<p><strong>ಛತ್ರಪತಿ ಸಂಭಾಜಿನಗರ:</strong> ಸಂವಿಧಾನದ ಪ್ರತಿಕೃತಿ ನಾಶಗೊಳಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರದ ಪರ್ಭಣಿ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಬುಧವಾರ ಕೂಡ ಹಿಂಸಾಚಾರ ಸ್ವರೂಪ ಪಡೆಯಿತು.</p>.<p>ಪರ್ಭಣಿ ರೈಲು ನಿಲ್ದಾಣದ ಆವರಣದಲ್ಲಿನ ಅಂಬೇಡ್ಕರ್ ಮೂರ್ತಿಯ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ದುಷ್ಕರ್ಮಿಗಳು ಮಂಗಳವಾರ ಧ್ವಂಸಗೊಳಿಸಿದ್ದರು. ಅದನ್ನು ಖಂಡಿಸಿ ಆರಂಭಗೊಂಡಿದ್ದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು.</p>.<p>‘ಅಂಬೇಡ್ಕರ್ ಅಭಿಮಾನಿಗಳು ನಡೆಸುತ್ತಿದ್ದ ಬಂದ್ ಮಧ್ಯೆ ಗುಂಪೊಂದು ಜಿಲ್ಲಾಧಿಕಾರಿಗಳ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರತಿಕೃತಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆ ಮತ್ತೆ ಪ್ರತಿಭಟನೆ ಆರಂಭಗೊಂಡಿದೆ.</p>.<p>ಅಂಗಡಿಯೊಂದರ ಹೊರಗೆ ಇರಿಸಲಾಗಿದ್ದ ಪೈಪ್ನ ರಾಶಿಗೆ ಮಧ್ಯಾಹ್ನದ ವೇಳೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಆಶ್ರುವಾಯು ಶೆಲ್ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಚದುರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಸಂವಿಧಾನ ಪ್ರತಿಕೃತಿ ಧ್ವಂಸ ಪ್ರಕರಣದಲ್ಲಿ ಯಾರ ಕೈವಾಡವಿದೆ ಎಂದು ಪತ್ತೆಹಚ್ಚಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನೂರಾರು ಪ್ರತಿಭಟನಾಕಾರರು ಜಮಾಯಿಸಿದ್ದರು. ಅವರಲ್ಲಿ ಕೆಲವರು ಕಚೇರಿಯ ಒಳಗೆ ನುಗ್ಗಿ ಪೀಠೋಪಕರಣ ಮತ್ತು ಕಿಟಕಿ ಗಾಜುಗಳನ್ನು ಒಡದು ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಜಿಲ್ಲೆಯ ವಸ್ಮತ್ ಪ್ರದೇಶದಲ್ಲೂ ಬಂದ್ ನಡೆದಿದೆ. ಮಂಗಳವಾರ ಸಂಜೆ ಪರ್ಭಣಿ ರೈಲು ನಿಲ್ದಾಣದ ಬಳಿ ರೈಲು ತಡೆ ನಡೆಸಿದ ಪ್ರತಿಭಟನಕಾರರು ಲೋಕೋಪೈಲಟ್ ಮೇಲೆ ಹಲ್ಲೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಂಭಾಜಿನಗರ:</strong> ಸಂವಿಧಾನದ ಪ್ರತಿಕೃತಿ ನಾಶಗೊಳಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರದ ಪರ್ಭಣಿ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಬುಧವಾರ ಕೂಡ ಹಿಂಸಾಚಾರ ಸ್ವರೂಪ ಪಡೆಯಿತು.</p>.<p>ಪರ್ಭಣಿ ರೈಲು ನಿಲ್ದಾಣದ ಆವರಣದಲ್ಲಿನ ಅಂಬೇಡ್ಕರ್ ಮೂರ್ತಿಯ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ದುಷ್ಕರ್ಮಿಗಳು ಮಂಗಳವಾರ ಧ್ವಂಸಗೊಳಿಸಿದ್ದರು. ಅದನ್ನು ಖಂಡಿಸಿ ಆರಂಭಗೊಂಡಿದ್ದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು.</p>.<p>‘ಅಂಬೇಡ್ಕರ್ ಅಭಿಮಾನಿಗಳು ನಡೆಸುತ್ತಿದ್ದ ಬಂದ್ ಮಧ್ಯೆ ಗುಂಪೊಂದು ಜಿಲ್ಲಾಧಿಕಾರಿಗಳ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪ್ರತಿಕೃತಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆ ಮತ್ತೆ ಪ್ರತಿಭಟನೆ ಆರಂಭಗೊಂಡಿದೆ.</p>.<p>ಅಂಗಡಿಯೊಂದರ ಹೊರಗೆ ಇರಿಸಲಾಗಿದ್ದ ಪೈಪ್ನ ರಾಶಿಗೆ ಮಧ್ಯಾಹ್ನದ ವೇಳೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಆಶ್ರುವಾಯು ಶೆಲ್ ಪ್ರಯೋಗ ಮಾಡಿ ಪ್ರತಿಭಟನಕಾರರನ್ನು ಚದುರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ಸಂವಿಧಾನ ಪ್ರತಿಕೃತಿ ಧ್ವಂಸ ಪ್ರಕರಣದಲ್ಲಿ ಯಾರ ಕೈವಾಡವಿದೆ ಎಂದು ಪತ್ತೆಹಚ್ಚಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.</p>.<p>ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನೂರಾರು ಪ್ರತಿಭಟನಾಕಾರರು ಜಮಾಯಿಸಿದ್ದರು. ಅವರಲ್ಲಿ ಕೆಲವರು ಕಚೇರಿಯ ಒಳಗೆ ನುಗ್ಗಿ ಪೀಠೋಪಕರಣ ಮತ್ತು ಕಿಟಕಿ ಗಾಜುಗಳನ್ನು ಒಡದು ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಜಿಲ್ಲೆಯ ವಸ್ಮತ್ ಪ್ರದೇಶದಲ್ಲೂ ಬಂದ್ ನಡೆದಿದೆ. ಮಂಗಳವಾರ ಸಂಜೆ ಪರ್ಭಣಿ ರೈಲು ನಿಲ್ದಾಣದ ಬಳಿ ರೈಲು ತಡೆ ನಡೆಸಿದ ಪ್ರತಿಭಟನಕಾರರು ಲೋಕೋಪೈಲಟ್ ಮೇಲೆ ಹಲ್ಲೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>