<p class="bodytext"><strong>ಲಖನೌ (ಪಿಟಿಐ)</strong>: ‘ದೇಶದ ಮಹಾನ್ ಯೋಧರು ಮತ್ತು ನಾಯಕರನ್ನು ಗೌರವಿಸದ ಹಿಂದಿನ ಸರ್ಕಾರಗಳ ತಪ್ಪುಗಳನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ’ ಎಂದು ಪ್ರದಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.</p>.<p class="bodytext">ಉತ್ತರಪ್ರದೇಶದ ಬಹ್ರೇಚ್ನಲ್ಲಿ ಶ್ರಾವಸ್ತಿಯ ಪರಾಕ್ರಮಿ ರಾಜ ಸುಹೆಲ್ದೇವ್ ಅವರ ಪ್ರತಿಮೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿಅವರು ಮಾತನಾಡಿದರು.</p>.<p class="bodytext">‘ನಾಯಕರಾದ ನೇತಾಜಿ ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಬಿ.ಆರ್.ಅಂಬೇಡ್ಕರ್ ಅವರಿಗೂ ಸಲ್ಲಬೇಕಾದ ಗೌರವವನ್ನು ಹಿಂದಿನ ಸರ್ಕಾರಗಳು ನೀಡಿಲ್ಲ. ಆದರೆ ನಮ್ಮ ಸರ್ಕಾರ ಆ ತಪ್ಪುಗಳನ್ನೂ ಸರಿಪಡಿಸುತ್ತಿದೆ’ ಎಂದು ಹೇಳಿದರು.</p>.<p class="bodytext">ರಾಜ ಸುಹೆಲ್ದೇವ್ ಅವರ 4.20 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣವನ್ನೂ ಒಳಗೊಂಡಿರುವ ಯೋಜನೆಯು ಕೆಫೆಟೇರಿಯಾ, ಅತಿಥಿ ಗೃಹ ನಿರ್ಮಾಣ ಮತ್ತು ಮಕ್ಕಳ ಉದ್ಯಾನ ಸೇರಿದಂತೆ ವಿವಿಧ ಪ್ರವಾಸಿ ಸೌಲಭ್ಯಗಳನ್ನು ಒಳಗೊಂಡಿದೆ.</p>.<p class="bodytext">ಇದೇ ವೇಳೆ ಪ್ರಧಾನಿ ಅವರು ಸುಹೆಲ್ದೇವ್ ಅವರ ಹೆಸರಿನ ವೈದ್ಯಕೀಯ ಕಾಲೇಜನ್ನೂ ಉದ್ಘಾಟಿಸಿದರು.</p>.<p class="bodytext">ಕೋವಿಡ್ –19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿಯ ಹಾದಿಯಲ್ಲಿ ನಡೆಸಲು ಉತ್ತರ ಪ್ರದೇಶ ಸರ್ಕಾರ ಉತ್ತಮ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು.</p>.<p class="bodytext">ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಲಖನೌ (ಪಿಟಿಐ)</strong>: ‘ದೇಶದ ಮಹಾನ್ ಯೋಧರು ಮತ್ತು ನಾಯಕರನ್ನು ಗೌರವಿಸದ ಹಿಂದಿನ ಸರ್ಕಾರಗಳ ತಪ್ಪುಗಳನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ’ ಎಂದು ಪ್ರದಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.</p>.<p class="bodytext">ಉತ್ತರಪ್ರದೇಶದ ಬಹ್ರೇಚ್ನಲ್ಲಿ ಶ್ರಾವಸ್ತಿಯ ಪರಾಕ್ರಮಿ ರಾಜ ಸುಹೆಲ್ದೇವ್ ಅವರ ಪ್ರತಿಮೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿಅವರು ಮಾತನಾಡಿದರು.</p>.<p class="bodytext">‘ನಾಯಕರಾದ ನೇತಾಜಿ ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಬಿ.ಆರ್.ಅಂಬೇಡ್ಕರ್ ಅವರಿಗೂ ಸಲ್ಲಬೇಕಾದ ಗೌರವವನ್ನು ಹಿಂದಿನ ಸರ್ಕಾರಗಳು ನೀಡಿಲ್ಲ. ಆದರೆ ನಮ್ಮ ಸರ್ಕಾರ ಆ ತಪ್ಪುಗಳನ್ನೂ ಸರಿಪಡಿಸುತ್ತಿದೆ’ ಎಂದು ಹೇಳಿದರು.</p>.<p class="bodytext">ರಾಜ ಸುಹೆಲ್ದೇವ್ ಅವರ 4.20 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣವನ್ನೂ ಒಳಗೊಂಡಿರುವ ಯೋಜನೆಯು ಕೆಫೆಟೇರಿಯಾ, ಅತಿಥಿ ಗೃಹ ನಿರ್ಮಾಣ ಮತ್ತು ಮಕ್ಕಳ ಉದ್ಯಾನ ಸೇರಿದಂತೆ ವಿವಿಧ ಪ್ರವಾಸಿ ಸೌಲಭ್ಯಗಳನ್ನು ಒಳಗೊಂಡಿದೆ.</p>.<p class="bodytext">ಇದೇ ವೇಳೆ ಪ್ರಧಾನಿ ಅವರು ಸುಹೆಲ್ದೇವ್ ಅವರ ಹೆಸರಿನ ವೈದ್ಯಕೀಯ ಕಾಲೇಜನ್ನೂ ಉದ್ಘಾಟಿಸಿದರು.</p>.<p class="bodytext">ಕೋವಿಡ್ –19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಮತ್ತು ರಾಜ್ಯವನ್ನು ಅಭಿವೃದ್ಧಿಯ ಹಾದಿಯಲ್ಲಿ ನಡೆಸಲು ಉತ್ತರ ಪ್ರದೇಶ ಸರ್ಕಾರ ಉತ್ತಮ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು.</p>.<p class="bodytext">ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>