<p class="title"><strong>ಲಖನೌ:</strong> ಕಾಂಗ್ರೆಸ್ ಪಕ್ಷವುಪ್ರಿಯಾಂಕಾ ಗಾಂಧಿ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ಎದುರಿಸಬೇಕು. ಅವರೊಂದು ಬಿರುಗಾಳಿಯಂತೆ, ಚುನಾವಣೆಯಲ್ಲಿ ಎದುರಾಳಿಗಳನ್ನು ದೂಳಿಪಟ ಮಾಡಲು ಸಹಾಯಕ ಎಂದು ರಾಜ್ಯದ ಪಕ್ಷದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.</p>.<p class="title">ಪ್ರಿಯಾಂಕಾ ಅವರು ಉತ್ತರ ಪ್ರದೇಶದ ಅನೇಕ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದ್ದು ಇದರಿಂದ ಯೋಗಿ ಆದಿತ್ಯನಾಥ್ ಸರ್ಕಾರ ಮುಖಭಂಗ ಅನುಭವಿಸುತ್ತಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p class="title">ಬಹುಮತದೊಂದಿಗೆ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದ ಲಲ್ಲು ಗೆಲ್ಲುವ ಸ್ಥಾನಗಳ ಸಂಖ್ಯೆ ಹೇಳಲು ನಿರಾಕರಿಸಿದರು.</p>.<p class="title">2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಜಯಿಸಿತ್ತು.</p>.<p class="bodytext">‘ನಾವು ಸಂಘಟನಾ ಶಕ್ತಿಯನ್ನು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದೇವೆ. ಉತ್ತರ ಪ್ರದೇಶದಲ್ಲಿ ನಾವೇನೂ ಅಲ್ಲ ಎಂಬ ಭಾವನೆ ಬದಲಾಗಿದೆ. ಇಲ್ಲಿ ಪ್ರಿಯಾಂಕಾ ಗಾಂಧಿ ಎಂಬ ಬಿರುಗಾಳಿಯೊಂದು ಬೀಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನುಗ್ಗಲು ಇದು ಸಹಾಯಕವಾಗಿದೆ’ ಎಂದು ಲಲ್ಲು ಹೇಳಿದರು.</p>.<p class="bodytext">ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಏಕೆ ಘೋಷಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷದ ರಾಷ್ಟ್ರೀಯ ನಾಯಕತ್ವ ನಿರ್ಧರಿಸುತ್ತದೆ. ಪ್ರಿಯಾಂಕಾ ಅವರ ಉಸ್ತುವಾರಿಯಲ್ಲಿ ಚುನಾವಣೆ ಎದುರಿಸಲಾಗುವುದು’ ಎಂದು ಹೇಳಿದರು.</p>.<p class="bodytext">‘ಪೂರ್ಣ ಬಹುಮತದೊಂದಿಗೆ ನಾವು ರಾಜ್ಯದಲ್ಲಿ ಸರ್ಕಾರ ರಚಿಸಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="bodytext">‘ಕಾಂಗ್ರೆಸ್ ಒಂದು ಸಿದ್ಧಾಂತವನ್ನು ಹೊಂದಿದ್ದು ಹೋರಾಟದ ಪ್ರತಿರೂಪವಾಗಿದೆ. ಇದು ಮಾತ್ರ ಬಿಜೆಪಿಗೆ ಪ್ರತಿಸ್ಪರ್ಧೆ ನೀಡಬಲ್ಲದು’ ಎಂದು ಲಲ್ಲು ಹೇಳಿದರು.</p>.<p class="bodytext">ಚುನಾವಣಾ ಮೈತ್ರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಲಲ್ಲು, ‘ನಾವು ಗ್ರಾಮಗಳು, ಬಡ ಜನರು, ರೈತರು ಮತ್ತು ಸಾಮಾನ್ಯ ಜನರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ಕಾಂಗ್ರೆಸ್ ಪಕ್ಷವುಪ್ರಿಯಾಂಕಾ ಗಾಂಧಿ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ಎದುರಿಸಬೇಕು. ಅವರೊಂದು ಬಿರುಗಾಳಿಯಂತೆ, ಚುನಾವಣೆಯಲ್ಲಿ ಎದುರಾಳಿಗಳನ್ನು ದೂಳಿಪಟ ಮಾಡಲು ಸಹಾಯಕ ಎಂದು ರಾಜ್ಯದ ಪಕ್ಷದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.</p>.<p class="title">ಪ್ರಿಯಾಂಕಾ ಅವರು ಉತ್ತರ ಪ್ರದೇಶದ ಅನೇಕ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದ್ದು ಇದರಿಂದ ಯೋಗಿ ಆದಿತ್ಯನಾಥ್ ಸರ್ಕಾರ ಮುಖಭಂಗ ಅನುಭವಿಸುತ್ತಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p class="title">ಬಹುಮತದೊಂದಿಗೆ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದ ಲಲ್ಲು ಗೆಲ್ಲುವ ಸ್ಥಾನಗಳ ಸಂಖ್ಯೆ ಹೇಳಲು ನಿರಾಕರಿಸಿದರು.</p>.<p class="title">2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಜಯಿಸಿತ್ತು.</p>.<p class="bodytext">‘ನಾವು ಸಂಘಟನಾ ಶಕ್ತಿಯನ್ನು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದೇವೆ. ಉತ್ತರ ಪ್ರದೇಶದಲ್ಲಿ ನಾವೇನೂ ಅಲ್ಲ ಎಂಬ ಭಾವನೆ ಬದಲಾಗಿದೆ. ಇಲ್ಲಿ ಪ್ರಿಯಾಂಕಾ ಗಾಂಧಿ ಎಂಬ ಬಿರುಗಾಳಿಯೊಂದು ಬೀಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನುಗ್ಗಲು ಇದು ಸಹಾಯಕವಾಗಿದೆ’ ಎಂದು ಲಲ್ಲು ಹೇಳಿದರು.</p>.<p class="bodytext">ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಏಕೆ ಘೋಷಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷದ ರಾಷ್ಟ್ರೀಯ ನಾಯಕತ್ವ ನಿರ್ಧರಿಸುತ್ತದೆ. ಪ್ರಿಯಾಂಕಾ ಅವರ ಉಸ್ತುವಾರಿಯಲ್ಲಿ ಚುನಾವಣೆ ಎದುರಿಸಲಾಗುವುದು’ ಎಂದು ಹೇಳಿದರು.</p>.<p class="bodytext">‘ಪೂರ್ಣ ಬಹುಮತದೊಂದಿಗೆ ನಾವು ರಾಜ್ಯದಲ್ಲಿ ಸರ್ಕಾರ ರಚಿಸಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="bodytext">‘ಕಾಂಗ್ರೆಸ್ ಒಂದು ಸಿದ್ಧಾಂತವನ್ನು ಹೊಂದಿದ್ದು ಹೋರಾಟದ ಪ್ರತಿರೂಪವಾಗಿದೆ. ಇದು ಮಾತ್ರ ಬಿಜೆಪಿಗೆ ಪ್ರತಿಸ್ಪರ್ಧೆ ನೀಡಬಲ್ಲದು’ ಎಂದು ಲಲ್ಲು ಹೇಳಿದರು.</p>.<p class="bodytext">ಚುನಾವಣಾ ಮೈತ್ರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಲಲ್ಲು, ‘ನಾವು ಗ್ರಾಮಗಳು, ಬಡ ಜನರು, ರೈತರು ಮತ್ತು ಸಾಮಾನ್ಯ ಜನರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>