<p><strong>ನವದೆಹಲಿ:</strong> ‘ಗಡಿಪಾರಿನ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯ ಪತ್ತೆ ಮತ್ತು ಬಂಧನಕ್ಕಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ಪೋಲ್ ತೆಗೆದುಕೊಳ್ಳುತ್ತಿದ್ದ ಸಮಯವು ಈಗ ಗಣನೀಯವಾಗಿ ಕಡಿಮೆಯಾಗಿದೆ‘ ಎಂದು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಹೇಳಿದರು. </p>.<p>‘ದೇಶಭ್ರಷ್ಟರ ಸ್ಥಳಾಂತರ:ಸವಾಲುಗಳು ಮತ್ತು ತಂತ್ರಗಳು’ ಎಂಬ ವಿಷಯದ ಕುರಿತು ಸಿಬಿಐ ಗುರುವಾರ ಇಲ್ಲಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಉದ್ಘಾಟಿಸಿದರು. </p>.<p>‘ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಸಿಬಿಐ ಸಲ್ಲಿಸಿರುವ ಎಂಟು ಮನವಿಗಳು ಮಾತ್ರ ಸದ್ಯ ಇಂಟರ್ಪೋಲ್ನಲ್ಲಿ ಬಾಕಿ ಉಳಿದಿವೆ’ ಎಂದು ಪ್ರವೀಣ್ ಸೂದ್ ಹೇಳಿದರು. </p>.<p>ಅಪರಾಧ ಕೃತ್ಯಗಳಲ್ಲಿ ಬೇಕಾಗಿರುವ ವ್ಯಕ್ತಿಗಳನ್ನು ಹಸ್ತಾಂತರಿಸುವಂತೆ ಭಾರತವು ವಿವಿಧ ದೇಶಗಳಿಗೆ ಸಲ್ಲಿಸಿರುವ 338 ಮನವಿಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಈ ವರ್ಷದಲ್ಲಿ ಇದುವರೆಗೆ, ದೇಶದಿಂದ ಪಲಾಯನ ಮಾಡಿದ 35 ಅಪರಾಧಿಗಳನ್ನು ವಾಪಸ್ ಭಾರತಕ್ಕೆ ತರಲಾಗಿದೆ’ ಎಂದು ಸೂದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಗಡಿಪಾರಿನ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯ ಪತ್ತೆ ಮತ್ತು ಬಂಧನಕ್ಕಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ಪೋಲ್ ತೆಗೆದುಕೊಳ್ಳುತ್ತಿದ್ದ ಸಮಯವು ಈಗ ಗಣನೀಯವಾಗಿ ಕಡಿಮೆಯಾಗಿದೆ‘ ಎಂದು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಹೇಳಿದರು. </p>.<p>‘ದೇಶಭ್ರಷ್ಟರ ಸ್ಥಳಾಂತರ:ಸವಾಲುಗಳು ಮತ್ತು ತಂತ್ರಗಳು’ ಎಂಬ ವಿಷಯದ ಕುರಿತು ಸಿಬಿಐ ಗುರುವಾರ ಇಲ್ಲಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಉದ್ಘಾಟಿಸಿದರು. </p>.<p>‘ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಸಿಬಿಐ ಸಲ್ಲಿಸಿರುವ ಎಂಟು ಮನವಿಗಳು ಮಾತ್ರ ಸದ್ಯ ಇಂಟರ್ಪೋಲ್ನಲ್ಲಿ ಬಾಕಿ ಉಳಿದಿವೆ’ ಎಂದು ಪ್ರವೀಣ್ ಸೂದ್ ಹೇಳಿದರು. </p>.<p>ಅಪರಾಧ ಕೃತ್ಯಗಳಲ್ಲಿ ಬೇಕಾಗಿರುವ ವ್ಯಕ್ತಿಗಳನ್ನು ಹಸ್ತಾಂತರಿಸುವಂತೆ ಭಾರತವು ವಿವಿಧ ದೇಶಗಳಿಗೆ ಸಲ್ಲಿಸಿರುವ 338 ಮನವಿಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಈ ವರ್ಷದಲ್ಲಿ ಇದುವರೆಗೆ, ದೇಶದಿಂದ ಪಲಾಯನ ಮಾಡಿದ 35 ಅಪರಾಧಿಗಳನ್ನು ವಾಪಸ್ ಭಾರತಕ್ಕೆ ತರಲಾಗಿದೆ’ ಎಂದು ಸೂದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>