<p><strong>ನವದೆಹಲಿ</strong>: ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್(32) ಅವರ ನೇಮಕಾತಿ ಆದೇಶವನ್ನು ರದ್ದುಗೊಳಿಸಿರುವ ಸಂಬಂಧ ಎರಡು ದಿನಗಳ ಒಳಗೆ ಆದೇಶ ಪತ್ರವನ್ನು ತಲುಪಿಸಲಾಗುವುದು ಎಂದು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ದೆಹಲಿ ಹೈಕೋರ್ಟ್ಗೆ ಬುಧವಾರ ಮಾಹಿತಿ ನೀಡಿದೆ.</p>.<p>ಆಯೋಗವು ತಮ್ಮ ನೇಮಕಾತಿಯನ್ನು ರದ್ದುಗೊಳಿಸಿರುವುದಾಗಿ ಮಾಧ್ಯಮ ಪ್ರಕಟಣೆಯಲ್ಲಿ ಘೋಷಿಸಿದ್ದ ಕ್ರಮವನ್ನು ಪ್ರಶ್ನಿಸಿ ಖೇಡ್ಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠ ವಜಾಗೊಳಿಸಿತು.</p>.<p>ಖೇಡ್ಕರ್ ಪರ ವಕಾಲತ್ತು ನಡೆಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ನೇಮಕಾತಿ ವಜಾ ಮಾಡಿರುವ ಬಗ್ಗೆ ಆಯೋಗವು ತಮ್ಮ ಕಕ್ಷಿದಾರರಿಗೆ ಮಾಹಿತಿ ನೀಡಿಲ್ಲ ಹಾಗೂ ಮಾಧ್ಯಮ ಪ್ರಕಟಣೆಯಿಂದಷ್ಟೆ ಈ ವಿಚಾರ ತಮ್ಮ ಗಮನಕ್ಕೆ ಬಂದಿದ್ದಾಗಿ ಆರೋಪಿಸಿದರು. ಆಗ, ಆಯೋಗದ ಪರ ವಕೀಲ ನರೇಶ್ ಕೌಶಿಕ್ ಮಾತನಾಡಿ, ನೇಮಕಾತಿ ರದ್ದತಿ ಆದೇಶವನ್ನು ಎರಡು ದಿನಗಳ ಒಳಗಾಗಿ ಖೇಡ್ಕರ್ ಅವರ ಇಮೇಲ್ ಹಾಗೂ ವಿಳಾಸಕ್ಕೆ ಕಳುಹಿಸಲಾಗುವುದು ಎಂದರು.</p>.<p>ಯುಪಿಎಸ್ಸಿಗೆ ತಮ್ಮ ವಿಳಾಸವನ್ನು ನೀಡುವಂತೆ ಖೇಡ್ಕರ್ ಅವರಿಗೆ ಸೂಚಿಸಿದ ಪೀಠ, ನೇಮಕಾತಿಯನ್ನು ರದ್ದುಪಡಿಸಿರುವ ಬಗ್ಗೆ ಆಕ್ಷೇಪಗಳಿದ್ದರೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ(ಸಿಎಟಿ) ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿತು.</p>.<p>ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ (32) ಅವರ ನೇಮಕಾತಿ ಆದೇಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಜುಲೈ 31ರಂದು ರದ್ದುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್(32) ಅವರ ನೇಮಕಾತಿ ಆದೇಶವನ್ನು ರದ್ದುಗೊಳಿಸಿರುವ ಸಂಬಂಧ ಎರಡು ದಿನಗಳ ಒಳಗೆ ಆದೇಶ ಪತ್ರವನ್ನು ತಲುಪಿಸಲಾಗುವುದು ಎಂದು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ದೆಹಲಿ ಹೈಕೋರ್ಟ್ಗೆ ಬುಧವಾರ ಮಾಹಿತಿ ನೀಡಿದೆ.</p>.<p>ಆಯೋಗವು ತಮ್ಮ ನೇಮಕಾತಿಯನ್ನು ರದ್ದುಗೊಳಿಸಿರುವುದಾಗಿ ಮಾಧ್ಯಮ ಪ್ರಕಟಣೆಯಲ್ಲಿ ಘೋಷಿಸಿದ್ದ ಕ್ರಮವನ್ನು ಪ್ರಶ್ನಿಸಿ ಖೇಡ್ಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠ ವಜಾಗೊಳಿಸಿತು.</p>.<p>ಖೇಡ್ಕರ್ ಪರ ವಕಾಲತ್ತು ನಡೆಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ನೇಮಕಾತಿ ವಜಾ ಮಾಡಿರುವ ಬಗ್ಗೆ ಆಯೋಗವು ತಮ್ಮ ಕಕ್ಷಿದಾರರಿಗೆ ಮಾಹಿತಿ ನೀಡಿಲ್ಲ ಹಾಗೂ ಮಾಧ್ಯಮ ಪ್ರಕಟಣೆಯಿಂದಷ್ಟೆ ಈ ವಿಚಾರ ತಮ್ಮ ಗಮನಕ್ಕೆ ಬಂದಿದ್ದಾಗಿ ಆರೋಪಿಸಿದರು. ಆಗ, ಆಯೋಗದ ಪರ ವಕೀಲ ನರೇಶ್ ಕೌಶಿಕ್ ಮಾತನಾಡಿ, ನೇಮಕಾತಿ ರದ್ದತಿ ಆದೇಶವನ್ನು ಎರಡು ದಿನಗಳ ಒಳಗಾಗಿ ಖೇಡ್ಕರ್ ಅವರ ಇಮೇಲ್ ಹಾಗೂ ವಿಳಾಸಕ್ಕೆ ಕಳುಹಿಸಲಾಗುವುದು ಎಂದರು.</p>.<p>ಯುಪಿಎಸ್ಸಿಗೆ ತಮ್ಮ ವಿಳಾಸವನ್ನು ನೀಡುವಂತೆ ಖೇಡ್ಕರ್ ಅವರಿಗೆ ಸೂಚಿಸಿದ ಪೀಠ, ನೇಮಕಾತಿಯನ್ನು ರದ್ದುಪಡಿಸಿರುವ ಬಗ್ಗೆ ಆಕ್ಷೇಪಗಳಿದ್ದರೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ(ಸಿಎಟಿ) ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿತು.</p>.<p>ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ (32) ಅವರ ನೇಮಕಾತಿ ಆದೇಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಜುಲೈ 31ರಂದು ರದ್ದುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>