<p><strong>ಲಖನೌ:</strong> ಲೋಕಸಭೆ ಡೆಪ್ಯುಟಿ ಸ್ಪೀಕರ್ ರಮಾದೇವಿ ವಿರುದ್ಧ ಅಸಾಂವಿಧಾನಿಕ ಪದ ಬಳಸಿ ಕೆಂಗಣ್ಣಿಗೆ ಗುರಿಯಾಗಿದ್ದ ಎಸ್ಪಿ ಸಂಸದ ಆಜಂ ಖಾನ್ ಅವರಿಗೆ ತವರು ಜಿಲ್ಲೆ ರಾಂಪುರದಲ್ಲಿ ಮತ್ತೊಂದಿಷ್ಟು ತೊಂದರೆಗಳು ಜೊತೆಯಾಗಿವೆ.</p>.<p>ಆಜಂ ಅವರ ಮೌಲಾನಾ ಮೊಹಮ್ಮದ್ ಅಲಿ ಜೌಹಾರ್ ಖಾಸಗಿ ವಿಶ್ವವಿದ್ಯಾಲಯದ ಮುಖ್ಯದ್ವಾರವನ್ನು ನೆಲಸಮ ಮಾಡುವಂತೆ ರಾಂಪುರ ಉಪವಿಭಾಗ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರ್ದೇಶನ ನೀಡಿದೆ. ಮುಖ್ಯದ್ವಾರ ಇರುವ ಸ್ಥಳವು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಎಂದಿರುವ ಕೋರ್ಟ್, ಅವರಿಗೆ ₹3.27 ಕೋಟಿ ದಂಡವನ್ನೂ ವಿಧಿಸಿದೆ.</p>.<p>ಹಿಂದಿನ ಎಸ್ಪಿ ಸರ್ಕಾರವು ವಿಶ್ವವಿದ್ಯಾಲಯಕ್ಕೆ 7 ಎಕರೆ ಜಮೀನು ಹಸ್ತಾಂತರಿಸಿದ್ದನ್ನು ಈಚೆಗೆ ಕೋರ್ಟ್ ರದ್ದುಪಡಿಸಿತ್ತು. ಈ ಮಧ್ಯೆ ಲೋಕಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಅಜಂಗೆ ಸಂಕಷ್ಟ ತಂದೊಡ್ಡಿದೆ.</p>.<p>ರಾಂಪುರದ ಲಾಲ್ಪುರ ಪ್ರದೇಶದಲ್ಲಿ ಹಳೆಯ ಸೇತುವೆಯನ್ನು ನೆಲಸಮ ಮಾಡಿದ ಸಂಬಂಧ ಆಜಂ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಲೋಕಸಭೆ ಡೆಪ್ಯುಟಿ ಸ್ಪೀಕರ್ ರಮಾದೇವಿ ವಿರುದ್ಧ ಅಸಾಂವಿಧಾನಿಕ ಪದ ಬಳಸಿ ಕೆಂಗಣ್ಣಿಗೆ ಗುರಿಯಾಗಿದ್ದ ಎಸ್ಪಿ ಸಂಸದ ಆಜಂ ಖಾನ್ ಅವರಿಗೆ ತವರು ಜಿಲ್ಲೆ ರಾಂಪುರದಲ್ಲಿ ಮತ್ತೊಂದಿಷ್ಟು ತೊಂದರೆಗಳು ಜೊತೆಯಾಗಿವೆ.</p>.<p>ಆಜಂ ಅವರ ಮೌಲಾನಾ ಮೊಹಮ್ಮದ್ ಅಲಿ ಜೌಹಾರ್ ಖಾಸಗಿ ವಿಶ್ವವಿದ್ಯಾಲಯದ ಮುಖ್ಯದ್ವಾರವನ್ನು ನೆಲಸಮ ಮಾಡುವಂತೆ ರಾಂಪುರ ಉಪವಿಭಾಗ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರ್ದೇಶನ ನೀಡಿದೆ. ಮುಖ್ಯದ್ವಾರ ಇರುವ ಸ್ಥಳವು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಎಂದಿರುವ ಕೋರ್ಟ್, ಅವರಿಗೆ ₹3.27 ಕೋಟಿ ದಂಡವನ್ನೂ ವಿಧಿಸಿದೆ.</p>.<p>ಹಿಂದಿನ ಎಸ್ಪಿ ಸರ್ಕಾರವು ವಿಶ್ವವಿದ್ಯಾಲಯಕ್ಕೆ 7 ಎಕರೆ ಜಮೀನು ಹಸ್ತಾಂತರಿಸಿದ್ದನ್ನು ಈಚೆಗೆ ಕೋರ್ಟ್ ರದ್ದುಪಡಿಸಿತ್ತು. ಈ ಮಧ್ಯೆ ಲೋಕಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಅಜಂಗೆ ಸಂಕಷ್ಟ ತಂದೊಡ್ಡಿದೆ.</p>.<p>ರಾಂಪುರದ ಲಾಲ್ಪುರ ಪ್ರದೇಶದಲ್ಲಿ ಹಳೆಯ ಸೇತುವೆಯನ್ನು ನೆಲಸಮ ಮಾಡಿದ ಸಂಬಂಧ ಆಜಂ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>