<p><strong>ಪುಣೆ:</strong> ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ನಕಲಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪದ ಮೇಲೆ ಪುಣೆ ಮೂಲದ ಕಾಲೇಜಿನ ರಸಾಯನಶಾಸ್ತ್ರ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಾಘೋಲಿಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವೀರೇಂದ್ರ ಸಿಂಗ್ ಯಾದವ್ ಬಂಧಿತ ಆರೋಪಿ. </p>.<p>2025–26ನೇ ಸಾಲಿನ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ಕ್ಕೆ ಆಯ್ಕೆಯಾಗಿರುವುದಾಗಿ ವೀರೇಂದ್ರ ಸಿಂಗ್ ಅವರು ನಕಲಿ ಪತ್ರವೊಂದನ್ನು ಸೃಷ್ಟಿಸಿಕೊಂಡಿದ್ದರು. ರಾಷ್ಟ್ರೀಯ ರಸಾಯನಿಕ ಪ್ರಯೋಗಾಲಯದ (ಎನ್ಸಿಎಲ್) ಭದ್ರತಾ ಅಧಿಕಾರಿಯೊಬ್ಬರು ಈ ಬಗ್ಗೆ ದೂರು ನೀಡಿದ್ದರು.</p>.<p>ವೀರೇಂದ್ರ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 318 (4) (ವಂಚನೆ) ಹಾಗೂ ಇತರ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಶಾಂತಿ ಸ್ವರೂಪ ಭಟ್ನಾಗರ ಪ್ರಶಸ್ತಿ’ಯನ್ನು 2022ರಲ್ಲಿ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ ಎಂದು ಮರುನಾಮಕರಣ ಮಾಡಲಾಯಿತು. ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರದಲ್ಲಿನ ಅತ್ಯುನ್ನತ ಸಾಧನೆಗೆ ಈ ಗೌರವವನ್ನು ನೀಡಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ನಕಲಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪದ ಮೇಲೆ ಪುಣೆ ಮೂಲದ ಕಾಲೇಜಿನ ರಸಾಯನಶಾಸ್ತ್ರ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಾಘೋಲಿಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವೀರೇಂದ್ರ ಸಿಂಗ್ ಯಾದವ್ ಬಂಧಿತ ಆರೋಪಿ. </p>.<p>2025–26ನೇ ಸಾಲಿನ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ಕ್ಕೆ ಆಯ್ಕೆಯಾಗಿರುವುದಾಗಿ ವೀರೇಂದ್ರ ಸಿಂಗ್ ಅವರು ನಕಲಿ ಪತ್ರವೊಂದನ್ನು ಸೃಷ್ಟಿಸಿಕೊಂಡಿದ್ದರು. ರಾಷ್ಟ್ರೀಯ ರಸಾಯನಿಕ ಪ್ರಯೋಗಾಲಯದ (ಎನ್ಸಿಎಲ್) ಭದ್ರತಾ ಅಧಿಕಾರಿಯೊಬ್ಬರು ಈ ಬಗ್ಗೆ ದೂರು ನೀಡಿದ್ದರು.</p>.<p>ವೀರೇಂದ್ರ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 318 (4) (ವಂಚನೆ) ಹಾಗೂ ಇತರ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಶಾಂತಿ ಸ್ವರೂಪ ಭಟ್ನಾಗರ ಪ್ರಶಸ್ತಿ’ಯನ್ನು 2022ರಲ್ಲಿ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ’ ಎಂದು ಮರುನಾಮಕರಣ ಮಾಡಲಾಯಿತು. ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರದಲ್ಲಿನ ಅತ್ಯುನ್ನತ ಸಾಧನೆಗೆ ಈ ಗೌರವವನ್ನು ನೀಡಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>