<p><strong>ನವದೆಹಲಿ:</strong> 'ಸಂಸತ್ತಿನಲ್ಲಿ ಜನ ಸಾಮಾನ್ಯರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ' ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. </p><p>'ವಿರೋಧ ಪಕ್ಷಗಳು ಸಂಸತ್ತಿನಲ್ಲಿ ನಾಟಕವಾಡುತ್ತಿವೆ' ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, 'ಎಸ್ಐಆರ್, ವಾಯು ಮಾಲಿನ್ಯಗಳಂತಹ ತುರ್ತು ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕಿದೆ' ಎಂದು ಒತ್ತಾಯಿಸಿದ್ದಾರೆ. </p><p>'ಇವುಗಳೇ ಸಂಸತ್ತಿನಲ್ಲಿ ಚರ್ಚಿಸಬೇಕಾದ ಸಾರ್ವಜನಿಕ ವಿಷಯಗಳಾಗಿವೆ. ಸಂಸತ್ತು ಇರುವುದು ಏಕೆ? ಅಲ್ಲಿ ನಡೆಯುವುದು ನಾಟಕವಲ್ಲ. ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ನಾಟಕವಲ್ಲ' ಎಂದು ಅವರು ಹೇಳಿದ್ದಾರೆ. </p><p>'ನಾವು ವಾಯು ಮಾಲಿನ್ಯದ ಕುರಿತು ಮಾತನಾಡಿದ್ದೇವೆ. ಈ ವಿಷಯಗಳ ಕುರಿತು ಚರ್ಚಿಸಲು ಅವಕಾಶ ಏಕೆ ನೀಡುತ್ತಿಲ್ಲ' ಎಂದು ಕೇಳಿದ್ದಾರೆ. </p><p>'ವಿರೋಧ ಪಕ್ಷಗಳು ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಹತಾಶೆಯನ್ನು ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ' ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. </p>.ಕಚ್ಚುವವರು ಸಂಸತ್ತಿನಲ್ಲೇ ಇದ್ದಾರೆ: ನಾಯಿ ತೆಗೆದುಕೊಂಡು ಹೋದ ರೇಣುಕಾ ತಿರುಗೇಟು.ವಿಪಕ್ಷಗಳು ಹತಾಶೆ ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ: PM ಮೋದಿ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಸಂಸತ್ತಿನಲ್ಲಿ ಜನ ಸಾಮಾನ್ಯರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ' ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. </p><p>'ವಿರೋಧ ಪಕ್ಷಗಳು ಸಂಸತ್ತಿನಲ್ಲಿ ನಾಟಕವಾಡುತ್ತಿವೆ' ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, 'ಎಸ್ಐಆರ್, ವಾಯು ಮಾಲಿನ್ಯಗಳಂತಹ ತುರ್ತು ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕಿದೆ' ಎಂದು ಒತ್ತಾಯಿಸಿದ್ದಾರೆ. </p><p>'ಇವುಗಳೇ ಸಂಸತ್ತಿನಲ್ಲಿ ಚರ್ಚಿಸಬೇಕಾದ ಸಾರ್ವಜನಿಕ ವಿಷಯಗಳಾಗಿವೆ. ಸಂಸತ್ತು ಇರುವುದು ಏಕೆ? ಅಲ್ಲಿ ನಡೆಯುವುದು ನಾಟಕವಲ್ಲ. ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ನಾಟಕವಲ್ಲ' ಎಂದು ಅವರು ಹೇಳಿದ್ದಾರೆ. </p><p>'ನಾವು ವಾಯು ಮಾಲಿನ್ಯದ ಕುರಿತು ಮಾತನಾಡಿದ್ದೇವೆ. ಈ ವಿಷಯಗಳ ಕುರಿತು ಚರ್ಚಿಸಲು ಅವಕಾಶ ಏಕೆ ನೀಡುತ್ತಿಲ್ಲ' ಎಂದು ಕೇಳಿದ್ದಾರೆ. </p><p>'ವಿರೋಧ ಪಕ್ಷಗಳು ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಹತಾಶೆಯನ್ನು ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ' ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. </p>.ಕಚ್ಚುವವರು ಸಂಸತ್ತಿನಲ್ಲೇ ಇದ್ದಾರೆ: ನಾಯಿ ತೆಗೆದುಕೊಂಡು ಹೋದ ರೇಣುಕಾ ತಿರುಗೇಟು.ವಿಪಕ್ಷಗಳು ಹತಾಶೆ ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ: PM ಮೋದಿ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>