<p><strong>ಗಾಜಿಯಾಬಾದ್: </strong>ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನ್ಯೂಯಾರ್ಕ್ಗೆ ಭೇಟಿ ನೀಡುವ ವೇಳೆ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.</p>.<p>ಪ್ರಧಾನಿ ಮೋದಿ ಭೇಟಿ ವೇಳೆ ಪ್ರತಿಭಟನೆ ನಡೆಸುವ ಮೂಲಕ ಕಳೆದ ಹತ್ತು ತಿಂಗಳಿನಿಂದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಒಕ್ಕೂಟಗಳ ಬೆಂಬಲಕ್ಕೆ ನಿಲ್ಲುವಂತೆ ರಾಕೇಶ್ ಮನವಿ ಮಾಡಿದ್ದಾರೆ.</p>.<p>‘ಮೋದಿಯವರನ್ನು ಭೇಟಿಯಾಗುವ ವೇಳೆ, ರೈತರ ಕಾಳಜಿಯ ಬಗ್ಗೆ ಗಮನಹರಿಸಲು ಸಲಹೆ ನೀಡುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಅವರು ಒತ್ತಾಯಿಸಿದ್ದಾರೆ.</p>.<p>ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 750 ರೈತರು ಜೀವ ಕಳೆದುಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಮನ್ನಣೆ ನೀಡಿ, ಕಾಯ್ದೆಗಳನ್ನು ರದ್ದುಗೊಳಿಸಲು ಮನಸ್ಸು ಮಾಡುತ್ತಿಲ್ಲ‘ ಎಂದು ಅಮೆರಿಕದ ನಿವಾಸಿಗಳ ಬೆಂಬಲವನ್ನು ಕೋರುವ ಸಂದರ್ಭದಲ್ಲಿ ರಾಕೇಶ್ ವಿವರಣೆ ನೀಡಿದರು.</p>.<p><a href="https://www.prajavani.net/india-news/up-minister-says-muslims-should-bow-to-indian-culture-ram-krishna-shiva-were-their-ancestors-869481.html" itemprop="url">ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಉತ್ತರ ಪ್ರದೇಶ ಸಚಿವ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್: </strong>ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನ್ಯೂಯಾರ್ಕ್ಗೆ ಭೇಟಿ ನೀಡುವ ವೇಳೆ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.</p>.<p>ಪ್ರಧಾನಿ ಮೋದಿ ಭೇಟಿ ವೇಳೆ ಪ್ರತಿಭಟನೆ ನಡೆಸುವ ಮೂಲಕ ಕಳೆದ ಹತ್ತು ತಿಂಗಳಿನಿಂದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಒಕ್ಕೂಟಗಳ ಬೆಂಬಲಕ್ಕೆ ನಿಲ್ಲುವಂತೆ ರಾಕೇಶ್ ಮನವಿ ಮಾಡಿದ್ದಾರೆ.</p>.<p>‘ಮೋದಿಯವರನ್ನು ಭೇಟಿಯಾಗುವ ವೇಳೆ, ರೈತರ ಕಾಳಜಿಯ ಬಗ್ಗೆ ಗಮನಹರಿಸಲು ಸಲಹೆ ನೀಡುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಅವರು ಒತ್ತಾಯಿಸಿದ್ದಾರೆ.</p>.<p>ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 750 ರೈತರು ಜೀವ ಕಳೆದುಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಮನ್ನಣೆ ನೀಡಿ, ಕಾಯ್ದೆಗಳನ್ನು ರದ್ದುಗೊಳಿಸಲು ಮನಸ್ಸು ಮಾಡುತ್ತಿಲ್ಲ‘ ಎಂದು ಅಮೆರಿಕದ ನಿವಾಸಿಗಳ ಬೆಂಬಲವನ್ನು ಕೋರುವ ಸಂದರ್ಭದಲ್ಲಿ ರಾಕೇಶ್ ವಿವರಣೆ ನೀಡಿದರು.</p>.<p><a href="https://www.prajavani.net/india-news/up-minister-says-muslims-should-bow-to-indian-culture-ram-krishna-shiva-were-their-ancestors-869481.html" itemprop="url">ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಉತ್ತರ ಪ್ರದೇಶ ಸಚಿವ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>