ಇದಕ್ಕೂ ಮುನ್ನ, ಸಾಮಾಜಿಕ ಮಾಧ್ಯಮ ‘ಎಕ್ಸ್’(ಟ್ವಿಟರ್)ನಲ್ಲಿ ರಕ್ಷಾ ಬಂಧನದ ಶುಭಾಶಯ ತಿಳಿಸಿರುವ ಮೋದಿ, ‘ಸಹೋದರ–ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಗಟ್ಟಿಗೊಳಿಸುವ ಈ ಹಬ್ಬವು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಈ ಹಬ್ಬವು ಸಾಮರಸ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲಿ ಎಂದು ಆಶಿಸುತ್ತೇನೆ. ಪ್ರತಿಯೊಬ್ಬರಿಗೂ ರಕ್ಷಾ ಬಂಧನದ ಶುಭಾಶಯಗಳು’ ಎಂದು ಹೇಳಿದರು.
ಪ್ರತಿವರ್ಷದಂತೆ ಈ ಬಾರಿಯೂ ರಕ್ಷಾ ಬಂಧನಕ್ಕೆ ಪ್ರಧಾನಿ ಮೋದಿಯವರಿಗೆ ಪಾಕಿಸ್ತಾನ ಸಹೋದರಿ ಖಮರ್ ಮೊಹ್ಸಿನ್ ಶೇಖ್ ದೆಹಲಿಗೆ ಆಗಮಿಸಿ ರಾಖಿ ಕಟ್ಟುವ ಸಾಧ್ಯತೆ ಇದೆ.
‘ಕೋವಿಡ್ ಕಾರಣದಿಂದ ಕಳೆದ 2–3 ವರ್ಷಗಳಿಂದ ಮೋದಿ ಅವರನ್ನು ಭೇಟಿಯಾಗಿ ರಾಖಿ ಕಟ್ಟಲು ಸಾಧ್ಯವಾಗಲಿಲ್ಲ. ಈ ವರ್ಷ ನಾನು ನನ್ನ ಕೈಯಾರೆ ತಯಾರಿಸಿದ ರಾಖಿ ಹಾಗೂ ಕೃಷಿ ಸಂಬಂಧಿ ಪುಸ್ತಕದೊಂದಿಗೆ ದೆಹಲಿಗೆ ತೆರಳಲಿದ್ದೇನೆ’ ಎಂದು ಖಮರ್ ಈ ಹಿಂದೆ ಹೇಳಿದ್ದರು.