<p><strong>ತಿರುವನಂತಪುರ</strong>: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಕ್ಷೇತ್ರಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಪ್ರಿಯಾಂಕಾ ಅವರು ಯಾವಾಗಲೋ ಒಮ್ಮೆ ಮಾತ್ರ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ಸಿಪಿಎಂ ಪ್ರತಿಭಟನೆ ನಡೆಸಿದೆ. ಪ್ರಿಯಾಂಕಾ ಅವರು ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡ್ ಕಡೆ ತೆರಳುವಾಗ ಸಿಪಿಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. </p>.<p>ಪ್ರಿಯಾಂಕಾ ಅವರು ಹುಲಿ ದಾಳಿಗೆ ಬಲಿಯಾದ ರಾಧಾ ಅವರ ಮನೆಗೆ ಹಾಗೂ ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಮುಖಂಡ ಎಂ.ಎನ್. ವಿಜಯನ್ ಅವರ ಮನೆಗಳಿಗೆ ಭೇಟಿ ನೀಡಿದರು. ರಾಧಾ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಒದಗಿಸುವುದಾಗಿ ಪ್ರಿಯಾಂಕಾ ಭರವಸೆ ನೀಡಿದರು.</p>.<p><strong>ವನ್ಯಜೀವಿಗಳಿಂದ ಜನರ ರಕ್ಷಣೆ ಕೇಂದ್ರ– ರಾಜ್ಯಗಳ ಹೊಣೆ :</strong><br>ವನ್ಯಜೀವಿಗಳಿಂದ ಜನರನ್ನು ರಕ್ಷಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.</p>.<p>ಕೇರಳ ಜಿಲ್ಲೆಯಲ್ಲಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಹುಲಿ ದಾಳಿಯಿಂದ ಕಳೆದ ವಾರ ಮೃತಪಟ್ಟ ಮಹಿಳೆಯ ಕುಟುಂಬವನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ವನ್ಯ ಜೀವಿಗಳ ದಾಳಿ ತಡೆಗೆ ಅನುದಾನ ಕೊರತೆ ವಿಷಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಮಾತನಾಡುತ್ತೇನೆ ಎಂದರು.</p>.<p>ವನ್ಯಜೀವಿಗಳಿಂದ ಜನರ ರಕ್ಷಣೆಗೆ ಜಿಲ್ಲಾಡಳಿತವು ಅವಿರತವಾಗಿ ಶ್ರಮಿಸುತ್ತಿದೆ. ಆದರೆ ಈ ವಿಷಯಕ್ಕೆ ಸರ್ಕಾರಗಳು ಸೂಕ್ತ ಪ್ರಾಮುಖ್ಯತೆ ನೀಡದ ಕಾರಣ ಅವರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇದಕ್ಕಾಗಿ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಕ್ಷೇತ್ರಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಪ್ರಿಯಾಂಕಾ ಅವರು ಯಾವಾಗಲೋ ಒಮ್ಮೆ ಮಾತ್ರ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ಸಿಪಿಎಂ ಪ್ರತಿಭಟನೆ ನಡೆಸಿದೆ. ಪ್ರಿಯಾಂಕಾ ಅವರು ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡ್ ಕಡೆ ತೆರಳುವಾಗ ಸಿಪಿಎಂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. </p>.<p>ಪ್ರಿಯಾಂಕಾ ಅವರು ಹುಲಿ ದಾಳಿಗೆ ಬಲಿಯಾದ ರಾಧಾ ಅವರ ಮನೆಗೆ ಹಾಗೂ ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಮುಖಂಡ ಎಂ.ಎನ್. ವಿಜಯನ್ ಅವರ ಮನೆಗಳಿಗೆ ಭೇಟಿ ನೀಡಿದರು. ರಾಧಾ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಒದಗಿಸುವುದಾಗಿ ಪ್ರಿಯಾಂಕಾ ಭರವಸೆ ನೀಡಿದರು.</p>.<p><strong>ವನ್ಯಜೀವಿಗಳಿಂದ ಜನರ ರಕ್ಷಣೆ ಕೇಂದ್ರ– ರಾಜ್ಯಗಳ ಹೊಣೆ :</strong><br>ವನ್ಯಜೀವಿಗಳಿಂದ ಜನರನ್ನು ರಕ್ಷಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.</p>.<p>ಕೇರಳ ಜಿಲ್ಲೆಯಲ್ಲಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಹುಲಿ ದಾಳಿಯಿಂದ ಕಳೆದ ವಾರ ಮೃತಪಟ್ಟ ಮಹಿಳೆಯ ಕುಟುಂಬವನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ವನ್ಯ ಜೀವಿಗಳ ದಾಳಿ ತಡೆಗೆ ಅನುದಾನ ಕೊರತೆ ವಿಷಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಮಾತನಾಡುತ್ತೇನೆ ಎಂದರು.</p>.<p>ವನ್ಯಜೀವಿಗಳಿಂದ ಜನರ ರಕ್ಷಣೆಗೆ ಜಿಲ್ಲಾಡಳಿತವು ಅವಿರತವಾಗಿ ಶ್ರಮಿಸುತ್ತಿದೆ. ಆದರೆ ಈ ವಿಷಯಕ್ಕೆ ಸರ್ಕಾರಗಳು ಸೂಕ್ತ ಪ್ರಾಮುಖ್ಯತೆ ನೀಡದ ಕಾರಣ ಅವರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇದಕ್ಕಾಗಿ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>