ಇಲಾಖೆಯ ಉಪ ಆಯುಕ್ತ ಶ್ರೇಣಿಯ ಅಧಿಕಾರಿಯೊಬ್ಬರು ಸಮಿತಿಯ ನೇತೃತ್ವ ವಹಿಸಿದ್ದು, ಮುಂದಿನ ವಾರ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದು, ಘಟನೆ ನಡೆಯುವ ವೇಳೆ ಬಾಲಕ ಪಾನಮತ್ತನಾಗಿದ್ದ ಎಂದು ಪೊಲೀಸರು ಹೇಳಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ 300 ಪದಗಳ ಪ್ರಬಂಧ ಬರೆಯುವಂತೆ ಬಾಲಕನಿಗೆ ಹೇಳಿ ಬಾಲನ್ಯಾಯ ಮಂಡಳಿ ಜಾಮೀನು ನೀಡಿತ್ತು. ಇದು ದೇಶಾದ್ಯಂತ ಟೀಕೆಗೆ ಗುರಿಯಾಗಿತ್ತು.