<p><strong>ನವದೆಹಲಿ</strong>: ಲೋಕಸಭೆಯ ವಿಶೇಷ ಅಧಿವೇಶನದಲ್ಲಿ ಬಿಜೆಪಿ ಸಂಸದ ರಮೇಶ್ ಬಿಧೂಢಿ ಅವರು ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ದಾಖಲಾಗಿರುವ ದೂರುಗಳ ಬಗ್ಗೆ ಹಕ್ಕುಬಾದ್ಯತಾ ಸಮಿತಿಯು ಅ.10ರಂದು ವಿಚಾರಣೆ ಆರಂಭಿಸಲಿದೆ.</p>.<p>ಮುಂದಿನ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಬಿಧೂಢಿ ಅವರಿಗೆ ಸಮಿತಿ ಸಮನ್ಸ್ ಜಾರಿ ಮಾಡಿದೆ. </p>.<p>ಸೆ.19ರಂದು ನಡೆದ ವಿಶೇಷ ಅಧಿವೇಶನ ಸಂದರ್ಭದಲ್ಲಿ ‘ಚಂದ್ರಯಾನ– 3 ಯೋಜನೆ’ ಕುರಿತ ಚರ್ಚೆ ವೇಳೆ ಬಿಧೂಢಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಬಿಧೂಢಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು. ಕೋಮುವಾದಿ ಸ್ವರೂಪದ ಹೇಳಿಕೆಯನ್ನು ಕಡತದಿಂದ ತೆಗೆದು ಹಾಕಿದ್ದರು.</p>.<p>ಬಿಧೂಢಿ ಹೇಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದನದ ಒಳಗೇ ವಿಷಾದ ವ್ಯಕ್ತಪಡಿಸಿದ್ದರು.</p><p>ಬಿಜೆಪಿ ಸಹ ಬಿಢೂಢಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ರಾಜಸ್ಥಾನದ ಟೊಂಕ್ ಜಿಲ್ಲೆಯಲ್ಲಿ ಚುನಾವಣೆಯ ಜವಾಬ್ದಾರಿಯನ್ನೂ ನೀಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಯ ವಿಶೇಷ ಅಧಿವೇಶನದಲ್ಲಿ ಬಿಜೆಪಿ ಸಂಸದ ರಮೇಶ್ ಬಿಧೂಢಿ ಅವರು ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ದಾಖಲಾಗಿರುವ ದೂರುಗಳ ಬಗ್ಗೆ ಹಕ್ಕುಬಾದ್ಯತಾ ಸಮಿತಿಯು ಅ.10ರಂದು ವಿಚಾರಣೆ ಆರಂಭಿಸಲಿದೆ.</p>.<p>ಮುಂದಿನ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಬಿಧೂಢಿ ಅವರಿಗೆ ಸಮಿತಿ ಸಮನ್ಸ್ ಜಾರಿ ಮಾಡಿದೆ. </p>.<p>ಸೆ.19ರಂದು ನಡೆದ ವಿಶೇಷ ಅಧಿವೇಶನ ಸಂದರ್ಭದಲ್ಲಿ ‘ಚಂದ್ರಯಾನ– 3 ಯೋಜನೆ’ ಕುರಿತ ಚರ್ಚೆ ವೇಳೆ ಬಿಧೂಢಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಬಿಧೂಢಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು. ಕೋಮುವಾದಿ ಸ್ವರೂಪದ ಹೇಳಿಕೆಯನ್ನು ಕಡತದಿಂದ ತೆಗೆದು ಹಾಕಿದ್ದರು.</p>.<p>ಬಿಧೂಢಿ ಹೇಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದನದ ಒಳಗೇ ವಿಷಾದ ವ್ಯಕ್ತಪಡಿಸಿದ್ದರು.</p><p>ಬಿಜೆಪಿ ಸಹ ಬಿಢೂಢಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ರಾಜಸ್ಥಾನದ ಟೊಂಕ್ ಜಿಲ್ಲೆಯಲ್ಲಿ ಚುನಾವಣೆಯ ಜವಾಬ್ದಾರಿಯನ್ನೂ ನೀಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>