<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಝಾರ್ಗ್ರಾಮ್ನಲ್ಲಿ ಗ್ರಾಮಸ್ಥರು ಹೆಣ್ಣಾನೆಯೊಂದಕ್ಕೆ ಬೆಂಕಿ ಹಚ್ಚಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.</p><p>ಕೆಲ ನೆಟ್ಟಿಗರ ಪ್ರಕಾರ, ಆನೆಯು ಗರ್ಭ ಧರಿಸಿದೆ. ಬೆಂಕಿ ಜ್ವಾಲೆಯ ಸರಳುಗಳನ್ನು ಸಮೀಪದ ಮನೆಯಿಂದ ಅದರ ಮೇಲೆ ಎಸೆಯುತ್ತಿದ್ದು, ಗಾಯಗೊಂಡ ಹೆಣ್ಣಾನೆ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ತೀವ್ರ ಸುಟ್ಟ ಗಾಯಗಳಿಂದ ನರಳಿದ ಆನೆ ರಸ್ತೆ ಮೇಲೆ ಬೀಳುತ್ತಿದ್ದಂತೆ ವಿಡಿಯೊ ಅಂತ್ಯವಾಗುತ್ತದೆ.</p><p>ಈ ಕುರಿತಂತೆ ಪ್ರತಿಕ್ರಿಯೆಗೆ ಪಶ್ಚಿಮ ಬಂಗಾಳದ ಅರಣ್ಯ ಸಚಿವ ಬಿರ್ಬಾಹಾ ಹನ್ಸಾದಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಪಿಟಿಐ ಹೇಳಿದೆ. ‘ಘಟನೆ ಕುರಿತಂತೆ ನಮಗೆ ಮಾಹಿತಿ ಸಿಕ್ಕಿದೆ. ವಿಡಿಯೊ ನೋಡಿದ್ದೇವೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ಹಿರಿಯ ಅರಣ್ಯಾಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.</p><p>ಬೀದಿನಾಯಿಗಳಿಗೆ ಕಿರುಕುಳ ಕುರಿತಂತೆ ಸಿನಿಮಾ ಮಾಡಿದ್ದ ನಿರ್ದೇಶಕ ತಥಾಗತ ಮುಖರ್ಜಿ, ಆನೆ ಮೇಲೆ ದೌರ್ಜನ್ಯದ ವಿಡಿಯೊವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ‘ಕಾಡಾನೆಗಳ ನಿರ್ವಹಣೆಯಲ್ಲಿ ತೊಡಗಿದ್ದ ಸ್ಥಳೀಯರು ಅರಣ್ಯ ಸಚಿವರ ಕ್ಷೇತ್ರದಲ್ಲೇ ಗರ್ಭ ಧರಿಸಿದ್ದ ಆನೆಯನ್ನು ಕೊಂದು ಹಾಕಿದ್ದಾರೆ. ಈ ಬಗ್ಗೆ ಎಲ್ಲರೂ ಮೌನವಹಿಸಿದ್ದಾರೆ’ಎಂದು ಬರೆದುಕೊಂಡಿದ್ದಾರೆ.</p><p>ನಟಿ ಶ್ರೀಲೇಖಾ ಮಿತ್ರಾ ಸಹ ಈ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ನಾವು ವಿನಾಶದತ್ತ ಹೋಗುತ್ತಿದ್ದೇವೆಯೇ? ಪ್ರಾಣಿಗಳ ಮೇಲಿನ ಇಂತಹ ಹಿಂಸಾಚಾರ ಮತ್ತು ಆಕ್ರಮಣವನ್ನು ನಾನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಝಾರ್ಗ್ರಾಮ್ನಲ್ಲಿ ಗ್ರಾಮಸ್ಥರು ಹೆಣ್ಣಾನೆಯೊಂದಕ್ಕೆ ಬೆಂಕಿ ಹಚ್ಚಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.</p><p>ಕೆಲ ನೆಟ್ಟಿಗರ ಪ್ರಕಾರ, ಆನೆಯು ಗರ್ಭ ಧರಿಸಿದೆ. ಬೆಂಕಿ ಜ್ವಾಲೆಯ ಸರಳುಗಳನ್ನು ಸಮೀಪದ ಮನೆಯಿಂದ ಅದರ ಮೇಲೆ ಎಸೆಯುತ್ತಿದ್ದು, ಗಾಯಗೊಂಡ ಹೆಣ್ಣಾನೆ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ತೀವ್ರ ಸುಟ್ಟ ಗಾಯಗಳಿಂದ ನರಳಿದ ಆನೆ ರಸ್ತೆ ಮೇಲೆ ಬೀಳುತ್ತಿದ್ದಂತೆ ವಿಡಿಯೊ ಅಂತ್ಯವಾಗುತ್ತದೆ.</p><p>ಈ ಕುರಿತಂತೆ ಪ್ರತಿಕ್ರಿಯೆಗೆ ಪಶ್ಚಿಮ ಬಂಗಾಳದ ಅರಣ್ಯ ಸಚಿವ ಬಿರ್ಬಾಹಾ ಹನ್ಸಾದಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಪಿಟಿಐ ಹೇಳಿದೆ. ‘ಘಟನೆ ಕುರಿತಂತೆ ನಮಗೆ ಮಾಹಿತಿ ಸಿಕ್ಕಿದೆ. ವಿಡಿಯೊ ನೋಡಿದ್ದೇವೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ’ ಎಂದು ಹಿರಿಯ ಅರಣ್ಯಾಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.</p><p>ಬೀದಿನಾಯಿಗಳಿಗೆ ಕಿರುಕುಳ ಕುರಿತಂತೆ ಸಿನಿಮಾ ಮಾಡಿದ್ದ ನಿರ್ದೇಶಕ ತಥಾಗತ ಮುಖರ್ಜಿ, ಆನೆ ಮೇಲೆ ದೌರ್ಜನ್ಯದ ವಿಡಿಯೊವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ‘ಕಾಡಾನೆಗಳ ನಿರ್ವಹಣೆಯಲ್ಲಿ ತೊಡಗಿದ್ದ ಸ್ಥಳೀಯರು ಅರಣ್ಯ ಸಚಿವರ ಕ್ಷೇತ್ರದಲ್ಲೇ ಗರ್ಭ ಧರಿಸಿದ್ದ ಆನೆಯನ್ನು ಕೊಂದು ಹಾಕಿದ್ದಾರೆ. ಈ ಬಗ್ಗೆ ಎಲ್ಲರೂ ಮೌನವಹಿಸಿದ್ದಾರೆ’ಎಂದು ಬರೆದುಕೊಂಡಿದ್ದಾರೆ.</p><p>ನಟಿ ಶ್ರೀಲೇಖಾ ಮಿತ್ರಾ ಸಹ ಈ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ನಾವು ವಿನಾಶದತ್ತ ಹೋಗುತ್ತಿದ್ದೇವೆಯೇ? ಪ್ರಾಣಿಗಳ ಮೇಲಿನ ಇಂತಹ ಹಿಂಸಾಚಾರ ಮತ್ತು ಆಕ್ರಮಣವನ್ನು ನಾನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>