<p><strong>ಮುಂಬೈ:</strong> ‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಮ್ಮ ಪ್ರಧಾನಿಯನ್ನೂ ಅಪಹರಿಸುವರೇ?’ ಎಂದು ಕಾಂಗ್ರೆಸ್ ನಾಯಕ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರು ಪ್ರಶ್ನಿಸಿದ್ದು, ಇದೀಗ ವಿವಾದಕ್ಕೀಡಾಗಿದೆ.</p>.<p>ವೆನೆಜುವೆಲಾ –ಅಮೆರಿಕ ಸಂಘರ್ಷದ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಭಾರತ ಮತ್ತು ಅಮೆರಿಕದ ನಡುವೆ ಸುಂಕದ ವಿಚಾರವಾಗಿ ನಡೆಯುತ್ತಿರುವ ಸಮರದ ಬಗ್ಗೆ ಪೃಥ್ವಿರಾಜ್ ಮಾತನಾಡಿದ್ದಾರೆ.</p>.<p>‘ಶೇಕಡ 50ರ ಸುಂಕ ನೀತಿಯಿಂದಾಗಿ ಭಾರತ–ಅಮೆರಿಕ ನಡುವಿನ ವ್ಯಾಪಾರ ಸಂಬಂಧ ಸ್ಥಗಿತಗೊಳ್ಳಬಹುದು. ನೇರವಾಗಿ ವ್ಯಾಪಾರ–ವಹಿವಾಟು ನಿರ್ಬಂಧಿಸಲಾಗದ ಕಾರಣಕ್ಕೆ ಸುಂಕವನ್ನು ಅಸ್ತ್ರವನ್ನಾಗಿ ಬಳಸಲಾಗುತ್ತಿದೆ’ ಎಂದು ಪೃಥ್ವಿರಾಜ್ ಆರೋಪಿಸಿದ್ದಾರೆ. </p>.<p>ಇದೇ ವೇಳೆ, ‘ನಾವು ಬೇರೆ ಮಾರುಕಟ್ಟೆಗಳನ್ನು ನೋಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಪ್ರಯತ್ನಗಳು ಈಗಾಗಲೇ ಪ್ರಗತಿಯಲ್ಲಿವೆ. ಈಗ ಉಳಿದಿರುವುದು ಮುಂದೇನು? ಎನ್ನುವ ಪ್ರಶ್ನೆ ಮಾತ್ರ. ಈಗ ವೆನೆಜುವೆಲಾದಲ್ಲಿ ಏನಾಗಿದೆಯೋ? ಅದು ಭಾರತದಲ್ಲೂ ಆಗಲಿದೆಯೇ ? ಟ್ರಂಪ್ ಸಾಹೇಬರು ನಮ್ಮ ಪ್ರಧಾನಿಯನ್ನೂ ಅಪಹರಿಸಲಿದ್ದಾರೆಯೇ?’ ಎಂದು ಪೃಥ್ವಿರಾಜ್ ಹೇಳಿದ್ದಾರೆ. </p>.<p>ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಬಿಜೆಪಿ ನಾಯಕರೂ ಪೃಥ್ವಿರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಮ್ಮ ಪ್ರಧಾನಿಯನ್ನೂ ಅಪಹರಿಸುವರೇ?’ ಎಂದು ಕಾಂಗ್ರೆಸ್ ನಾಯಕ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರು ಪ್ರಶ್ನಿಸಿದ್ದು, ಇದೀಗ ವಿವಾದಕ್ಕೀಡಾಗಿದೆ.</p>.<p>ವೆನೆಜುವೆಲಾ –ಅಮೆರಿಕ ಸಂಘರ್ಷದ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಭಾರತ ಮತ್ತು ಅಮೆರಿಕದ ನಡುವೆ ಸುಂಕದ ವಿಚಾರವಾಗಿ ನಡೆಯುತ್ತಿರುವ ಸಮರದ ಬಗ್ಗೆ ಪೃಥ್ವಿರಾಜ್ ಮಾತನಾಡಿದ್ದಾರೆ.</p>.<p>‘ಶೇಕಡ 50ರ ಸುಂಕ ನೀತಿಯಿಂದಾಗಿ ಭಾರತ–ಅಮೆರಿಕ ನಡುವಿನ ವ್ಯಾಪಾರ ಸಂಬಂಧ ಸ್ಥಗಿತಗೊಳ್ಳಬಹುದು. ನೇರವಾಗಿ ವ್ಯಾಪಾರ–ವಹಿವಾಟು ನಿರ್ಬಂಧಿಸಲಾಗದ ಕಾರಣಕ್ಕೆ ಸುಂಕವನ್ನು ಅಸ್ತ್ರವನ್ನಾಗಿ ಬಳಸಲಾಗುತ್ತಿದೆ’ ಎಂದು ಪೃಥ್ವಿರಾಜ್ ಆರೋಪಿಸಿದ್ದಾರೆ. </p>.<p>ಇದೇ ವೇಳೆ, ‘ನಾವು ಬೇರೆ ಮಾರುಕಟ್ಟೆಗಳನ್ನು ನೋಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಪ್ರಯತ್ನಗಳು ಈಗಾಗಲೇ ಪ್ರಗತಿಯಲ್ಲಿವೆ. ಈಗ ಉಳಿದಿರುವುದು ಮುಂದೇನು? ಎನ್ನುವ ಪ್ರಶ್ನೆ ಮಾತ್ರ. ಈಗ ವೆನೆಜುವೆಲಾದಲ್ಲಿ ಏನಾಗಿದೆಯೋ? ಅದು ಭಾರತದಲ್ಲೂ ಆಗಲಿದೆಯೇ ? ಟ್ರಂಪ್ ಸಾಹೇಬರು ನಮ್ಮ ಪ್ರಧಾನಿಯನ್ನೂ ಅಪಹರಿಸಲಿದ್ದಾರೆಯೇ?’ ಎಂದು ಪೃಥ್ವಿರಾಜ್ ಹೇಳಿದ್ದಾರೆ. </p>.<p>ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಬಿಜೆಪಿ ನಾಯಕರೂ ಪೃಥ್ವಿರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>