ಹಿಮಾಚಲ ಪ್ರದೇಶದಲ್ಲಿ ಸುರಿದ ಭಾರಿ ಮಳೆ ಹಾಗೂ ಭೂಕುಸಿತದಿಂದಾಗಿ ಭಾರಿ ನಾಶ-ನಷ್ಟ ಸಂಭವಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿಯಾಗಲಿದ್ದಾರೆ.
ಹಿಮಾಚಲ ಪ್ರದೇಶದ ನಿಗುಲ್ಸಾರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ವಾರ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಕಿನ್ನೌರ್ ಜಿಲ್ಲೆ ಮತ್ತು ಶಿಮ್ಲಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು.
ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಸುಮಾರು 150–300 ಮೀಟರ್ವರೆಗಿನ ವಿಸ್ತಾರದ ರಸ್ತೆಯೂ ಭಾರಿ ಹಾನಿಗೊಳಗಾಗಿದ್ದರಿಂದ, ಕಿನ್ನೌರ್ನಿಂದ ಬಂದಿದ್ದ ಸೇಬು ತುಂಬಿದ ಟ್ರಕ್ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿದ್ದವು.