<p>Priyanka Gandhi Vadra joins Rahul in 'Voter Adhikar Yatra' in Bihar's Supaul</p><p>ಸುಪೌಲ್(ಬಿಹಾರ): ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಮತದಾರರ ಅಧಿಕಾರ ಯಾತ್ರೆಗೆ ಬಿಹಾರದ ಸುಪೌಲ್ನಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿಕೊಂಡಿದ್ದಾರೆ.</p> <p>ಪ್ರಿಯಾಂಕಾ, ರಾಹುಲ್ ಜೊತೆಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಇಂಡಿಯಾ ಬಣದ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಅಪಾರ ಜನಸ್ತೋಮಕ್ಕೆ ಕೈಬೀಸುತ್ತಾ ಯಾತ್ರೆ ನಡೆಸಿದ್ದಾರೆ. ಒಂದು ದಿನದ ವಿರಾಮದ ಬಳಿಕ ಮಂಗಳವಾರ ಯಾತ್ರೆ ಪುನರಾರಂಭಗೊಂಡಿದೆ.</p><p>ಭಾನುವಾರ ಅರಾರಿಯಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮುಂಬರುವ ವಿಧಾನಸಭಾ ಚುನಾವಣೆಗೆ ಬಿಹಾರದ ಇಂಡಿಯಾ ಬಣದ ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿವೆ. ಫಲಿತಾಂಶಗಳು ಫಲಪ್ರದವಾಗಿರುತ್ತವದೆ ಎಂದು ಪ್ರತಿಪಾದಿಸಿದ್ದರು.</p><p>‘ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಬಣವು ಶೀಘ್ರದಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ನಾವು ಸೈದ್ಧಾಂತಿಕವಾಗಿ ಮತ್ತು ರಾಜಕೀಯವಾಗಿ ಹೊಂದಿಕೊಂಡಿದ್ದೇವೆ. ಪರಸ್ಪರ ಗೌರವಿಸುತ್ತೇವೆ. ಫಲಿತಾಂಶ ಫಲಪ್ರದವಾಗಿರುತ್ತದೆ’ಎಂದು ಗಾಂಧಿ ಹೇಳಿದ್ದರು.</p><p>ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದ ಅವರು, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯು ಬಿಜೆಪಿಗೆ ಸಹಾಯ ಮಾಡಲು ಮತಗಳನ್ನು ಕದಿಯಲು ಚುನಾವಣಾ ಆಯೋಗದ ಸಾಂಸ್ಥಿಕ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.</p><p>ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ, ಇಂಡಿಯಾ ಬಣದ ಎಲ್ಲ ಪಕ್ಷಗಳ ಬೆಂಬಲದೊಂದಿಗೆ 'ಮತದಾರ ಅಧಿಕಾರ ಯಾತ್ರೆ'ಯನ್ನು ಪ್ರಾರಂಭಿಸಿದ್ದಾರೆ.</p><p>ಆಗಸ್ಟ್ 17ರಂದು ಆರಂಭವಾಗಿರುವ ಯಾತ್ರೆ ಸೆಪ್ಟೆಂಬರ್ 1ರಂದು ಪಟ್ನಾದಲ್ಲಿ ಸಮಾರೋಪಗೊಳ್ಳಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>Priyanka Gandhi Vadra joins Rahul in 'Voter Adhikar Yatra' in Bihar's Supaul</p><p>ಸುಪೌಲ್(ಬಿಹಾರ): ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಮತದಾರರ ಅಧಿಕಾರ ಯಾತ್ರೆಗೆ ಬಿಹಾರದ ಸುಪೌಲ್ನಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿಕೊಂಡಿದ್ದಾರೆ.</p> <p>ಪ್ರಿಯಾಂಕಾ, ರಾಹುಲ್ ಜೊತೆಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಇಂಡಿಯಾ ಬಣದ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಅಪಾರ ಜನಸ್ತೋಮಕ್ಕೆ ಕೈಬೀಸುತ್ತಾ ಯಾತ್ರೆ ನಡೆಸಿದ್ದಾರೆ. ಒಂದು ದಿನದ ವಿರಾಮದ ಬಳಿಕ ಮಂಗಳವಾರ ಯಾತ್ರೆ ಪುನರಾರಂಭಗೊಂಡಿದೆ.</p><p>ಭಾನುವಾರ ಅರಾರಿಯಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮುಂಬರುವ ವಿಧಾನಸಭಾ ಚುನಾವಣೆಗೆ ಬಿಹಾರದ ಇಂಡಿಯಾ ಬಣದ ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿವೆ. ಫಲಿತಾಂಶಗಳು ಫಲಪ್ರದವಾಗಿರುತ್ತವದೆ ಎಂದು ಪ್ರತಿಪಾದಿಸಿದ್ದರು.</p><p>‘ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಬಣವು ಶೀಘ್ರದಲ್ಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ನಾವು ಸೈದ್ಧಾಂತಿಕವಾಗಿ ಮತ್ತು ರಾಜಕೀಯವಾಗಿ ಹೊಂದಿಕೊಂಡಿದ್ದೇವೆ. ಪರಸ್ಪರ ಗೌರವಿಸುತ್ತೇವೆ. ಫಲಿತಾಂಶ ಫಲಪ್ರದವಾಗಿರುತ್ತದೆ’ಎಂದು ಗಾಂಧಿ ಹೇಳಿದ್ದರು.</p><p>ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದ ಅವರು, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯು ಬಿಜೆಪಿಗೆ ಸಹಾಯ ಮಾಡಲು ಮತಗಳನ್ನು ಕದಿಯಲು ಚುನಾವಣಾ ಆಯೋಗದ ಸಾಂಸ್ಥಿಕ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.</p><p>ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ, ಇಂಡಿಯಾ ಬಣದ ಎಲ್ಲ ಪಕ್ಷಗಳ ಬೆಂಬಲದೊಂದಿಗೆ 'ಮತದಾರ ಅಧಿಕಾರ ಯಾತ್ರೆ'ಯನ್ನು ಪ್ರಾರಂಭಿಸಿದ್ದಾರೆ.</p><p>ಆಗಸ್ಟ್ 17ರಂದು ಆರಂಭವಾಗಿರುವ ಯಾತ್ರೆ ಸೆಪ್ಟೆಂಬರ್ 1ರಂದು ಪಟ್ನಾದಲ್ಲಿ ಸಮಾರೋಪಗೊಳ್ಳಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>