<p><strong>ಪುದುಚೇರಿ</strong>: ಪುದುಚೇರಿಯ ವಿಧಾನಸಭೆ ಅಧಿವೇಶನಕ್ಕೆ ಆರ್.ಶಿವ ನೇತೃತ್ವದ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ (ಡಿಎಂಕೆ) ಆರು ಮಂದಿ ಶಾಸಕರು ಶುಕ್ರವಾರ ಶಾಲಾ ಸಮವಸ್ತ್ರ ಹಾಗೂ ಬ್ಯಾಗ್ ಧರಿಸಿ ಬಂದಿದ್ದರು.</p>.<p>ಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಸಮವಸ್ತ್ರ ವಿತರಿಸದ ಸರ್ಕಾರದ ಕ್ರಮವನ್ನು ಖಂಡಿಸಿದ ಅವರು ಈ ರೀತಿ ಪ್ರತಿಭಟಿಸಿದರು.</p>.<p>ಅಲ್ಲದೆ, ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡುವ ಕುರಿತು ನಿರ್ಣಯವನ್ನು ತರುವಂತೆಯೂ ಸರ್ಕಾರವನ್ನು ಒತ್ತಾಯಿಸಿದರು. ‘ನಮಗೆ ರಾಜ್ಯದ ಸ್ಥಾನಮಾನ ಬೇಕು. ಈ ವಿಷಯದಲ್ಲಿ ಪುದುಚೇರಿಯನ್ನು ಕೆರಳಿಸಬಾರದು’ ಎಂದು ಒಟ್ಟಿಗೇ ಕೂಗಿದರು.</p>.<p>ಸ್ಪೀಕರ್ ಸೆಲ್ವಂ ಅವರು ಸದಸ್ಯರಿಗೆ ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿಕೊಂಡರೂ ಅವರು ಕೇಳಲಿಲ್ಲ.</p>.<p>ನಂತರ ಎಲ್ಲ ಡಿಎಂಕೆ ಶಾಸಕರೂ ಸಭಾತ್ಯಾಗ ಮಾಡಿದರೂ ಸ್ವಲ್ಪ ಸಮಯದ ಬಳಿಕ ಸದನಕ್ಕೆ ಹಿಂದಿರುಗಿದರು. ಇದಕ್ಕೂ ಮುನ್ನ ಇಬ್ಬರು ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದರು.</p>.<p>ಈ ಗಲಾಟೆಯ ಮಧ್ಯದಲ್ಲೇ ಮುಖ್ಯಮಂತ್ರಿ ಎನ್. ರಂಗಸಾಮಿ ಮತ್ತು ಅವರ ಸಂಪುಟ ಸಚಿವರು 2022-2023ರ ಸಾಲಿನಲ್ಲಿ ತಮ್ಮ ಇಲಾಖೆಗಳಿಗೆ ಬೇಕಾದ ಹೆಚ್ಚುವರಿ ಅನುದಾನಕ್ಕಾಗಿ ಇಟ್ಟ ಬೇಡಿಕೆಗಳನ್ನು ಸದನವು ಅಂಗೀಕರಿಸಿತು. ಮುಖ್ಯಮಂತ್ರಿ ಮಂಡಿಸಿದ ಧನವಿನಿಯೋಗ ವಿಧೇಯಕವನ್ನೂ ಸದನ ಅಂಗೀಕರಿಸಿತು. ಕೇವಲ 24 ನಿಮಿಷಗಳ ಅವಧಿಗೆ ಅಧಿವೇಶನ ನಡೆಸಿದ ಸ್ಪೀಕರ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೇರಿ</strong>: ಪುದುಚೇರಿಯ ವಿಧಾನಸಭೆ ಅಧಿವೇಶನಕ್ಕೆ ಆರ್.ಶಿವ ನೇತೃತ್ವದ, ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ (ಡಿಎಂಕೆ) ಆರು ಮಂದಿ ಶಾಸಕರು ಶುಕ್ರವಾರ ಶಾಲಾ ಸಮವಸ್ತ್ರ ಹಾಗೂ ಬ್ಯಾಗ್ ಧರಿಸಿ ಬಂದಿದ್ದರು.</p>.<p>ಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಸಮವಸ್ತ್ರ ವಿತರಿಸದ ಸರ್ಕಾರದ ಕ್ರಮವನ್ನು ಖಂಡಿಸಿದ ಅವರು ಈ ರೀತಿ ಪ್ರತಿಭಟಿಸಿದರು.</p>.<p>ಅಲ್ಲದೆ, ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡುವ ಕುರಿತು ನಿರ್ಣಯವನ್ನು ತರುವಂತೆಯೂ ಸರ್ಕಾರವನ್ನು ಒತ್ತಾಯಿಸಿದರು. ‘ನಮಗೆ ರಾಜ್ಯದ ಸ್ಥಾನಮಾನ ಬೇಕು. ಈ ವಿಷಯದಲ್ಲಿ ಪುದುಚೇರಿಯನ್ನು ಕೆರಳಿಸಬಾರದು’ ಎಂದು ಒಟ್ಟಿಗೇ ಕೂಗಿದರು.</p>.<p>ಸ್ಪೀಕರ್ ಸೆಲ್ವಂ ಅವರು ಸದಸ್ಯರಿಗೆ ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿಕೊಂಡರೂ ಅವರು ಕೇಳಲಿಲ್ಲ.</p>.<p>ನಂತರ ಎಲ್ಲ ಡಿಎಂಕೆ ಶಾಸಕರೂ ಸಭಾತ್ಯಾಗ ಮಾಡಿದರೂ ಸ್ವಲ್ಪ ಸಮಯದ ಬಳಿಕ ಸದನಕ್ಕೆ ಹಿಂದಿರುಗಿದರು. ಇದಕ್ಕೂ ಮುನ್ನ ಇಬ್ಬರು ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದರು.</p>.<p>ಈ ಗಲಾಟೆಯ ಮಧ್ಯದಲ್ಲೇ ಮುಖ್ಯಮಂತ್ರಿ ಎನ್. ರಂಗಸಾಮಿ ಮತ್ತು ಅವರ ಸಂಪುಟ ಸಚಿವರು 2022-2023ರ ಸಾಲಿನಲ್ಲಿ ತಮ್ಮ ಇಲಾಖೆಗಳಿಗೆ ಬೇಕಾದ ಹೆಚ್ಚುವರಿ ಅನುದಾನಕ್ಕಾಗಿ ಇಟ್ಟ ಬೇಡಿಕೆಗಳನ್ನು ಸದನವು ಅಂಗೀಕರಿಸಿತು. ಮುಖ್ಯಮಂತ್ರಿ ಮಂಡಿಸಿದ ಧನವಿನಿಯೋಗ ವಿಧೇಯಕವನ್ನೂ ಸದನ ಅಂಗೀಕರಿಸಿತು. ಕೇವಲ 24 ನಿಮಿಷಗಳ ಅವಧಿಗೆ ಅಧಿವೇಶನ ನಡೆಸಿದ ಸ್ಪೀಕರ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>