<p><strong>ನವದೆಹಲಿ:</strong> ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಮುಕ್ತಾಯವಾಗುವವರೆಗೆ ಮುಂದಿನ ಮೂರು ವರ್ಷ ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.</p>.<p>ಈ ವರ್ಷದ ಕೊನೆಯ ರೇಡಿಯೊ ಭಾಷಣ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, ‘ಸ್ಥಳೀಯ ಉತ್ಪನ್ನಗಳನ್ನು ಇತರರೂ ಬಳಸುವಂತೆ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p><strong>ಬರಲಿರುವ ದಶಕಗಳು ಯುವಕರದ್ದು:</strong> ಮುಂದಿನ ದಶಕಗಳು ಯುವಕರಿಗೆ ಸೇರಿವೆ ಎಂದು ಮೋದಿ ಹೇಳಿದರು.ಈ ವ್ಯವಸ್ಥೆಯಲ್ಲಿ ನಂಬುಗೆ ಇರಿಸಿಕೊಂಡಿದ್ದಕ್ಕಾಗಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಹಾಗೊಂದು ವೇಳೆ ವ್ಯವಸ್ಥೆ ಸೂಕ್ತವಾಗಿ ಪ್ರತಿಕ್ರಿಯೆ ತೋರದೇ ಇದ್ದಾಗ ಅದನ್ನು ಪ್ರಶ್ನೆ ಕೂಡ ಮಾಡುವವರೇ ಈ ಯುವಜನತೆ ಎಂದರು.</p>.<p>ಯುವಕರು ಅರಾಜಕತೆಯನ್ನು ದ್ವೇಷಿಸುತ್ತಾರೆ. ಜಾತಿವಾದ, ಸ್ವಜನಪಕ್ಷಪಾತ ಮತ್ತು ಒಬ್ಬರ ಪರವಾದ ಒಲವನ್ನು ಇಷ್ಟಪಡುವುದಿಲ್ಲ ಎಂದು ಮೋದಿ ವಿಶ್ಲೇಷಿಸಿದರು.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ದೇಶದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವಿರೋಧ ವ್ಯಕ್ತವಾಗಿದ್ದರ ಹಿನ್ನೆಲೆಯಲ್ಲಿ ಪ್ರಧಾನಿ ಹೀಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಮುಕ್ತಾಯವಾಗುವವರೆಗೆ ಮುಂದಿನ ಮೂರು ವರ್ಷ ದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.</p>.<p>ಈ ವರ್ಷದ ಕೊನೆಯ ರೇಡಿಯೊ ಭಾಷಣ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, ‘ಸ್ಥಳೀಯ ಉತ್ಪನ್ನಗಳನ್ನು ಇತರರೂ ಬಳಸುವಂತೆ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p><strong>ಬರಲಿರುವ ದಶಕಗಳು ಯುವಕರದ್ದು:</strong> ಮುಂದಿನ ದಶಕಗಳು ಯುವಕರಿಗೆ ಸೇರಿವೆ ಎಂದು ಮೋದಿ ಹೇಳಿದರು.ಈ ವ್ಯವಸ್ಥೆಯಲ್ಲಿ ನಂಬುಗೆ ಇರಿಸಿಕೊಂಡಿದ್ದಕ್ಕಾಗಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಹಾಗೊಂದು ವೇಳೆ ವ್ಯವಸ್ಥೆ ಸೂಕ್ತವಾಗಿ ಪ್ರತಿಕ್ರಿಯೆ ತೋರದೇ ಇದ್ದಾಗ ಅದನ್ನು ಪ್ರಶ್ನೆ ಕೂಡ ಮಾಡುವವರೇ ಈ ಯುವಜನತೆ ಎಂದರು.</p>.<p>ಯುವಕರು ಅರಾಜಕತೆಯನ್ನು ದ್ವೇಷಿಸುತ್ತಾರೆ. ಜಾತಿವಾದ, ಸ್ವಜನಪಕ್ಷಪಾತ ಮತ್ತು ಒಬ್ಬರ ಪರವಾದ ಒಲವನ್ನು ಇಷ್ಟಪಡುವುದಿಲ್ಲ ಎಂದು ಮೋದಿ ವಿಶ್ಲೇಷಿಸಿದರು.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ದೇಶದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವಿರೋಧ ವ್ಯಕ್ತವಾಗಿದ್ದರ ಹಿನ್ನೆಲೆಯಲ್ಲಿ ಪ್ರಧಾನಿ ಹೀಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>