<p><strong>ಶ್ರೀನಗರ</strong>: ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಅವುಗಳನ್ನು ನಿಯಂತ್ರಿಸಲು ವಿಧಿಸಿದ್ದ ನಿರ್ಬಂಧಗಳನ್ನು ಮಂಗಳವಾರವೂ ಮುಂದುವರಿಸಲಾಗಿದೆ. </p>.<p>ಇಲ್ಲಿನ ಲಾಲ್ ಚೌಕ್ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ವದಂತಿಗಳಯ ಹರಡದಂತೆ ಎಚ್ಚರವಹಿಸಲು ಅಂತರ್ಜಾಲ ಸೇವೆಗಳ ವೇಗವನ್ನೂ ಕಡಿಮೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶಾಲೆ–ಕಾಲೇಜುಗಳಿಗೆ ರಜೆ: ಕಾಶ್ಮೀರ ವಿಭಾಗದ ಎಲ್ಲಾ ಶಾಲೆ ಕಾಲೇಜುಗಳು ಮಾರ್ಚ್ 7ರವರೆಗೆ ರಜೆ ನೀಡಲಾಗಿದೆ. ನಿರ್ಬಂಧದ ಕಾರಣ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ಜಮ್ಮು–ಕಾಶ್ಮೀರ ಶಿಕ್ಷಣ ಸಚಿವೆ ಸಾಕಿನಾ ಇಟೂ ತಿಳಿಸಿದ್ದಾರೆ.</p>.<p>ಖಮೇನಿ ಹತ್ಯೆ ಖಂಡಿಸಿ ಕೇಂದ್ರ ಪ್ರದೇಶದಾದ್ಯಂತ ಹಲವು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಶ್ಮೀರದಲ್ಲಿ 75 ರ್ಯಾಲಿಗಳನ್ನು ನಡೆಸಲಾಗಿದ್ದು, ಜಮ್ಮು ಪ್ರಾಂತ್ಯದಲ್ಲಿಯೂ ಸೋಮವಾರ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ಸೋಮವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ 6 ಮಂದಿ ಭದ್ರತಾ ಸಿಬ್ಬಂದಿಯೂ ಸೇರಿ 14 ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಅವುಗಳನ್ನು ನಿಯಂತ್ರಿಸಲು ವಿಧಿಸಿದ್ದ ನಿರ್ಬಂಧಗಳನ್ನು ಮಂಗಳವಾರವೂ ಮುಂದುವರಿಸಲಾಗಿದೆ. </p>.<p>ಇಲ್ಲಿನ ಲಾಲ್ ಚೌಕ್ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ವದಂತಿಗಳಯ ಹರಡದಂತೆ ಎಚ್ಚರವಹಿಸಲು ಅಂತರ್ಜಾಲ ಸೇವೆಗಳ ವೇಗವನ್ನೂ ಕಡಿಮೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶಾಲೆ–ಕಾಲೇಜುಗಳಿಗೆ ರಜೆ: ಕಾಶ್ಮೀರ ವಿಭಾಗದ ಎಲ್ಲಾ ಶಾಲೆ ಕಾಲೇಜುಗಳು ಮಾರ್ಚ್ 7ರವರೆಗೆ ರಜೆ ನೀಡಲಾಗಿದೆ. ನಿರ್ಬಂಧದ ಕಾರಣ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ಜಮ್ಮು–ಕಾಶ್ಮೀರ ಶಿಕ್ಷಣ ಸಚಿವೆ ಸಾಕಿನಾ ಇಟೂ ತಿಳಿಸಿದ್ದಾರೆ.</p>.<p>ಖಮೇನಿ ಹತ್ಯೆ ಖಂಡಿಸಿ ಕೇಂದ್ರ ಪ್ರದೇಶದಾದ್ಯಂತ ಹಲವು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಶ್ಮೀರದಲ್ಲಿ 75 ರ್ಯಾಲಿಗಳನ್ನು ನಡೆಸಲಾಗಿದ್ದು, ಜಮ್ಮು ಪ್ರಾಂತ್ಯದಲ್ಲಿಯೂ ಸೋಮವಾರ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ಸೋಮವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ 6 ಮಂದಿ ಭದ್ರತಾ ಸಿಬ್ಬಂದಿಯೂ ಸೇರಿ 14 ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>