<p><strong>ನವದೆಹಲಿ</strong>: ಭಾರತ–ಪಾಕಿಸ್ತಾನ ಕ್ರಿಕೆಟ್ ಪಂದ್ಯದ ವೇಳೆ ಭಾರತ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಎಫ್ಐಆರ್ ದಾಖಲಿಸಿ, ಕಟ್ಟಡ ತೆರವು ಮಾಡುವ ಮೂಲಕ ನ್ಯಾಯಾಂಗ ನಿಂದನೆಯಾಗಿದೆ ಎಂದು ಕುಟುಂಬವೊಂದು ಸಲ್ಲಿಸಿದ್ದ ಅರ್ಜಿ ಸಂಬಂಧ ಮಹಾರಾಷ್ಟ್ರ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ನೀಡಿದೆ.</p>.<p>ಸಿಂಧುದುರ್ಗ್ ಜಿಲ್ಲೆಯ ಕಿತಾಬುಲ್ಲಾ ಹಮಿದುಲ್ಲಾ ಖಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಮಹಾರಾಷ್ಟ್ರ ಅಧಿಕಾರಿಗಳಿಗೆ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಕಾಲ ಮುಂದೂಡಿದೆ.</p>.<p>2024ರ ನವೆಂಬರ್ 13ರಂದು ಭಾರತ–ಪಾಕಿಸ್ತಾನ ತಂಡಗಳ ನಡುವೆ ನಡೆಯುತ್ತಿದ್ದ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ಸ್ನೇಹಿತರೊಬ್ಬರ ಮನೆಯಲ್ಲಿ ಖಾನ್ ಕುಟುಂಬ ವೀಕ್ಷಿಸುತ್ತಿತ್ತು. ಈ ವೇಳೆ ಖಾನ್ ಅವರ 14 ವರ್ಷದ ಪುತ್ರ ಭಾರತ ವಿರೋಧಿ ಘೋಷಣೆ ಕೂಗಿರುವುದಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಾನ್ ದಂಪತಿಯನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು.</p>.<p>ಆನಂತರ ಮಾಲ್ವಾನ್ ಪುರಸಭೆ ಅಧಿಕಾರಿಗಳು ಖಾನ್ ಅವರ ಗುಜರಿ ಅಂಗಡಿ ಮತ್ತು ಮನೆಯನ್ನು ಅನಧಿಕೃತ ನಿರ್ಮಾಣ ಎಂಬ ಕಾರಣ ನೀಡಿ ತೆರವುಗೊಳಿಸಿದ್ದರು.</p>.<p>ಮಹಾರಾಷ್ಟ್ರ ಅಧಿಕಾರಿಗಳ ಈ ಕ್ರಮವು(ಬುಲ್ಡೋಜರ್ ಕಾನೂನು) ಸುಪ್ರೀಂ ಕೋರ್ಟ್ ನೀಡಿರುವ ಈ ಹಿಂದಿನ ತೀರ್ಪು ಮತ್ತು ಮಾರ್ಗದರ್ಶಿ ಸೂತ್ರಗಳಿಗೆ ವಿರುದ್ಧವಾಗಿದೆ. ನೋಟಿಸ್ ಕೊಟ್ಟು ಉತ್ತರ ಪಡೆಯದೇ, ಆಸ್ತಿ ಹಕ್ಕು ಉಲ್ಲಂಘಿಸಿ ತೆರವು ಮಾಡಲಾಗಿದೆ ವಕೀಲರ ಮೂಲಕ ಖಾನ್ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ–ಪಾಕಿಸ್ತಾನ ಕ್ರಿಕೆಟ್ ಪಂದ್ಯದ ವೇಳೆ ಭಾರತ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಎಫ್ಐಆರ್ ದಾಖಲಿಸಿ, ಕಟ್ಟಡ ತೆರವು ಮಾಡುವ ಮೂಲಕ ನ್ಯಾಯಾಂಗ ನಿಂದನೆಯಾಗಿದೆ ಎಂದು ಕುಟುಂಬವೊಂದು ಸಲ್ಲಿಸಿದ್ದ ಅರ್ಜಿ ಸಂಬಂಧ ಮಹಾರಾಷ್ಟ್ರ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ನೀಡಿದೆ.</p>.<p>ಸಿಂಧುದುರ್ಗ್ ಜಿಲ್ಲೆಯ ಕಿತಾಬುಲ್ಲಾ ಹಮಿದುಲ್ಲಾ ಖಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಮಹಾರಾಷ್ಟ್ರ ಅಧಿಕಾರಿಗಳಿಗೆ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಕಾಲ ಮುಂದೂಡಿದೆ.</p>.<p>2024ರ ನವೆಂಬರ್ 13ರಂದು ಭಾರತ–ಪಾಕಿಸ್ತಾನ ತಂಡಗಳ ನಡುವೆ ನಡೆಯುತ್ತಿದ್ದ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ಸ್ನೇಹಿತರೊಬ್ಬರ ಮನೆಯಲ್ಲಿ ಖಾನ್ ಕುಟುಂಬ ವೀಕ್ಷಿಸುತ್ತಿತ್ತು. ಈ ವೇಳೆ ಖಾನ್ ಅವರ 14 ವರ್ಷದ ಪುತ್ರ ಭಾರತ ವಿರೋಧಿ ಘೋಷಣೆ ಕೂಗಿರುವುದಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಾನ್ ದಂಪತಿಯನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು.</p>.<p>ಆನಂತರ ಮಾಲ್ವಾನ್ ಪುರಸಭೆ ಅಧಿಕಾರಿಗಳು ಖಾನ್ ಅವರ ಗುಜರಿ ಅಂಗಡಿ ಮತ್ತು ಮನೆಯನ್ನು ಅನಧಿಕೃತ ನಿರ್ಮಾಣ ಎಂಬ ಕಾರಣ ನೀಡಿ ತೆರವುಗೊಳಿಸಿದ್ದರು.</p>.<p>ಮಹಾರಾಷ್ಟ್ರ ಅಧಿಕಾರಿಗಳ ಈ ಕ್ರಮವು(ಬುಲ್ಡೋಜರ್ ಕಾನೂನು) ಸುಪ್ರೀಂ ಕೋರ್ಟ್ ನೀಡಿರುವ ಈ ಹಿಂದಿನ ತೀರ್ಪು ಮತ್ತು ಮಾರ್ಗದರ್ಶಿ ಸೂತ್ರಗಳಿಗೆ ವಿರುದ್ಧವಾಗಿದೆ. ನೋಟಿಸ್ ಕೊಟ್ಟು ಉತ್ತರ ಪಡೆಯದೇ, ಆಸ್ತಿ ಹಕ್ಕು ಉಲ್ಲಂಘಿಸಿ ತೆರವು ಮಾಡಲಾಗಿದೆ ವಕೀಲರ ಮೂಲಕ ಖಾನ್ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>