<p><strong>ಇಂಫಾಲ್</strong>: ಭೂ ವಿವಾದಕ್ಕೆ ಸಂಬಂಧಿಸಿದಂತೆ ಮಣಿಪುರದ ಎರಡು ಗ್ರಾಮಗಳ ಜನರ ನಡುವೆ ಘರ್ಷಣೆ ನಡೆದಿದ್ದು 25 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ 12 ಮಂದಿ ಭದ್ರತಾ ಸಿಬ್ಬಂದಿ ಇದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಮೆಂಗ್ಲಾಂಗ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. </p>.<p>ನಾಗಾ ಸಮುದಾಯದ ಜನರು ವಾಸವಿರುವ ಹಳೇ ತಮೆಂಗ್ಲಾಂಗ್ ಹಾಗೂ ಡಯಾಲಾಂಗ್ ಗ್ರಾಮಸ್ಥರ ನಡುವೆ ಭೂ ವಿವಾದ ಏರ್ಪಟ್ಟಿತ್ತು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲು ಹಳೇ ತಮೆಂಗ್ಲಾಂಗ್ನ 2000 ನಿವಾಸಿಗಳು ಬುಧವಾರ ಸಂಜೆ ಮೆರವಣಿಗೆ ಹೊರಟಿದ್ದರು.</p>.<p>ಈ ವೇಳೆ ಡಯಾಲಾಂಗ್ನ ಗ್ರಾಮಸ್ಥರು ಡುಗೈಲಾಂಗ್ ಎಂಬ ಸ್ಥಳೀಯ ಗ್ರಾಮಸ್ಥರ ಜತೆ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಘರ್ಷಣೆ ಉಂಟಾಗಿದೆ. ಗಲಾಟೆ ವೇಳೆ ಲೋಕೋಪಯೋಗಿ ಇಲಾಖೆಯ ಕಟ್ಟಡಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. </p>.<p>ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಬಿಎನ್ಎಸ್ಎಸ್ ಸೆಕ್ಷನ್ 163ರ ಅನ್ವಯ ಜಿಲ್ಲೆಯ ಕೇಂದ್ರ ಭಾಗ ಹಾಗೂ ಡಯಾಲಾಂಗ್, ಡುಗೈಲಾಂಗ್, ಹಳೇ ತಮೆಂಗ್ಲಾಂಗ್ ಗ್ರಾಮಗಳ ಗಡಿ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್</strong>: ಭೂ ವಿವಾದಕ್ಕೆ ಸಂಬಂಧಿಸಿದಂತೆ ಮಣಿಪುರದ ಎರಡು ಗ್ರಾಮಗಳ ಜನರ ನಡುವೆ ಘರ್ಷಣೆ ನಡೆದಿದ್ದು 25 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ 12 ಮಂದಿ ಭದ್ರತಾ ಸಿಬ್ಬಂದಿ ಇದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಮೆಂಗ್ಲಾಂಗ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. </p>.<p>ನಾಗಾ ಸಮುದಾಯದ ಜನರು ವಾಸವಿರುವ ಹಳೇ ತಮೆಂಗ್ಲಾಂಗ್ ಹಾಗೂ ಡಯಾಲಾಂಗ್ ಗ್ರಾಮಸ್ಥರ ನಡುವೆ ಭೂ ವಿವಾದ ಏರ್ಪಟ್ಟಿತ್ತು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲು ಹಳೇ ತಮೆಂಗ್ಲಾಂಗ್ನ 2000 ನಿವಾಸಿಗಳು ಬುಧವಾರ ಸಂಜೆ ಮೆರವಣಿಗೆ ಹೊರಟಿದ್ದರು.</p>.<p>ಈ ವೇಳೆ ಡಯಾಲಾಂಗ್ನ ಗ್ರಾಮಸ್ಥರು ಡುಗೈಲಾಂಗ್ ಎಂಬ ಸ್ಥಳೀಯ ಗ್ರಾಮಸ್ಥರ ಜತೆ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಘರ್ಷಣೆ ಉಂಟಾಗಿದೆ. ಗಲಾಟೆ ವೇಳೆ ಲೋಕೋಪಯೋಗಿ ಇಲಾಖೆಯ ಕಟ್ಟಡಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. </p>.<p>ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಬಿಎನ್ಎಸ್ಎಸ್ ಸೆಕ್ಷನ್ 163ರ ಅನ್ವಯ ಜಿಲ್ಲೆಯ ಕೇಂದ್ರ ಭಾಗ ಹಾಗೂ ಡಯಾಲಾಂಗ್, ಡುಗೈಲಾಂಗ್, ಹಳೇ ತಮೆಂಗ್ಲಾಂಗ್ ಗ್ರಾಮಗಳ ಗಡಿ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>