<p><strong>ಗುವಾಹಟಿ</strong>: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ದಾಖಲಿಸುವ ವೇಳೆ ಪ್ರತಿಬಂಧಿಸಲಾಗಿರುವ ಸುಮಾರು 27 ಸಾವಿರ ಜನರ ಬಯೋಮೆಟ್ರಿಕ್ಗಳನ್ನು ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನದ ವೇಳೆ ಮುಕ್ತಗೊಳಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರು ಹೇಳಿದ್ದಾರೆ. </p>.<p>ಬಯೋಮೆಟ್ರಿಕ್ ಪ್ರತಿಬಂಧಕ್ಕೆ ಒಳಗಾಗಿರುವ ಆಧಾರ್ ಕಾರ್ಡ್ಗಳನ್ನು ತಡೆಹಿಡಿಯಲಾಗಿರುತ್ತದೆ. ಜೊತೆಗೆ, ಅಂಥವರು ಪಡಿತರ ಚೀಟಿ ಮತ್ತು ಉದ್ಯೋಗ ಪಡೆಯಲೂ ಸಮಸ್ಯೆ ಆಗುತ್ತದೆ ಎಂಬುದನ್ನು ಒಪ್ಪಿಕೊಂಡ ಶರ್ಮಾ ಅವರು, ಸದ್ಯದಲ್ಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದಿದ್ದಾರೆ. </p>.<p>ಅಖಿಲ ಅಸ್ಸಾಂ ವಿದ್ಯಾರ್ಥಿ ಪರಿಷತ್ (ಎಎಎಸ್ಯು) ಮತ್ತು ಸಂಬಂಧಪಟ್ಟ ಇತರರ ಜೊತೆ ಬಯೋಮೆಟ್ರಿಕ್ಗಳ ಪ್ರತಿಬಂಧ ತೆರವುಗೊಳಿಸುವ ಪ್ರಕ್ರಿಯೆ ಕುರಿತು ಚರ್ಚಿಸಲಾಗುತ್ತದೆ. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಈ ಕುರಿತು ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಅವರು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಬರಾಕ್ ಮತ್ತು ಬ್ರಹ್ಮಪುತ್ರ ಕಣಿವೆಯ ಸುಮಾರು 6 ಲಕ್ಷ ಮಂದಿ ಪೌರತ್ವ ಪಡೆಯಲಿದ್ದಾರೆ ಎಂಬ ನಿರೀಕ್ಷೆ ಇದೆ. ಕೆಲ ನಿರ್ದಿಷ್ಟ ವರ್ಗಗಳಿಗೆ ಸೇರಿದ 20 ಲಕ್ಷ ಮಂದಿಗೆ ಪೌರತ್ವ ಸಿಗುವುದಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ದಾಖಲಿಸುವ ವೇಳೆ ಪ್ರತಿಬಂಧಿಸಲಾಗಿರುವ ಸುಮಾರು 27 ಸಾವಿರ ಜನರ ಬಯೋಮೆಟ್ರಿಕ್ಗಳನ್ನು ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನದ ವೇಳೆ ಮುಕ್ತಗೊಳಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರು ಹೇಳಿದ್ದಾರೆ. </p>.<p>ಬಯೋಮೆಟ್ರಿಕ್ ಪ್ರತಿಬಂಧಕ್ಕೆ ಒಳಗಾಗಿರುವ ಆಧಾರ್ ಕಾರ್ಡ್ಗಳನ್ನು ತಡೆಹಿಡಿಯಲಾಗಿರುತ್ತದೆ. ಜೊತೆಗೆ, ಅಂಥವರು ಪಡಿತರ ಚೀಟಿ ಮತ್ತು ಉದ್ಯೋಗ ಪಡೆಯಲೂ ಸಮಸ್ಯೆ ಆಗುತ್ತದೆ ಎಂಬುದನ್ನು ಒಪ್ಪಿಕೊಂಡ ಶರ್ಮಾ ಅವರು, ಸದ್ಯದಲ್ಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದಿದ್ದಾರೆ. </p>.<p>ಅಖಿಲ ಅಸ್ಸಾಂ ವಿದ್ಯಾರ್ಥಿ ಪರಿಷತ್ (ಎಎಎಸ್ಯು) ಮತ್ತು ಸಂಬಂಧಪಟ್ಟ ಇತರರ ಜೊತೆ ಬಯೋಮೆಟ್ರಿಕ್ಗಳ ಪ್ರತಿಬಂಧ ತೆರವುಗೊಳಿಸುವ ಪ್ರಕ್ರಿಯೆ ಕುರಿತು ಚರ್ಚಿಸಲಾಗುತ್ತದೆ. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಈ ಕುರಿತು ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಅವರು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಬರಾಕ್ ಮತ್ತು ಬ್ರಹ್ಮಪುತ್ರ ಕಣಿವೆಯ ಸುಮಾರು 6 ಲಕ್ಷ ಮಂದಿ ಪೌರತ್ವ ಪಡೆಯಲಿದ್ದಾರೆ ಎಂಬ ನಿರೀಕ್ಷೆ ಇದೆ. ಕೆಲ ನಿರ್ದಿಷ್ಟ ವರ್ಗಗಳಿಗೆ ಸೇರಿದ 20 ಲಕ್ಷ ಮಂದಿಗೆ ಪೌರತ್ವ ಸಿಗುವುದಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>