<p><strong>ಗುವಾಹಟಿ</strong>: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದರು.</p>.<p>‘ಸಂಪನ್ಮೂಲಭರಿತವಾದ ರಾಜ್ಯದಲ್ಲಿ ಜನರಿಗೆ ಏನೂ ಇಲ್ಲ, ಆದರೆ ಕುಟುಂಬವೊಂದು ಮಾತ್ರ ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>ಸರಣಿ ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಜನರನ್ನು ಬೆದರಿಸಿ ಆಡಳಿತ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಶರ್ಮಾ ಅವರು ಹೇಡಿಗಳು’ ಎಂದು ಟೀಕಿಸಿದರು.</p>.<p>‘ಅಸ್ಸಾಂನಲ್ಲಿ ಒಂದು ಕುಟುಂಬವು ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ. ಗಣಿ, ಭೂಮಿ ಮತ್ತಿತರ ಸಂಪನ್ಮೂಲಗಳನ್ನು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಿದೆ’ ಎಂದು ದೂರಿದರು.</p>.<p>‘ಡಬಲ್ ಎಂಜಿನ್ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಅದು ಡಬಲ್ ಗುಲಾಮಿ ಸರ್ಕಾರ. ಅಮೆರಿಕದ ಸೇವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಳುಗಿದ್ದಾರೆ, ಹಿಮಂತ ಬಿಸ್ವಾ ಶರ್ಮಾ ಅವರು ಮೋದಿ ಸೇವೆಯಲ್ಲಿ ತೊಡಗಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದರು.</p>.<p>‘ಸಂಪನ್ಮೂಲಭರಿತವಾದ ರಾಜ್ಯದಲ್ಲಿ ಜನರಿಗೆ ಏನೂ ಇಲ್ಲ, ಆದರೆ ಕುಟುಂಬವೊಂದು ಮಾತ್ರ ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ’ ಎಂದು ಆರೋಪಿಸಿದರು.</p>.<p>ಸರಣಿ ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಜನರನ್ನು ಬೆದರಿಸಿ ಆಡಳಿತ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಶರ್ಮಾ ಅವರು ಹೇಡಿಗಳು’ ಎಂದು ಟೀಕಿಸಿದರು.</p>.<p>‘ಅಸ್ಸಾಂನಲ್ಲಿ ಒಂದು ಕುಟುಂಬವು ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ. ಗಣಿ, ಭೂಮಿ ಮತ್ತಿತರ ಸಂಪನ್ಮೂಲಗಳನ್ನು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಿದೆ’ ಎಂದು ದೂರಿದರು.</p>.<p>‘ಡಬಲ್ ಎಂಜಿನ್ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಅದು ಡಬಲ್ ಗುಲಾಮಿ ಸರ್ಕಾರ. ಅಮೆರಿಕದ ಸೇವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಳುಗಿದ್ದಾರೆ, ಹಿಮಂತ ಬಿಸ್ವಾ ಶರ್ಮಾ ಅವರು ಮೋದಿ ಸೇವೆಯಲ್ಲಿ ತೊಡಗಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>