‘ಆಹ್ವಾನಿತ ಗಣ್ಯರ ಗೌರವಾರ್ಥ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಮುಯಿಜು ಪಾಲ್ಗೊಂಡಿದ್ದರು. ಈ ವೇಳೆ ಉಭಯ ನಾಯಕರು ಭಾರತ ಮತ್ತು ಮಾಲ್ದೀವ್ಸ್ ನಡುವಿನ ಸಂಬಂಧ ವೃದ್ಧಿಯ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುರ್ಮು ಅವರು ಮಾಲ್ದೀವ್ಸ್ನ ಜನತೆ ಮತ್ತು ಇಲ್ಲಿನ ಹೊಸ ಸರ್ಕಾರಕ್ಕೆ ಶುಭ ಹಾರೈಸಿದರು’ ಎಂದು ಪ್ರಕಟಣೆ ತಿಳಿಸಿದೆ.