‘ಈ ಕುರಿತು ಇಬ್ಬರ ನಡುವೆ ಜಗಳ ನಡೆದಿದೆ. ಮಧ್ಯಪ್ರವೇಶಿಸಿದ ವಿಮಾನದ ಸಿಬ್ಬಂದಿಗೆ ಸಂತ್ರಸ್ತೆಯು ಪ್ರಕರಣದ ಬಗ್ಗೆ ವಿವರಿಸಿದ್ದಾರೆ. ವಿಮಾನವು ಮುಂಬೈಗೆ ಬಂದಿಳಿದ ತಕ್ಷಣ ಸಂತ್ರಸ್ತೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.