<p><strong>ಹೈದರಬಾದ್ :</strong> ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಇದೇ ಏಪ್ರಿಲ್ 8ರಂದು ಹೈದರಾಬಾದ್ಗೆ ಭೇಟಿ ನೀಡಲಿದ್ದಾರೆ.</p>.<p>ಕೇಂದ್ರ ಸರ್ಕಾರ ಸುಮಾರು ₹11,300 ಕೋಟಿ ವೆಚ್ಚದ ಯೋಜನೆಗಳನ್ನು ಹೈದರಾಬಾದ್ನಲ್ಲಿ ಜಾರಿಗೊಳಿಸಿದೆ. ಸಿಕಂದರಬಾದ್–ತಿರುಪತಿ ನಡುವೆ ವಂದೇ ಭಾರತ್ ರೈಲು ವ್ಯವಸ್ಥೆ, ಬಿಬಿನಗರದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಹಾಗೂ ತೆಲಂಗಾಣ–ಆಂಧ್ರದ ನಡುವೆ ರಾಷ್ಟ್ರೀಯ ಹೆದ್ದಾರಿ ಹೀಗೆ ಹಲವು ಪ್ರಮುಖ ಯೋಜನೆಗಳನ್ನು ಹೈದರಾಬಾದ್ನಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಎಲ್ಲ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆಗೆ ಪ್ರಧಾನಿ ಹೈದರಬಾದ್ಗೆ ಭೇಟಿ ನೀಡಲಿದ್ಧಾರೆ ಎಂದು ಪಿಟಿಐ ವರದಿ ಮಾಡಿದೆ.</p>.<p>ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್–ತಿರುಪತಿ ನಡುವೆ ವಂದೇ ಭಾರತ್ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಗೆ ಸುಮಾರು ₹720 ಕೋಟಿ ಕೇಂದ್ರ ಸರ್ಕಾರ ವ್ಯಯಿಸಿತ್ತು.ಏಪ್ರಿಲ್ 8ರಂದ ಈ ರೈಲು ಯೋಜನೆಗೆ ಪ್ರಧಾನಿಯಿಂದ ಚಾಲನೆ ದೊರೆಯಲಿದೆ. ಇದೇ ವೇಳೆ 13 ಹೊಸ ಮಲ್ಟಿ–ಮಾಡೆಲ್ ಟ್ರಾನ್ಸ್ಪೋರ್ಟ್ ಸರ್ವೀಸ್ ಸೇವೆಗಳಿಗೂ ಚಾಲನೆ ನೀಡಲಿದ್ದಾರೆ.</p>.<p>ಹೈದರಾಬಾದ್ನ ಬಿಬಿನಗರದಲ್ಲಿ ಸುಮಾರು ₹1350 ಕೋಟಿ ವೆಚ್ಚದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಯೋಜಿಸಿದ್ದು,ಈ ಯೋಜನೆಯ ಶಂಕು ಸ್ಥಾಪನೆಯನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ. ಇದರ ಜೊತೆಗೆ ₹7,850 ಕೋಟಿ ವೆಚ್ಚದಲ್ಲಿ ತೆಲಂಗಾಣ–ಆಂಧ್ರಪ್ರದೇಶದ ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಯೋಜನೆಗೂ ಶಂಕು ಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ಧಾರೆ.</p>.<p>ಹೈದರಾಬಾದ್ ಭೇಟಿ ನಂತರ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಭೇಟಿ ಮಾಡಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಬಾದ್ :</strong> ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಇದೇ ಏಪ್ರಿಲ್ 8ರಂದು ಹೈದರಾಬಾದ್ಗೆ ಭೇಟಿ ನೀಡಲಿದ್ದಾರೆ.</p>.<p>ಕೇಂದ್ರ ಸರ್ಕಾರ ಸುಮಾರು ₹11,300 ಕೋಟಿ ವೆಚ್ಚದ ಯೋಜನೆಗಳನ್ನು ಹೈದರಾಬಾದ್ನಲ್ಲಿ ಜಾರಿಗೊಳಿಸಿದೆ. ಸಿಕಂದರಬಾದ್–ತಿರುಪತಿ ನಡುವೆ ವಂದೇ ಭಾರತ್ ರೈಲು ವ್ಯವಸ್ಥೆ, ಬಿಬಿನಗರದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಹಾಗೂ ತೆಲಂಗಾಣ–ಆಂಧ್ರದ ನಡುವೆ ರಾಷ್ಟ್ರೀಯ ಹೆದ್ದಾರಿ ಹೀಗೆ ಹಲವು ಪ್ರಮುಖ ಯೋಜನೆಗಳನ್ನು ಹೈದರಾಬಾದ್ನಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಎಲ್ಲ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆಗೆ ಪ್ರಧಾನಿ ಹೈದರಬಾದ್ಗೆ ಭೇಟಿ ನೀಡಲಿದ್ಧಾರೆ ಎಂದು ಪಿಟಿಐ ವರದಿ ಮಾಡಿದೆ.</p>.<p>ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್–ತಿರುಪತಿ ನಡುವೆ ವಂದೇ ಭಾರತ್ ರೈಲು ಯೋಜನೆಯನ್ನು ಮೂರು ತಿಂಗಳ ಅಲ್ಪಾವಧಿಯಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಗೆ ಸುಮಾರು ₹720 ಕೋಟಿ ಕೇಂದ್ರ ಸರ್ಕಾರ ವ್ಯಯಿಸಿತ್ತು.ಏಪ್ರಿಲ್ 8ರಂದ ಈ ರೈಲು ಯೋಜನೆಗೆ ಪ್ರಧಾನಿಯಿಂದ ಚಾಲನೆ ದೊರೆಯಲಿದೆ. ಇದೇ ವೇಳೆ 13 ಹೊಸ ಮಲ್ಟಿ–ಮಾಡೆಲ್ ಟ್ರಾನ್ಸ್ಪೋರ್ಟ್ ಸರ್ವೀಸ್ ಸೇವೆಗಳಿಗೂ ಚಾಲನೆ ನೀಡಲಿದ್ದಾರೆ.</p>.<p>ಹೈದರಾಬಾದ್ನ ಬಿಬಿನಗರದಲ್ಲಿ ಸುಮಾರು ₹1350 ಕೋಟಿ ವೆಚ್ಚದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಯೋಜಿಸಿದ್ದು,ಈ ಯೋಜನೆಯ ಶಂಕು ಸ್ಥಾಪನೆಯನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ. ಇದರ ಜೊತೆಗೆ ₹7,850 ಕೋಟಿ ವೆಚ್ಚದಲ್ಲಿ ತೆಲಂಗಾಣ–ಆಂಧ್ರಪ್ರದೇಶದ ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಯೋಜನೆಗೂ ಶಂಕು ಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ಧಾರೆ.</p>.<p>ಹೈದರಾಬಾದ್ ಭೇಟಿ ನಂತರ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಭೇಟಿ ಮಾಡಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>