ಅಹಮದ್ನಗರ ಜಿಲ್ಲೆಯ ರಾಳೆಗಾಂವ್ ಸಿದ್ಧಿ ಗ್ರಾಮದಲ್ಲಿ ಭಾನುವಾರ ತಮ್ಮ ಆತ್ಮಚರಿತ್ರೆ ‘ಜನನಾಯಕ ಅಣ್ಣಾ ಹಜಾರೆ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕ ಚಳವಳಿಯಿಂದ ಸ್ವಾತಂತ್ರ್ಯವನ್ನು ಪಡೆಯುವ ಮೂಲಕ ಮಹಾತ್ಮ ಗಾಂಧಿ ಅವರು ಹಾಕಿಕೊಟ್ಟ ಮಾರ್ಗವನ್ನು ನಾವು ಮರೆಯಬಾರದು. ಭವಿಷ್ಯದ ಭಾರತಕ್ಕಾಗಿ ಸಾರ್ವಜನಿಕ ಚಳವಳಿಗಳು ಅಗತ್ಯ’ ಎಂದು ಪ್ರತಿಪಾದಿಸಿದರು.