. ಇಂಥ ಕ್ರಮದಿಂದ ರಾಜ್ಯದಲ್ಲಿ ಗುಂಪು ಹಲ್ಲೆ ನಡೆಯುವುದನ್ನು ತಡೆಯಬಹುದು’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಗೋ ಸಾಕಾಣಿಕೆ ಮಾಡುವವರಿಗೆ ಮೇವು ಹಾಗೂ ಇತರ ಅಗತ್ಯ ವಸ್ತುಗಳನ್ನು ಖರೀದಿಸಲು, ತಾವು ಸಾಕಿದ ಒಂದು ಹಸುವಿಗೆ ದಿನವೊಂದಕ್ಕೆ ₹ 30ರಂತೆ ಆರ್ಥಿಕ ನೆರವು ನೀಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಬೇಕು. ವಾಣಿಜ್ಯ ಉದ್ದೇಶಕ್ಕೆ ಗೋವುಗಳನ್ನು ಸಾಕುವವರಿಗೆ ಈ ಹಣ ನೀಡಬಾರದು’ ಎಂದು ಸೂಚಿಸಿದರು.</p>.<p>ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನೇಕ ವಧಾಕೇಂದ್ರಗಳನ್ನು ಮುಚ್ಚಿದ್ದರಿಂದ ಮತ್ತು ಗೋ ಸಾಗಾಣಿಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರ ಪರಿಣಾಮವಾಗಿ ಉತ್ತರಪ್ರದೇಶದಲ್ಲಿ ಬೀಡಾಡಿ ದನಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅನೇಕ ಕಡೆಗಳಲ್ಲಿ ಬೀಡಾಡಿ ಹಸುಗಳು ರೈತರಿಗೆ ಸಮಸ್ಯೆ ಉಂಟುಮಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>