<p><strong>ನವದೆಹಲಿ</strong>: ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.<br /><br />ತಮ್ಮ ರಾಜ್ಯಸಭೆಯ ಸದಸ್ಯತ್ವದ ಅವಧಿ ಮುಗಿಯುವುದಕ್ಕೂ ಒಂದು ದಿನ ಮೊದಲು ಬುಧವಾರ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು.</p>.<p>ರಾಷ್ಟ್ರಪತಿ ಭವನದ ಪ್ರಕಟಣೆ ಪ್ರಕಾರ, ಪ್ರಧಾನಿ ಮೋದಿಯವರ ಸೂಚನೆ ಮೇರೆಗೆ ಕೇಂದ್ರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರಿಗೆ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ಮತ್ತೊಬ್ಬ, ಕ್ಯಾಬಿನೆಟ್ ದರ್ಜೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಅವರಿಗೆ ಹೆಚ್ಚುವರಿಯಾಗಿ ಉಕ್ಕು ಖಾತೆಯ ಹೊಣೆ ನೀಡಲಾಗಿದೆ.</p>.<p><a href="https://www.prajavani.net/india-news/naqvi-rcp-singh-resign-from-union-cabinet-951929.html" itemprop="url">ಸಚಿವ ಸ್ಥಾನ ತೊರೆದ ನಖ್ವಿ, ಆರ್ಸಿಪಿ ಸಿಂಗ್: ಬಿಜೆಪಿಯಲ್ಲಿ ಮುಸ್ಲಿಂ ಸಂಸದರಿಲ್ಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.<br /><br />ತಮ್ಮ ರಾಜ್ಯಸಭೆಯ ಸದಸ್ಯತ್ವದ ಅವಧಿ ಮುಗಿಯುವುದಕ್ಕೂ ಒಂದು ದಿನ ಮೊದಲು ಬುಧವಾರ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು.</p>.<p>ರಾಷ್ಟ್ರಪತಿ ಭವನದ ಪ್ರಕಟಣೆ ಪ್ರಕಾರ, ಪ್ರಧಾನಿ ಮೋದಿಯವರ ಸೂಚನೆ ಮೇರೆಗೆ ಕೇಂದ್ರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರಿಗೆ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ಮತ್ತೊಬ್ಬ, ಕ್ಯಾಬಿನೆಟ್ ದರ್ಜೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಅವರಿಗೆ ಹೆಚ್ಚುವರಿಯಾಗಿ ಉಕ್ಕು ಖಾತೆಯ ಹೊಣೆ ನೀಡಲಾಗಿದೆ.</p>.<p><a href="https://www.prajavani.net/india-news/naqvi-rcp-singh-resign-from-union-cabinet-951929.html" itemprop="url">ಸಚಿವ ಸ್ಥಾನ ತೊರೆದ ನಖ್ವಿ, ಆರ್ಸಿಪಿ ಸಿಂಗ್: ಬಿಜೆಪಿಯಲ್ಲಿ ಮುಸ್ಲಿಂ ಸಂಸದರಿಲ್ಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>