ವಕೀಲರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಾಂಧಿ, ‘ಭಿಡೆ ಅವರು ಬಾಪು ವಿರುದ್ಧವಷ್ಟೇ ಹೇಳಿಕೆ ನೀಡಿಲ್ಲ. ಅವರ ಕುಟುಂಬದವರನ್ನೂ ನಿಂದಿಸಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದರು. ಆದರೆ ಇದೂವರೆಗೂ ಕ್ರಮ ಜರುಗಿಸಿಲ್ಲ’ ಎಂದು ದೂರಿದರು.