<p><strong>ನವದೆಹಲಿ:</strong> ಭಾರತ–ಅಮೆರಿಕದ ವ್ಯಾಪಾರ ಒಪ್ಪಂದವನ್ನು ಟೀಕಿಸಿರುವ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.</p><p>ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಈ ಒಪ್ಪಂದ ಭಾರತಕ್ಕೆ ಅಪಾಯಕಾರಿಯಾಗಿದ್ದು, ನಾವು ಮಾತನಾಡಬೇಕಾಗುತ್ತದೆ’ ಎಂದಿದ್ದಾರೆ.</p><p>‘ಇದು ಏಕಪಕ್ಷೀಯ, ಒತ್ತಡದ ಒಪ್ಪಂದವಾಗಿದೆ. ಭಾರತದ ರೈತರು ಇದನ್ನು ಒಪ್ಪುವುದಿಲ್ಲ. ಅವರು ಸಬ್ಸಿಡಿ ಸರಕುಗಳನ್ನು ಸುರಿಯುತ್ತಾರೆ. ಇಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿದ್ದಾರೆ.</p><p>ರೈತರನ್ನು ರಕ್ಷಿಸಲಾಗುವುದು ಎಂಬ ಸರ್ಕಾರದ ಭರವಸೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಕಾಯತ್, ‘ಸರ್ಕಾರ ಸುಳ್ಳು ಹೇಳುತ್ತಿದೆ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು. ಪ್ರತಿಭಟನೆಯೊಂದೇ ದಾರಿ’ ಎಂದು ಹೇಳಿದ್ದಾರೆ.</p><p>ಮುಂದುವರಿದು, ‘ದೆಹಲಿ ದೂರವಿಲ್ಲ... ನಮ್ಮ ಟ್ರ್ಯಾಕ್ಟರ್ಗಳು ಯಾವಾಗಲೂ ಸಿದ್ಧವಾಗಿವೆ...’ ಎಂದು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.</p><p>ಫೆಬ್ರುವರಿ 12ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರಕ್ಕೆ ರೈತರು ಬೆಂಬಲ ಸೂಚಿಸಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ–ಅಮೆರಿಕದ ವ್ಯಾಪಾರ ಒಪ್ಪಂದವನ್ನು ಟೀಕಿಸಿರುವ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.</p><p>ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಈ ಒಪ್ಪಂದ ಭಾರತಕ್ಕೆ ಅಪಾಯಕಾರಿಯಾಗಿದ್ದು, ನಾವು ಮಾತನಾಡಬೇಕಾಗುತ್ತದೆ’ ಎಂದಿದ್ದಾರೆ.</p><p>‘ಇದು ಏಕಪಕ್ಷೀಯ, ಒತ್ತಡದ ಒಪ್ಪಂದವಾಗಿದೆ. ಭಾರತದ ರೈತರು ಇದನ್ನು ಒಪ್ಪುವುದಿಲ್ಲ. ಅವರು ಸಬ್ಸಿಡಿ ಸರಕುಗಳನ್ನು ಸುರಿಯುತ್ತಾರೆ. ಇಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿದ್ದಾರೆ.</p><p>ರೈತರನ್ನು ರಕ್ಷಿಸಲಾಗುವುದು ಎಂಬ ಸರ್ಕಾರದ ಭರವಸೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಕಾಯತ್, ‘ಸರ್ಕಾರ ಸುಳ್ಳು ಹೇಳುತ್ತಿದೆ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು. ಪ್ರತಿಭಟನೆಯೊಂದೇ ದಾರಿ’ ಎಂದು ಹೇಳಿದ್ದಾರೆ.</p><p>ಮುಂದುವರಿದು, ‘ದೆಹಲಿ ದೂರವಿಲ್ಲ... ನಮ್ಮ ಟ್ರ್ಯಾಕ್ಟರ್ಗಳು ಯಾವಾಗಲೂ ಸಿದ್ಧವಾಗಿವೆ...’ ಎಂದು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.</p><p>ಫೆಬ್ರುವರಿ 12ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರಕ್ಕೆ ರೈತರು ಬೆಂಬಲ ಸೂಚಿಸಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>