<p class="title"><strong>ಬಲಿಯಾ:</strong>‘ವಂದೇ ಮಾತರಂ’ ಹಾಡುವ ಜೊತೆಗೆ ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಶಿಕ್ಷಿಸಲಾಗಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಇಲ್ಲಿನಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.</p>.<p class="title">ಜಿಎಂಎಎಂ ಅನುದಾನಿತ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ವರದಿಯಾಗಿದ್ದು, ಸಮಾಜ ಕಲ್ಯಾಣ ಸಂಘಟನೆಯ ಸದಸ್ಯರು ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಷಯ ಬಹಿರಂಗಗೊಂಡಿದೆ.</p>.<p class="title">‘ವಂದೇ ಮಾತರಂ ಘೋಷಣೆ ಕೂಗಿದರೆ ಶಿಕ್ಷಿಸಲಾಗುತ್ತದೆ ಎಂಬ ಆರೋಪವನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಒಪ್ಪಿ, ಹೇಳಿಕೆ ನೀಡಿದ್ದಾರೆ. ಅದನ್ನು ವಿಡಿಯೊ ಮಾಡಲಾಗಿದೆ’ ಎಂದು ಸಂಘಟನೆ ನಿರ್ದೇಶಕ ಶಿವಕುಮಾರ್ ಜೈಸ್ವಾಲ್ ತಿಳಿಸಿದ್ದಾರೆ.</p>.<p class="title">‘ಬೆಳಗ್ಗೆಯಪ್ರಾರ್ಥನೆ ತರುವಾಯ ವಿದ್ಯಾರ್ಥಿಯೊಬ್ಬ ‘‘ಭಾರತ್ ಮಾತಾ ಕೀ ಜೈ’’ ಎಂಬ ಘೋಷಣೆ ಕೂಗಿದ ಕಾರಣಕ್ಕೆ ಆತನನ್ನು ಒಂದು ಗಂಟೆ ಬಿಸಿಲಿನಲ್ಲಿ ನಿಲ್ಲಿಸಲಾಯಿತು’ ಎಂದು ಅರ್ಥಶಾಸ್ತ್ರ ಶಿಕ್ಷಕ ಸಂಜಯ್ ಪಾಂಡೆ ಹೇಳಿದ್ದಾರೆ’ ಎಂದು ಅವರು ತಿಳಿಸಿದರು.</p>.<p class="title">‘ಈ ಕುರಿತುಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದೂರು ಸಲ್ಲಿಸಲಾಗಿದ್ದು,ವಿದ್ಯಾರ್ಥಿ, ಶಿಕ್ಷಕರ ಹೇಳಿಕೆಗಳವಿಡಿಯೊ ಲಗತ್ತಿಸಿ ಕಳುಹಿಸಲಾಗಿದೆ’ ಎಂದರು.</p>.<p class="title">‘ಪ್ರಕರಣ ಗಂಭೀರವಾಗಿದ್ದು, ಜಿಲ್ಲಾ ಶಿಕ್ಷಣಾಧಿಕಾರಿನರೇಂದ್ರ ದೇವ್ ಪಾಂಡೆ ಅವರಿಗೆ ಈ ಕುರಿತು ತನಿಖೆ ನಡೆಸುವಂತೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಭವಾನಿ ಸಿಂಗ್ ಖಂಗರಾತ್ ತಿಳಿಸಿದರು.</p>.<p class="title">ಆರೋಪವನ್ನು ನಿರಾಕರಿಸಿರುವ ಪ್ರಾಂಶುಪಾಲ ಮಜೀದ್ ನಸೀರ್, ‘ಸಂಸ್ಥೆಯ ಹೆಸರು ಹಾಳು ಮಾಡುವ ಸಲುವಾಗಿ ಈ ರೀತಿ ಪಿತೂರಿ ನಡೆಸಲಾಗಿದೆ’ ಎಂದಿದ್ದಾರೆ.</p>.<p class="title">ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆಯುಳ್ಳ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬಲಿಯಾ:</strong>‘ವಂದೇ ಮಾತರಂ’ ಹಾಡುವ ಜೊತೆಗೆ ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಶಿಕ್ಷಿಸಲಾಗಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಇಲ್ಲಿನಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.</p>.<p class="title">ಜಿಎಂಎಎಂ ಅನುದಾನಿತ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ವರದಿಯಾಗಿದ್ದು, ಸಮಾಜ ಕಲ್ಯಾಣ ಸಂಘಟನೆಯ ಸದಸ್ಯರು ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಷಯ ಬಹಿರಂಗಗೊಂಡಿದೆ.</p>.<p class="title">‘ವಂದೇ ಮಾತರಂ ಘೋಷಣೆ ಕೂಗಿದರೆ ಶಿಕ್ಷಿಸಲಾಗುತ್ತದೆ ಎಂಬ ಆರೋಪವನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಒಪ್ಪಿ, ಹೇಳಿಕೆ ನೀಡಿದ್ದಾರೆ. ಅದನ್ನು ವಿಡಿಯೊ ಮಾಡಲಾಗಿದೆ’ ಎಂದು ಸಂಘಟನೆ ನಿರ್ದೇಶಕ ಶಿವಕುಮಾರ್ ಜೈಸ್ವಾಲ್ ತಿಳಿಸಿದ್ದಾರೆ.</p>.<p class="title">‘ಬೆಳಗ್ಗೆಯಪ್ರಾರ್ಥನೆ ತರುವಾಯ ವಿದ್ಯಾರ್ಥಿಯೊಬ್ಬ ‘‘ಭಾರತ್ ಮಾತಾ ಕೀ ಜೈ’’ ಎಂಬ ಘೋಷಣೆ ಕೂಗಿದ ಕಾರಣಕ್ಕೆ ಆತನನ್ನು ಒಂದು ಗಂಟೆ ಬಿಸಿಲಿನಲ್ಲಿ ನಿಲ್ಲಿಸಲಾಯಿತು’ ಎಂದು ಅರ್ಥಶಾಸ್ತ್ರ ಶಿಕ್ಷಕ ಸಂಜಯ್ ಪಾಂಡೆ ಹೇಳಿದ್ದಾರೆ’ ಎಂದು ಅವರು ತಿಳಿಸಿದರು.</p>.<p class="title">‘ಈ ಕುರಿತುಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದೂರು ಸಲ್ಲಿಸಲಾಗಿದ್ದು,ವಿದ್ಯಾರ್ಥಿ, ಶಿಕ್ಷಕರ ಹೇಳಿಕೆಗಳವಿಡಿಯೊ ಲಗತ್ತಿಸಿ ಕಳುಹಿಸಲಾಗಿದೆ’ ಎಂದರು.</p>.<p class="title">‘ಪ್ರಕರಣ ಗಂಭೀರವಾಗಿದ್ದು, ಜಿಲ್ಲಾ ಶಿಕ್ಷಣಾಧಿಕಾರಿನರೇಂದ್ರ ದೇವ್ ಪಾಂಡೆ ಅವರಿಗೆ ಈ ಕುರಿತು ತನಿಖೆ ನಡೆಸುವಂತೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಭವಾನಿ ಸಿಂಗ್ ಖಂಗರಾತ್ ತಿಳಿಸಿದರು.</p>.<p class="title">ಆರೋಪವನ್ನು ನಿರಾಕರಿಸಿರುವ ಪ್ರಾಂಶುಪಾಲ ಮಜೀದ್ ನಸೀರ್, ‘ಸಂಸ್ಥೆಯ ಹೆಸರು ಹಾಳು ಮಾಡುವ ಸಲುವಾಗಿ ಈ ರೀತಿ ಪಿತೂರಿ ನಡೆಸಲಾಗಿದೆ’ ಎಂದಿದ್ದಾರೆ.</p>.<p class="title">ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆಯುಳ್ಳ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>