ಕಳೆದ ವರ್ಷ ಫೆಬ್ರವರಿ 14 ರಂದು ಬೆಂಗಾವಲಿನಲ್ಲಿ ಪ್ರಯಾಣಿಸುತ್ತಿದ್ದ 40 ಕ್ಕೂ ಹೆಚ್ಚು ಸಿಆರ್ಪಿಎಫ್ ಸೈನಿಕರು ಆತ್ಮಾಹುತಿ ಬಾಂಬರ್ ಸ್ಫೋಟಿಸಿದ ಬಾಂಬ್ ದಾಳಿಯಲ್ಲಿ ಹುತಾತ್ಮರಾಗಿದ್ದರು.ಸುಮಾರು 35 ಕೆಜಿ ಆರ್ಡಿಎಕ್ಸ್ ಸ್ಫೋಟಕ ಹೊಂದಿದ್ದಕಾರೊಂದನ್ನು ನುಗ್ಗಿಸಿ ಈ ದಾಳಿ ನಡೆಸಲಾಗಿತ್ತು. ಇದಾಗಿ ಕೆಲವು ವಾರಗಳ ನಂತರ, ಪಾಕಿಸ್ತಾನದ ಬಾಲಕೋಟ್ನಲ್ಲಿ ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿತ್ತು.