<p><strong>ನವದೆಹಲಿ: </strong>ಆಮ್ಲಜನಕ ಹೊತ್ತ ವಾಹನಗಳನ್ನು ದೆಹಲಿ ಒಳಗೆ ಬಿಡುತ್ತಿಲ್ಲ ಎಂಬ ಆರೋಪಗಳನ್ನು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನಾನಿರತ ರೈತರು ಬುಧವಾರ ತಳ್ಳಿ ಹಾಕಿದ್ದಾರೆ.</p>.<p>ದೆಹಲಿಯ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಕಂಡುಬಂದು, ಕೋವಿಡ್ ರೋಗಿಗಳ ಜೀವಕ್ಕೆ ಅಪಾಯ ಬಂದೊಗಿದೆ. ಇಂಥ ಸಂದರ್ಭದಲ್ಲಿ ಆಮ್ಲಜನಕ ಹೊತ್ತ ವಾಹನಗಳು ದೆಹಲಿ ಪ್ರವೇಶಿಸುವುದಕ್ಕೆ ಪ್ರತಿಭಟನಾ ನಿರತ ರೈತರು ಅಡ್ಡಿಪಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮಂಗಳವಾರ ಆರೋಪಿಸಿದ್ದರು.</p>.<p>‘ಆಮ್ಲಜನಕ ಹೊತ್ತ ವಾಹನಗಳು, ಆಂಬುಲೆನ್ಸ್ ಸಂಚಾರ ಸೇರಿದಂತೆ ಯಾವುದೇ ಅಗತ್ಯ ಸೇವೆಗೆ ನಾವು ಅಡ್ಡಿಪಡಿಸಿಲ್ಲ. ಇದೊಂದು ಅಪಪ್ರಚಾರ’ ಎಂದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.</p>.<p>‘ಮಾನವ ಹಕ್ಕುಗಳಿಗಾಗಿರೈತರು ಹೋರಾಟ ನಡೆಸುತ್ತಿದ್ದಾರೆ. ಈ ವಿಷಯ ಮುಂದಿಟ್ಟುಕೊಂಡು ನಡೆಯುವ ಪ್ರತಿಯೊಂದು ಹೋರಾಟಕ್ಕೂ ರೈತರ ಬೆಂಬಲ ಇದ್ದೇ ಇರುತ್ತದೆ’ ಎಂದು ಸಂಘಟನೆ ಹೇಳಿದೆ.</p>.<p>‘ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ದೆಹಲಿಯ ಗಡಿಗಳಲ್ಲಿ ಮೊಳೆಗಳಿಂದ ಬ್ಯಾರಿಕೇಡ್ ಅಳವಡಿಸಿರುವುದು ಕೇಂದ್ರ ಸರ್ಕಾರವೇ ಹೊರತು ರೈತರಲ್ಲ’ ಎಂದೂ ಸಂಘಟನೆ ತಿರುಗೇಟು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಮ್ಲಜನಕ ಹೊತ್ತ ವಾಹನಗಳನ್ನು ದೆಹಲಿ ಒಳಗೆ ಬಿಡುತ್ತಿಲ್ಲ ಎಂಬ ಆರೋಪಗಳನ್ನು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನಾನಿರತ ರೈತರು ಬುಧವಾರ ತಳ್ಳಿ ಹಾಕಿದ್ದಾರೆ.</p>.<p>ದೆಹಲಿಯ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಕಂಡುಬಂದು, ಕೋವಿಡ್ ರೋಗಿಗಳ ಜೀವಕ್ಕೆ ಅಪಾಯ ಬಂದೊಗಿದೆ. ಇಂಥ ಸಂದರ್ಭದಲ್ಲಿ ಆಮ್ಲಜನಕ ಹೊತ್ತ ವಾಹನಗಳು ದೆಹಲಿ ಪ್ರವೇಶಿಸುವುದಕ್ಕೆ ಪ್ರತಿಭಟನಾ ನಿರತ ರೈತರು ಅಡ್ಡಿಪಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮಂಗಳವಾರ ಆರೋಪಿಸಿದ್ದರು.</p>.<p>‘ಆಮ್ಲಜನಕ ಹೊತ್ತ ವಾಹನಗಳು, ಆಂಬುಲೆನ್ಸ್ ಸಂಚಾರ ಸೇರಿದಂತೆ ಯಾವುದೇ ಅಗತ್ಯ ಸೇವೆಗೆ ನಾವು ಅಡ್ಡಿಪಡಿಸಿಲ್ಲ. ಇದೊಂದು ಅಪಪ್ರಚಾರ’ ಎಂದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.</p>.<p>‘ಮಾನವ ಹಕ್ಕುಗಳಿಗಾಗಿರೈತರು ಹೋರಾಟ ನಡೆಸುತ್ತಿದ್ದಾರೆ. ಈ ವಿಷಯ ಮುಂದಿಟ್ಟುಕೊಂಡು ನಡೆಯುವ ಪ್ರತಿಯೊಂದು ಹೋರಾಟಕ್ಕೂ ರೈತರ ಬೆಂಬಲ ಇದ್ದೇ ಇರುತ್ತದೆ’ ಎಂದು ಸಂಘಟನೆ ಹೇಳಿದೆ.</p>.<p>‘ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ದೆಹಲಿಯ ಗಡಿಗಳಲ್ಲಿ ಮೊಳೆಗಳಿಂದ ಬ್ಯಾರಿಕೇಡ್ ಅಳವಡಿಸಿರುವುದು ಕೇಂದ್ರ ಸರ್ಕಾರವೇ ಹೊರತು ರೈತರಲ್ಲ’ ಎಂದೂ ಸಂಘಟನೆ ತಿರುಗೇಟು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>