<p><strong>ಢಾಕಾ/ನವದೆಹಲಿ</strong>: ‘ಇನ್ಕ್ವಿಲಾಬ್ ಮಂಚ್’ ಸಂಘಟನೆಯ ನಾಯಕ ಶರೀಫ್ ಉಸ್ಮಾನ್ ಹಾದಿ ಅವರ ಸಾವಿಗೆ ನ್ಯಾಯ ಒದಗಿಸಬೇಕು. ಕೊಲೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿ ಸಂಘಟನೆಯ ಕಾರ್ಯಕರ್ತರು ಢಾಕಾದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಇನ್ಕ್ವಿಲಾಬ್ ಮಂಚ್’ ಮತ್ತು ‘ಜುಲೈ ಮಂಚ್’ನ ನಾಯಕರು, ಬೆಂಬಲಿಗರು, ವಿದ್ಯಾರ್ಥಿಗಳು ಶುಕ್ರವಾರದ ಪ್ರಾರ್ಥನೆಯ ನಂತರ, ಢಾಕಾ ವಿಶ್ವವಿದ್ಯಾಲಯದ ಕೇಂದ್ರ ಮಸೀದಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಶಹಬಾಗ್ ಜಂಕ್ಷನ್ನಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. </p>.<p>‘ಹಾದಿ ಹತ್ಯೆಗೆ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಮುತ್ತಿಗೆ ಹಾಕುವುದನ್ನು ಮುಂದುವರಿಸುತ್ತೇವೆ. ಇಂದಿನಿಂದ, ನಾವು ಈ ಶಹಬಾಗ್ ಅನ್ನು ‘ಶಹೀದ್ ಉಸ್ಮಾನ್ ಹಾದಿ ಛತ್ತರ್’ ಎಂದು ಘೋಷಿಸುತ್ತೇವೆ. ಹಾದಿ ಹತ್ಯೆಗೆ ನ್ಯಾಯ ಸಿಗುವವರೆಗೂ ಚಳವಳಿಯನ್ನು ನಿಲ್ಲಿಸುವುದಿಲ್ಲ’ ಎಂದು ‘ಇನ್ಕ್ವಿಲಾಬ್ ಮಂಚ್’ನ ಸದಸ್ಯ ಕಾರ್ಯದರ್ಶಿ ಅಬ್ದುಲ್ಲಾ ಅಲ್ ಜಾಬರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ/ನವದೆಹಲಿ</strong>: ‘ಇನ್ಕ್ವಿಲಾಬ್ ಮಂಚ್’ ಸಂಘಟನೆಯ ನಾಯಕ ಶರೀಫ್ ಉಸ್ಮಾನ್ ಹಾದಿ ಅವರ ಸಾವಿಗೆ ನ್ಯಾಯ ಒದಗಿಸಬೇಕು. ಕೊಲೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿ ಸಂಘಟನೆಯ ಕಾರ್ಯಕರ್ತರು ಢಾಕಾದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಇನ್ಕ್ವಿಲಾಬ್ ಮಂಚ್’ ಮತ್ತು ‘ಜುಲೈ ಮಂಚ್’ನ ನಾಯಕರು, ಬೆಂಬಲಿಗರು, ವಿದ್ಯಾರ್ಥಿಗಳು ಶುಕ್ರವಾರದ ಪ್ರಾರ್ಥನೆಯ ನಂತರ, ಢಾಕಾ ವಿಶ್ವವಿದ್ಯಾಲಯದ ಕೇಂದ್ರ ಮಸೀದಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಶಹಬಾಗ್ ಜಂಕ್ಷನ್ನಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. </p>.<p>‘ಹಾದಿ ಹತ್ಯೆಗೆ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಮುತ್ತಿಗೆ ಹಾಕುವುದನ್ನು ಮುಂದುವರಿಸುತ್ತೇವೆ. ಇಂದಿನಿಂದ, ನಾವು ಈ ಶಹಬಾಗ್ ಅನ್ನು ‘ಶಹೀದ್ ಉಸ್ಮಾನ್ ಹಾದಿ ಛತ್ತರ್’ ಎಂದು ಘೋಷಿಸುತ್ತೇವೆ. ಹಾದಿ ಹತ್ಯೆಗೆ ನ್ಯಾಯ ಸಿಗುವವರೆಗೂ ಚಳವಳಿಯನ್ನು ನಿಲ್ಲಿಸುವುದಿಲ್ಲ’ ಎಂದು ‘ಇನ್ಕ್ವಿಲಾಬ್ ಮಂಚ್’ನ ಸದಸ್ಯ ಕಾರ್ಯದರ್ಶಿ ಅಬ್ದುಲ್ಲಾ ಅಲ್ ಜಾಬರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>