ಪ್ರಧಾನಿಗೆ ಮಾಡಿರುವ ಮನವಿಯಲ್ಲಿ ಮ್ಯೂಕರ್ ಮೈಕೊಸಿಸ್ ಚಿಕಿತ್ಸೆಗೆ ಬಳಸುವ ಚುಚ್ಚುಮದ್ದು ದುಬಾರಿಯಾಗಿದೆ ಎಂಬ ಜನರ ಅಹವಾಲುಗಳನ್ನು ಉಲ್ಲೇಖಿಸಿದ್ದಾರೆ. ಈ ರೋಗವು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿಯಲ್ಲಿ ಒಳಗಾಗದ ಕಾರಣ ರೋಗಿಗಳು ಚುಚ್ಚು ಮದ್ದಿಗಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಬೇಕಾಗುತ್ತದೆ. ಇದಕ್ಕೆ ಯಾರು ಹೊಣೆ? ಪ್ರಧಾನಿ ಅವರೇ ದಯವಿಟ್ಟು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.