<p><strong>ನವದೆಹಲಿ</strong>: ಸೆರೆವಾಸ ಅನುಭವಿಸುತ್ತಿರುವ ಕೈದಿಗಳು ಕೂಡ ಸಾಂವಿಧಾನಿಕ ಹಕ್ಕುಗಳನ್ನು ಹೊಂದಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯ ಜೀವಿಸುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.</p><p>ದಕ್ಷಿಣ ಏಷ್ಯಾದಲ್ಲಿಯೇ ದೊಡ್ಡ ಬಂದಿಖಾನೆ ಎನಿಸಿರುವ ತಿಹಾರ್ ಜೈಲಿನಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಎಂಬ ಆರೋಪಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಹೈಕೋರ್ಟ್ ಈ ಮಾತು ಹೇಳಿದೆ.</p><p>ತಿಹಾರ್ ಜೈಲಿನಲ್ಲಿರುವ ಕುಡಿಯುವ ನೀರು, ನೈರ್ಮಲ್ಯ, ಶೌಚಾಲಯಗಳ ನಿರ್ವಹಣೆ ಸೇರಿದಂತೆ ಮೂಲಸೌಕರ್ಯಗಳ ಕುರಿತು ಕೂಲಂಕಷ ಪರಿಶೀಲನೆ ನಡೆಸಲು ನಾಲ್ವರು ವಕೀಲರನ್ನು ಒಳಗೊಂಡ ಸಮಿತಿಯನ್ನು ಹೈಕೋರ್ಟ್ ರಚಿಸಿದೆ.</p><p>ಡಾ.ಅಮಿತ್ ಜಾರ್ಜ್, ಸಂತೋಷಕುಮಾರ್ ತ್ರಿಪಾಠಿ, ನಂದಿತಾ ರಾವ್ ಹಾಗೂ ತುಷಾರ್ ಸನ್ನು ಅವರು ಈ ಸಮಿತಿಯಲ್ಲಿದ್ದಾರೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಿರುವ ಹೈಕೋರ್ಟ್, ಅಷ್ಟರೊಳಗಾಗಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ.</p><p>ಮುಖ್ಯನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಂಜೀವ್ ನರುಲಾ ಅವರಿದ್ದ ನ್ಯಾಯಪೀಠ ಆಗಸ್ಟ್ 23ರಂದು ಈ ಸಂಬಂಧ ಆದೇಶ ಹೊರಡಿಸಿದೆ. ದೆಹಲಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ (ಡಿಎಚ್ಸಿಎಲ್ಎಸ್ಸಿ) ಈ ಪಿಐಎಲ್ ಸಲ್ಲಿಸಿತ್ತು.</p><p>ನಾಲ್ವರು ಸದಸ್ಯರ ಸಮಿತಿಗೆ ಎಲ್ಲ ಮಾಹಿತಿ ಹಾಗೂ ನೆರವು ಒದಗಿಸುವಂತೆ ಮಹಾ ನಿರ್ದೇಶಕರಿಗೆ (ಜೈಲುಗಳು) ನ್ಯಾಯಾಲಯ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸೆರೆವಾಸ ಅನುಭವಿಸುತ್ತಿರುವ ಕೈದಿಗಳು ಕೂಡ ಸಾಂವಿಧಾನಿಕ ಹಕ್ಕುಗಳನ್ನು ಹೊಂದಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯ ಜೀವಿಸುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.</p><p>ದಕ್ಷಿಣ ಏಷ್ಯಾದಲ್ಲಿಯೇ ದೊಡ್ಡ ಬಂದಿಖಾನೆ ಎನಿಸಿರುವ ತಿಹಾರ್ ಜೈಲಿನಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಎಂಬ ಆರೋಪಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಹೈಕೋರ್ಟ್ ಈ ಮಾತು ಹೇಳಿದೆ.</p><p>ತಿಹಾರ್ ಜೈಲಿನಲ್ಲಿರುವ ಕುಡಿಯುವ ನೀರು, ನೈರ್ಮಲ್ಯ, ಶೌಚಾಲಯಗಳ ನಿರ್ವಹಣೆ ಸೇರಿದಂತೆ ಮೂಲಸೌಕರ್ಯಗಳ ಕುರಿತು ಕೂಲಂಕಷ ಪರಿಶೀಲನೆ ನಡೆಸಲು ನಾಲ್ವರು ವಕೀಲರನ್ನು ಒಳಗೊಂಡ ಸಮಿತಿಯನ್ನು ಹೈಕೋರ್ಟ್ ರಚಿಸಿದೆ.</p><p>ಡಾ.ಅಮಿತ್ ಜಾರ್ಜ್, ಸಂತೋಷಕುಮಾರ್ ತ್ರಿಪಾಠಿ, ನಂದಿತಾ ರಾವ್ ಹಾಗೂ ತುಷಾರ್ ಸನ್ನು ಅವರು ಈ ಸಮಿತಿಯಲ್ಲಿದ್ದಾರೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಿರುವ ಹೈಕೋರ್ಟ್, ಅಷ್ಟರೊಳಗಾಗಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ.</p><p>ಮುಖ್ಯನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಂಜೀವ್ ನರುಲಾ ಅವರಿದ್ದ ನ್ಯಾಯಪೀಠ ಆಗಸ್ಟ್ 23ರಂದು ಈ ಸಂಬಂಧ ಆದೇಶ ಹೊರಡಿಸಿದೆ. ದೆಹಲಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ (ಡಿಎಚ್ಸಿಎಲ್ಎಸ್ಸಿ) ಈ ಪಿಐಎಲ್ ಸಲ್ಲಿಸಿತ್ತು.</p><p>ನಾಲ್ವರು ಸದಸ್ಯರ ಸಮಿತಿಗೆ ಎಲ್ಲ ಮಾಹಿತಿ ಹಾಗೂ ನೆರವು ಒದಗಿಸುವಂತೆ ಮಹಾ ನಿರ್ದೇಶಕರಿಗೆ (ಜೈಲುಗಳು) ನ್ಯಾಯಾಲಯ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>