<p><strong>ನವದೆಹಲಿ:</strong> ‘ರೈತರು ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ ಆ ಹಕ್ಕು ಹೊಂದಿದ ಮಾತ್ರಕ್ಕೆ ಅವರು, ಹೆದ್ದಾರಿಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡುವ ಹಾಗಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ರೈತರು ಹೆದ್ದಾರಿ ಬಂದ್ ಮಾಡಿರುವುದರಿಂದ ದೆಹಲಿಗೆ ಹೋಗುವುದು ಕಷ್ಟವಾಗುತ್ತಿದೆ ಎಂದು ನೋಯ್ಡಾ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಎಂ.ಎಂ.ಸುಂದರೇಶ್ ಅವರಿದ್ದ ಪೀಠವು ಹೀಗೆ ಹೇಳಿದೆ.</p>.<p>‘ನೀವು ಯಾವುದೇ ರೀತಿಯಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ಹೊಂದಿದ್ದೀರಿ. ಆದರೆ ಅನಿರ್ದಿಷ್ಟಾವಧಿಯವರೆಗೆ ಹೆದ್ದಾರಿಗಳನ್ನು ಬಂದ್ ಮಾಡುವಂತಿಲ್ಲ. ಜನರು ರಸ್ತೆ-ಹೆದ್ದಾರಿಗಳನ್ನು ಬಳಸುವ ಹಕ್ಕನ್ನು ಹೊಂದಿದ್ದಾರೆ’ ಎಂದು ಪೀಠವು ಹೇಳಿದೆ.</p>.<p>ಹೆದ್ದಾರಿಗಳನ್ನು ಬಂದ್ ಮಾಡಿರುವ ಬಗ್ಗೆ, ಪೀಠದ ಎದುರು ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರವು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿದವು.</p>.<p>ರೈತರ ಪ್ರತಿಭಟನೆ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ಸುಪ್ರೀಂ ಕೋರ್ಟ್ನ ಬೇರೊಂದು ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಅರ್ಜಿಯನ್ನೂ ಅದೇ ಪೀಠಕ್ಕೆ ವರ್ಗಾಯಿಸಿ ಎಂದು ರೈತ ಸಂಘಟನೆಗಳ ಪರ ವಕೀಲ ದುಶ್ಯಂತ್ ದವೆ ಅವರು ಪೀಠಕ್ಕೆ ಮನವಿ ಮಾಡಿದರು. ಅವರ ಮನವಿಯನ್ನು ಪೀಠವು<br />ತಿರಸ್ಕರಿಸಿತು.</p>.<p>‘ಇಲ್ಲಿ ಹೆದ್ದಾರಿ ಬಂದ್ ಆಗಿರುವ ಬಗ್ಗೆ ಮಾತ್ರವೇ ವಿಚಾರಣೆ ನಡೆಯುತ್ತಿದೆ. ಹೆದ್ದಾರಿಯನ್ನು ಬಂದ್ ಮಾಡಬಹುದು ಎಂಬುದು ರೈತ ಸಂಘಟನೆಗಳ ನಿಲುವೋ ಅಥವಾ ಹೆದ್ದಾರಿಯನ್ನು ಬಂದ್ ಮಾಡಬಾರದು ಎಂಬುದು ರೈತ ಸಂಘಟನೆಗಳ ನಿಲುವೋ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಪೀಠವು ಹೇಳಿದೆ.</p>.<p>ಈಬಗ್ಗೆ ವಿವರಣೆ ನೀಡುವಂತೆ ರೈತ ಸಂಘಟನೆಗಳಿಗೆ ಸೂಚನೆ ನೀಡಿದ್ದು, ಮೂರು ವಾರಗಳ ಕಾಲಾವಕಾಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರೈತರು ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ ಆ ಹಕ್ಕು ಹೊಂದಿದ ಮಾತ್ರಕ್ಕೆ ಅವರು, ಹೆದ್ದಾರಿಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡುವ ಹಾಗಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ರೈತರು ಹೆದ್ದಾರಿ ಬಂದ್ ಮಾಡಿರುವುದರಿಂದ ದೆಹಲಿಗೆ ಹೋಗುವುದು ಕಷ್ಟವಾಗುತ್ತಿದೆ ಎಂದು ನೋಯ್ಡಾ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಎಂ.ಎಂ.ಸುಂದರೇಶ್ ಅವರಿದ್ದ ಪೀಠವು ಹೀಗೆ ಹೇಳಿದೆ.</p>.<p>‘ನೀವು ಯಾವುದೇ ರೀತಿಯಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ಹೊಂದಿದ್ದೀರಿ. ಆದರೆ ಅನಿರ್ದಿಷ್ಟಾವಧಿಯವರೆಗೆ ಹೆದ್ದಾರಿಗಳನ್ನು ಬಂದ್ ಮಾಡುವಂತಿಲ್ಲ. ಜನರು ರಸ್ತೆ-ಹೆದ್ದಾರಿಗಳನ್ನು ಬಳಸುವ ಹಕ್ಕನ್ನು ಹೊಂದಿದ್ದಾರೆ’ ಎಂದು ಪೀಠವು ಹೇಳಿದೆ.</p>.<p>ಹೆದ್ದಾರಿಗಳನ್ನು ಬಂದ್ ಮಾಡಿರುವ ಬಗ್ಗೆ, ಪೀಠದ ಎದುರು ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರವು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿದವು.</p>.<p>ರೈತರ ಪ್ರತಿಭಟನೆ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ಸುಪ್ರೀಂ ಕೋರ್ಟ್ನ ಬೇರೊಂದು ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಅರ್ಜಿಯನ್ನೂ ಅದೇ ಪೀಠಕ್ಕೆ ವರ್ಗಾಯಿಸಿ ಎಂದು ರೈತ ಸಂಘಟನೆಗಳ ಪರ ವಕೀಲ ದುಶ್ಯಂತ್ ದವೆ ಅವರು ಪೀಠಕ್ಕೆ ಮನವಿ ಮಾಡಿದರು. ಅವರ ಮನವಿಯನ್ನು ಪೀಠವು<br />ತಿರಸ್ಕರಿಸಿತು.</p>.<p>‘ಇಲ್ಲಿ ಹೆದ್ದಾರಿ ಬಂದ್ ಆಗಿರುವ ಬಗ್ಗೆ ಮಾತ್ರವೇ ವಿಚಾರಣೆ ನಡೆಯುತ್ತಿದೆ. ಹೆದ್ದಾರಿಯನ್ನು ಬಂದ್ ಮಾಡಬಹುದು ಎಂಬುದು ರೈತ ಸಂಘಟನೆಗಳ ನಿಲುವೋ ಅಥವಾ ಹೆದ್ದಾರಿಯನ್ನು ಬಂದ್ ಮಾಡಬಾರದು ಎಂಬುದು ರೈತ ಸಂಘಟನೆಗಳ ನಿಲುವೋ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಪೀಠವು ಹೇಳಿದೆ.</p>.<p>ಈಬಗ್ಗೆ ವಿವರಣೆ ನೀಡುವಂತೆ ರೈತ ಸಂಘಟನೆಗಳಿಗೆ ಸೂಚನೆ ನೀಡಿದ್ದು, ಮೂರು ವಾರಗಳ ಕಾಲಾವಕಾಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>