<p><strong>ನವದೆಹಲಿ:</strong> ಪಿಎಸ್ಐ ಹಗರಣ ಹಾಗೂ ಕೆಇಎ ನೇಮಕಾತಿ ಪರೀಕ್ಷೆ ಬರೆಯಲು ಹಣ ಪಡೆದು ಬ್ಲೂಟೂತ್ ನೀಡಿದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಮುಂದೂಡಿದೆ. </p>.<p>ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪಾಟೀಲ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ನ್ಯಾಯಪೀಠ ಈ ಹಿಂದೆ ವಜಾಗೊಳಿಸಿತ್ತು. ಆ ಬಳಿಕ, ವೈದ್ಯಕೀಯ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಚಿಸಿತ್ತು. ಆರೋಪಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ ಎಂದು ಸಂಸ್ಥೆ ವರದಿ ನೀಡಿತ್ತು. </p>.<p>ವಾದ ಮಂಡನೆಗೆ ಒಂದು ವಾರಗಳ ಕಾಲಾವಕಾಶ ನೀಡಬೇಕು ಎಂದು ಪಾಟೀಲ ಪರ ವಕೀಲರು ಕೋರಿದರು. ಪೀಠವು ವಿಚಾರಣೆ ಮುಂದೂಡಿತು. ಕರ್ನಾಟಕ ಸರ್ಕಾರದ ಪರ ವಕೀಲ ಡಿ.ಎಲ್.ಚಿದಾನಂದ ವಾದಿಸಿದರು. </p>.<p>ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಸಂಬಂಧ ಹೈಕೋರ್ಟ್ನ ಕಲಬುರಗಿ ಪೀಠದಿಂದ ಷರತ್ತುಬದ್ಧ ಜಾಮೀನು ಪಡೆದಿದ್ದ ಪಾಟೀಲ ಬಿಡುಗಡೆಯಾದ ದಿನದಿಂದಲೇ ನಾಪತ್ತೆಯಾಗಿದ್ದ. ಸಿಐಡಿ ಪೊಲೀಸರು ಹಲವು ನೋಟಿಸ್ ಜಾರಿಗೊಳಿಸಿದ್ದರೂ ಹಾಜರಿ ಆಗಿರಲಿಲ್ಲ. ಕೆಲ ದಿನಗಳ ಬಳಿಕ ಹಾಜರಾಗಿದ್ದ. ಕೆಇಎ ಪ್ರಕರಣದಲ್ಲೂ ತಲೆಮರೆಸಿಕೊಂಡಿದ್ದ. </p>.<p><strong>19ಕ್ಕೂ ಹೆಚ್ಚು ಪ್ರಕರಣ ದಾಖಲು:</strong> ಪಿಎಸ್ಐ ಹಗರಣ, ಕೆಇಎ ಬ್ಲೂಟೂತ್ ಅಕ್ರಮ, ಕೌಟುಂಬಿಕ ಪ್ರಕರಣದ ಸೇರಿ ಆರ್.ಡಿ. ಪಾಟೀಲ ವಿರುದ್ಧ 19ಕ್ಕೂ ಹೆಚ್ಚು ಪ್ರಕರಣಗಳು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಿಎಸ್ಐ ಹಗರಣ ಹಾಗೂ ಕೆಇಎ ನೇಮಕಾತಿ ಪರೀಕ್ಷೆ ಬರೆಯಲು ಹಣ ಪಡೆದು ಬ್ಲೂಟೂತ್ ನೀಡಿದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಮುಂದೂಡಿದೆ. </p>.<p>ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪಾಟೀಲ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ನ್ಯಾಯಪೀಠ ಈ ಹಿಂದೆ ವಜಾಗೊಳಿಸಿತ್ತು. ಆ ಬಳಿಕ, ವೈದ್ಯಕೀಯ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಚಿಸಿತ್ತು. ಆರೋಪಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ ಎಂದು ಸಂಸ್ಥೆ ವರದಿ ನೀಡಿತ್ತು. </p>.<p>ವಾದ ಮಂಡನೆಗೆ ಒಂದು ವಾರಗಳ ಕಾಲಾವಕಾಶ ನೀಡಬೇಕು ಎಂದು ಪಾಟೀಲ ಪರ ವಕೀಲರು ಕೋರಿದರು. ಪೀಠವು ವಿಚಾರಣೆ ಮುಂದೂಡಿತು. ಕರ್ನಾಟಕ ಸರ್ಕಾರದ ಪರ ವಕೀಲ ಡಿ.ಎಲ್.ಚಿದಾನಂದ ವಾದಿಸಿದರು. </p>.<p>ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಸಂಬಂಧ ಹೈಕೋರ್ಟ್ನ ಕಲಬುರಗಿ ಪೀಠದಿಂದ ಷರತ್ತುಬದ್ಧ ಜಾಮೀನು ಪಡೆದಿದ್ದ ಪಾಟೀಲ ಬಿಡುಗಡೆಯಾದ ದಿನದಿಂದಲೇ ನಾಪತ್ತೆಯಾಗಿದ್ದ. ಸಿಐಡಿ ಪೊಲೀಸರು ಹಲವು ನೋಟಿಸ್ ಜಾರಿಗೊಳಿಸಿದ್ದರೂ ಹಾಜರಿ ಆಗಿರಲಿಲ್ಲ. ಕೆಲ ದಿನಗಳ ಬಳಿಕ ಹಾಜರಾಗಿದ್ದ. ಕೆಇಎ ಪ್ರಕರಣದಲ್ಲೂ ತಲೆಮರೆಸಿಕೊಂಡಿದ್ದ. </p>.<p><strong>19ಕ್ಕೂ ಹೆಚ್ಚು ಪ್ರಕರಣ ದಾಖಲು:</strong> ಪಿಎಸ್ಐ ಹಗರಣ, ಕೆಇಎ ಬ್ಲೂಟೂತ್ ಅಕ್ರಮ, ಕೌಟುಂಬಿಕ ಪ್ರಕರಣದ ಸೇರಿ ಆರ್.ಡಿ. ಪಾಟೀಲ ವಿರುದ್ಧ 19ಕ್ಕೂ ಹೆಚ್ಚು ಪ್ರಕರಣಗಳು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>