ಸಿದ್ಧಾರ್ಥನಗರ (ಉತ್ತರ ಪ್ರದೇಶ):ಗಣರಾಜ್ಯೋತ್ಸವ ದಿನದಂದುಇಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಶ್ಲಾಘಿಸಿ ಘೋಷಣೆ ಕೂಗಿದ್ದರು. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚಿಸಿದ್ದಾರೆ ಎಂಬ ಆರೋಪಕೇಳಿಬಂದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.