<p><strong>ಸಿದ್ಧಾರ್ಥನಗರ (ಉತ್ತರ ಪ್ರದೇಶ):</strong>ಗಣರಾಜ್ಯೋತ್ಸವ ದಿನದಂದುಇಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಶ್ಲಾಘಿಸಿ ಘೋಷಣೆ ಕೂಗಿದ್ದರು. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚಿಸಿದ್ದಾರೆ ಎಂಬ ಆರೋಪಕೇಳಿಬಂದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.</p>.<p>ಜಿಲ್ಲೆಯ ಸೊಹ್ರಾತ್ಗಡದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮದ ವೇಳೆ ಮಕ್ಕಳು ಘೋಷಣೆಗಳನ್ನು ಕೂಗಿದ್ದರು. ಈ ಸಂದರ್ಭದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಮಕ್ಕಳು ರಾಷ್ಟ್ರಗೀತೆ ಹಾಡಿದ ನಂತರ, ಶಿಕ್ಷಕರ ಸೂಚನೆ ಮೇರೆಗೆ ಪ್ರಧಾನಿ ಮೋದಿ, ಸಿಎಂ ಯೋಗಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಕೂಗಿರುವುದು ವಿಡಿಯೊದಲ್ಲಿದೆ.</p>.<p>ಸದ್ಯ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ಉತ್ತರ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಪಿಎಂ, ಸಿಎಂ ಪರ ಘೋಷಣೆ ಕೂಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.</p>.<p>ʼಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್ ಆದ ಬಳಿಕ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಪ್ರಕರಣದ ತನಿಖೆ ನಡೆಸುವಂತೆಪ್ರಾಥಮಿಕಶಿಕ್ಷಣ ಅಧಿಕಾರಿಗೆ (ಬಿಎಸ್ಎ) ಸೂಚಿಸಿದ್ದೇವೆ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುವುದುʼ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ಧಾರ್ಥನಗರ (ಉತ್ತರ ಪ್ರದೇಶ):</strong>ಗಣರಾಜ್ಯೋತ್ಸವ ದಿನದಂದುಇಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಶ್ಲಾಘಿಸಿ ಘೋಷಣೆ ಕೂಗಿದ್ದರು. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚಿಸಿದ್ದಾರೆ ಎಂಬ ಆರೋಪಕೇಳಿಬಂದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.</p>.<p>ಜಿಲ್ಲೆಯ ಸೊಹ್ರಾತ್ಗಡದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮದ ವೇಳೆ ಮಕ್ಕಳು ಘೋಷಣೆಗಳನ್ನು ಕೂಗಿದ್ದರು. ಈ ಸಂದರ್ಭದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಮಕ್ಕಳು ರಾಷ್ಟ್ರಗೀತೆ ಹಾಡಿದ ನಂತರ, ಶಿಕ್ಷಕರ ಸೂಚನೆ ಮೇರೆಗೆ ಪ್ರಧಾನಿ ಮೋದಿ, ಸಿಎಂ ಯೋಗಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಕೂಗಿರುವುದು ವಿಡಿಯೊದಲ್ಲಿದೆ.</p>.<p>ಸದ್ಯ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ಉತ್ತರ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಪಿಎಂ, ಸಿಎಂ ಪರ ಘೋಷಣೆ ಕೂಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.</p>.<p>ʼಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್ ಆದ ಬಳಿಕ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಪ್ರಕರಣದ ತನಿಖೆ ನಡೆಸುವಂತೆಪ್ರಾಥಮಿಕಶಿಕ್ಷಣ ಅಧಿಕಾರಿಗೆ (ಬಿಎಸ್ಎ) ಸೂಚಿಸಿದ್ದೇವೆ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುವುದುʼ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>