<p><strong>ಅಗರ್ತಲಾ</strong>: ಹಿಂದಿ ಭಾಷೆಯನ್ನು ಉತ್ತೇಜಿಸಿದಾಗ ಇತರ ಎಲ್ಲಾ ಭಾಷೆಗಳೂ ಗಟ್ಟಿಗೊಳ್ಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದರು.</p>.<p>ಇಲ್ಲಿ ನಡೆದ ರಾಜಭಾಷಾ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜನರ ಮೇಲೆ ಹಿಂದೆ ಹೇರಿಕೆ ಮಾಡಲಾಗುತ್ತಿದೆ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಆದರೆ, ನಮ್ಮ ಆಡಳಿತದಲ್ಲಿ ಹಿಂದಿ ಹೇರಿಕೆಯನ್ನು ಕಿತ್ತು ಹಾಕಲಾಗಿದೆ’ ಎಂದು ಹೇಳಿದರು. </p>.<p>‘ಹಿಂದಿ ಮತ್ತು ಇತರ ಯಾವುದೇ ಪ್ರಾದೇಶಿಕ ಭಾಷೆಗಳ ನಡುವೆ ಸಂಘರ್ಷವಿರುವುದಿಲ್ಲ. ಏಕೆಂದರೆ ಎರಡೂ ಭಾಷೆಗಳು ಒಂದೇ ತಾಯಿಯ ಮಕ್ಕಳಾಗಿದ್ದು, ಅವರು ಸಹೋದರಿಯರು. ಅವರು ಒಟ್ಟಾಗಿ ಪ್ರಗತಿ ಸಾಧಿಸುತ್ತಾರೆ’ ಎಂದರು. </p>.<p>‘ಭಾಷೆ ಮತ್ತು ಲಿಪಿಯು ವಿವಾದದ ವಿಷಯವಾಗಲು ಸಾಧ್ಯವಿಲ್ಲ. ಮನೆಯಲ್ಲಿ ಮಕ್ಕಳೊಂದಿಗೆ ನಿಮ್ಮ ಮಾತೃಭಾಷೆಯಲ್ಲಿಯೇ ಮಾತನಾಡಿ. ಇಲ್ಲವಾದರೆ ನಿಮ್ಮ ಮಕ್ಕಳು ತಮ್ಮ ಮಾತೃಭಾಷೆಯ ಸಾಹಿತ್ಯ, ಸಂಸ್ಕೃತಿ ಮತ್ತು ಸಂಪ್ರದಾಯಗಳಿಂದ ದೂರ ಉಳಿಯುತ್ತಾರೆ. ಮನೆಯಲ್ಲಿ ಸಾಧ್ಯವಾದಷ್ಟೂ ನಾವು ಮಾತೃಭಾಷೆಯನ್ನೇ ಬಳಸಬೇಕು’ ಎಂದಿದ್ದಾರೆ. </p>.<p>ಪ್ರಧಾನಿ ನರೇಂದ್ರ ಮೋದಿಯವರು ಈಶಾನ್ಯ ರಾಜ್ಯಗಳನ್ನು ‘ವಿವಾದ’ದ ಪ್ರದೇಶದಿಂದ ‘ವಿಕಾಸ’ದ ಪ್ರದೇಶವನ್ನಾಗಿ ಬದಲಾಯಿಸಿದ್ದಾರೆ. </p>.<p>ಮೋದಿ ಪ್ರಧಾನಿಯಾದ ಬಳಿಕ 2014ರಿಂದ ಈವರೆಗೆ, ನಿಷೇಧಿತ ಗುಂಪುಗಳೊಂದಿಗೆ 21 ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 11,000 ಯುವಕರನ್ನು ಮುಖ್ಯವಾಹಿನಿಗೆ ತರಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ</strong>: ಹಿಂದಿ ಭಾಷೆಯನ್ನು ಉತ್ತೇಜಿಸಿದಾಗ ಇತರ ಎಲ್ಲಾ ಭಾಷೆಗಳೂ ಗಟ್ಟಿಗೊಳ್ಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದರು.</p>.<p>ಇಲ್ಲಿ ನಡೆದ ರಾಜಭಾಷಾ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜನರ ಮೇಲೆ ಹಿಂದೆ ಹೇರಿಕೆ ಮಾಡಲಾಗುತ್ತಿದೆ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಆದರೆ, ನಮ್ಮ ಆಡಳಿತದಲ್ಲಿ ಹಿಂದಿ ಹೇರಿಕೆಯನ್ನು ಕಿತ್ತು ಹಾಕಲಾಗಿದೆ’ ಎಂದು ಹೇಳಿದರು. </p>.<p>‘ಹಿಂದಿ ಮತ್ತು ಇತರ ಯಾವುದೇ ಪ್ರಾದೇಶಿಕ ಭಾಷೆಗಳ ನಡುವೆ ಸಂಘರ್ಷವಿರುವುದಿಲ್ಲ. ಏಕೆಂದರೆ ಎರಡೂ ಭಾಷೆಗಳು ಒಂದೇ ತಾಯಿಯ ಮಕ್ಕಳಾಗಿದ್ದು, ಅವರು ಸಹೋದರಿಯರು. ಅವರು ಒಟ್ಟಾಗಿ ಪ್ರಗತಿ ಸಾಧಿಸುತ್ತಾರೆ’ ಎಂದರು. </p>.<p>‘ಭಾಷೆ ಮತ್ತು ಲಿಪಿಯು ವಿವಾದದ ವಿಷಯವಾಗಲು ಸಾಧ್ಯವಿಲ್ಲ. ಮನೆಯಲ್ಲಿ ಮಕ್ಕಳೊಂದಿಗೆ ನಿಮ್ಮ ಮಾತೃಭಾಷೆಯಲ್ಲಿಯೇ ಮಾತನಾಡಿ. ಇಲ್ಲವಾದರೆ ನಿಮ್ಮ ಮಕ್ಕಳು ತಮ್ಮ ಮಾತೃಭಾಷೆಯ ಸಾಹಿತ್ಯ, ಸಂಸ್ಕೃತಿ ಮತ್ತು ಸಂಪ್ರದಾಯಗಳಿಂದ ದೂರ ಉಳಿಯುತ್ತಾರೆ. ಮನೆಯಲ್ಲಿ ಸಾಧ್ಯವಾದಷ್ಟೂ ನಾವು ಮಾತೃಭಾಷೆಯನ್ನೇ ಬಳಸಬೇಕು’ ಎಂದಿದ್ದಾರೆ. </p>.<p>ಪ್ರಧಾನಿ ನರೇಂದ್ರ ಮೋದಿಯವರು ಈಶಾನ್ಯ ರಾಜ್ಯಗಳನ್ನು ‘ವಿವಾದ’ದ ಪ್ರದೇಶದಿಂದ ‘ವಿಕಾಸ’ದ ಪ್ರದೇಶವನ್ನಾಗಿ ಬದಲಾಯಿಸಿದ್ದಾರೆ. </p>.<p>ಮೋದಿ ಪ್ರಧಾನಿಯಾದ ಬಳಿಕ 2014ರಿಂದ ಈವರೆಗೆ, ನಿಷೇಧಿತ ಗುಂಪುಗಳೊಂದಿಗೆ 21 ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 11,000 ಯುವಕರನ್ನು ಮುಖ್ಯವಾಹಿನಿಗೆ ತರಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>