ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಮತ್ತು ನೇಪಾಳದ ನಡುವಿನ ಸಮಸ್ಯೆಗೆ ಮಾತುಕತೆ ಮೂಲಕ ಪರಿಹಾರ: ಒಲಿ

Last Updated 6 ನವೆಂಬರ್ 2020, 13:45 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳ ಮತ್ತು ಭಾರತದ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಲಾಗುವುದು ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರು ಹೇಳಿದರು.

ಮೂರು ದಿನಗಳ ನೇಪಾಳ ಪ್ರವಾಸದಲ್ಲಿರುವ ಸೇನಾ ಮುಖ್ಯಸ್ಥ ಜನರಲ್‍ ಎಂ.ಎಂ.ನರವಣೆ ಅವರು ಶುಕ್ರವಾರ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ.

ಸಭೆಯ ಬಳಿಕ ಟ್ವೀಟ್‌ ಮಾಡಿದ ಅವರು,‘ ಭಾರತ ಮತ್ತು ನೇಪಾಳದ ನಡುವಿನ ಸಮಸ್ಯೆ ಮಾತುಕತೆಯ ಮೂಲಕ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

ನರವಣೆ ಅವರು ನೇಪಾಳಿ ಸೇನೆಯ ಪ್ರಧಾನಿ ಕಚೇರಿಗೂ ಭೇಟಿ ನೀಡಿದರು. ಈ ವೇಳೆ ನೇಪಾಳ ಸೇನಾ ಮುಖ್ಯಸ್ಥ ಜನರಲ್‌ ಪೂರ್ಣಾ ಚಂದ್ರ ಥಾಪಾ ಅವರು ಏರ್ಪಡಿಸಿದ್ದ ಔತಣಕೂಟದಲ್ಲೂ ಭಾಗವಹಿಸಿದ್ದರು. ಗುರುವಾರ ಉಭಯ ರಾಷ್ಟ್ರಗಳ ಸೇನಾ ಮುಖ್ಯಸ್ಥರು ದ್ವಿಪಕ್ಷೀಯ ಸೇನಾ ಸಹಕಾರವನ್ನು ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT