<p><strong>ಪಟಿಯಾಲ</strong>: ಪಂಜಾಬ್ನ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಅವರನ್ನು ಅತ್ಯಾಚಾರ ಆರೋಪದಲ್ಲಿ ಬಂಧಿಸಿ ಕರೆದೊಯ್ಯುವಾಗ ಬೆಂಬಲಿಗರು ಗಲಾಟೆ ಎಬ್ಬಿಸಿದ್ದರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. </p><p>ಹರಿಯಾಣದ ಕರ್ನಾಲ್ ಜಿಲ್ಲೆಯ ಡಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್ ಅವರನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಅವರ ಬೆಂಗಲಿಗರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ.</p><p>‘ಹರ್ಮೀತ್ ಅವರ ಮನೆಯ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಲಾಯಿತು. ಆದರೆ ಗ್ರಾಮಸ್ಥರ ಗುಂಪು ಮತ್ತು ಕೆಲವು ಕಿಡಿಗೇಡಿಗಳು ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ನಡೆಸಿ ಗುಂಡು ಹಾರಿಸಿದ್ದಾರೆ’ ಎಂದು ಪಟಿಯಾಲ ಅಪರಾಧ ತನಿಖಾ ಏಜೆನ್ಸಿಯ (ಸಿಐಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪಂಜಾಬ್ನ ಸನೌರ್ ಕ್ಷೇತ್ರದ ಶಾಸಕರಾಗಿರುವ ಹರ್ಮೀತ್ ಅವರು ಈ ವೇಳೆ ಬಂಧನದಿಂದ ತಪ್ಪಿಸಿಕೊಂಡು ಪರಾರಿಯಾದರು ಎಂದು ಹೇಳಿದ್ದಾರೆ.</p>.ವ್ಯಾಪಾರ ಒಪ್ಪಂದಕ್ಕಾಗಿ ಅಮೆರಿಕದೊಂದಿಗೆ ಭಾರತ ಮಾತುಕತೆ: ಸಚಿವ ಪಿಯೂಷ್ ಗೋಯಲ್.Semicon India | ಜಾಗತಿಕ ಅನಿಶ್ಚಿತತೆ ನಡುವೆ ಭಾರತದ ಆರ್ಥಿಕತೆ ಪ್ರಗತಿ: ಮೋದಿ.<p>ಶಾಸಕನ ಆಪ್ತ ಬಲ್ವಿಂದರ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಟೊಯೊಟ ಫಾರ್ಚುನರ್ ಕಾರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. </p><p>ಹರ್ಮೀತ್ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ಅತ್ಯಾಚಾರ, ವಂಚನೆ ಮತ್ತು ಬೆದರಿಕೆ ಹಾಕಿದ ಆರೋಪ ಹೊರಿಸಲಾಗಿದೆ. ಮೊಹಾಲಿ ಜಿಲ್ಲೆಯ ಜೀಕರ್ಪುರದ ಮಹಿಳೆಯೊಬ್ಬರು ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿದೆ.</p><p>ಶಾಸಕರು ವಿಚ್ಛೇದಿತ ಎಂದು ಬಿಂಬಿಸಿ ಸಲುಗೆ ಬೆಳೆಸಿಕೊಂಡರಲ್ಲದೆ, 2021ರಲ್ಲಿ ತನ್ನನ್ನು ಮದುವೆಯಾಗಿದ್ದಾರೆ. ನಿರಂತರ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.</p>.ಜೂನಿಯರ್ ಎನ್ಟಿಆರ್ಗೆ ನಾಯಕಿಯಾಗಿ ರುಕ್ಮಿಣಿ ವಸಂತ್?.ಜಮ್ಮುವಿನಲ್ಲಿ ಮುಂದುವರಿದ ಮಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ.<p>ಎಫ್ಐಆರ್ ದಾಖಲಾದ ಬೆನ್ನಲ್ಲೇ ಫೇಸ್ಬುಕ್ನಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದ ಹರ್ಮೀತ್, ಪಂಜಾಬ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ದೆಹಲಿ ಎಎಪಿ ನಾಯಕತ್ವ ‘ಪಂಜಾಬ್ನಲ್ಲಿ ಕಾನೂನುಬಾಹಿರವಾಗಿ ಆಡಳಿತ ನಡೆಸುತ್ತಿದೆ’ ಎಂದು ಆರೋಪಿಸಿದ್ದರು.</p> .Lunar Eclipse: ಈ ವಾರದ ಚಂದ್ರಗ್ರಹಣ ಅಪಾಯ ತರುವ ರಕ್ತ ಚಂದ್ರಗ್ರಹಣವೇ?.Visual Story | ಗುಲಾಬಿ ಸೀರೆಯಲ್ಲಿ ಕಂಗೊಳಿಸಿದ ನಟಿ ಗೌತಮಿ ಜಾಧವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟಿಯಾಲ</strong>: ಪಂಜಾಬ್ನ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಅವರನ್ನು ಅತ್ಯಾಚಾರ ಆರೋಪದಲ್ಲಿ ಬಂಧಿಸಿ ಕರೆದೊಯ್ಯುವಾಗ ಬೆಂಬಲಿಗರು ಗಲಾಟೆ ಎಬ್ಬಿಸಿದ್ದರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. </p><p>ಹರಿಯಾಣದ ಕರ್ನಾಲ್ ಜಿಲ್ಲೆಯ ಡಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್ ಅವರನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಅವರ ಬೆಂಗಲಿಗರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ.</p><p>‘ಹರ್ಮೀತ್ ಅವರ ಮನೆಯ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಲಾಯಿತು. ಆದರೆ ಗ್ರಾಮಸ್ಥರ ಗುಂಪು ಮತ್ತು ಕೆಲವು ಕಿಡಿಗೇಡಿಗಳು ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ನಡೆಸಿ ಗುಂಡು ಹಾರಿಸಿದ್ದಾರೆ’ ಎಂದು ಪಟಿಯಾಲ ಅಪರಾಧ ತನಿಖಾ ಏಜೆನ್ಸಿಯ (ಸಿಐಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪಂಜಾಬ್ನ ಸನೌರ್ ಕ್ಷೇತ್ರದ ಶಾಸಕರಾಗಿರುವ ಹರ್ಮೀತ್ ಅವರು ಈ ವೇಳೆ ಬಂಧನದಿಂದ ತಪ್ಪಿಸಿಕೊಂಡು ಪರಾರಿಯಾದರು ಎಂದು ಹೇಳಿದ್ದಾರೆ.</p>.ವ್ಯಾಪಾರ ಒಪ್ಪಂದಕ್ಕಾಗಿ ಅಮೆರಿಕದೊಂದಿಗೆ ಭಾರತ ಮಾತುಕತೆ: ಸಚಿವ ಪಿಯೂಷ್ ಗೋಯಲ್.Semicon India | ಜಾಗತಿಕ ಅನಿಶ್ಚಿತತೆ ನಡುವೆ ಭಾರತದ ಆರ್ಥಿಕತೆ ಪ್ರಗತಿ: ಮೋದಿ.<p>ಶಾಸಕನ ಆಪ್ತ ಬಲ್ವಿಂದರ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಟೊಯೊಟ ಫಾರ್ಚುನರ್ ಕಾರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. </p><p>ಹರ್ಮೀತ್ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ಅತ್ಯಾಚಾರ, ವಂಚನೆ ಮತ್ತು ಬೆದರಿಕೆ ಹಾಕಿದ ಆರೋಪ ಹೊರಿಸಲಾಗಿದೆ. ಮೊಹಾಲಿ ಜಿಲ್ಲೆಯ ಜೀಕರ್ಪುರದ ಮಹಿಳೆಯೊಬ್ಬರು ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿದೆ.</p><p>ಶಾಸಕರು ವಿಚ್ಛೇದಿತ ಎಂದು ಬಿಂಬಿಸಿ ಸಲುಗೆ ಬೆಳೆಸಿಕೊಂಡರಲ್ಲದೆ, 2021ರಲ್ಲಿ ತನ್ನನ್ನು ಮದುವೆಯಾಗಿದ್ದಾರೆ. ನಿರಂತರ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.</p>.ಜೂನಿಯರ್ ಎನ್ಟಿಆರ್ಗೆ ನಾಯಕಿಯಾಗಿ ರುಕ್ಮಿಣಿ ವಸಂತ್?.ಜಮ್ಮುವಿನಲ್ಲಿ ಮುಂದುವರಿದ ಮಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ.<p>ಎಫ್ಐಆರ್ ದಾಖಲಾದ ಬೆನ್ನಲ್ಲೇ ಫೇಸ್ಬುಕ್ನಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದ ಹರ್ಮೀತ್, ಪಂಜಾಬ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ದೆಹಲಿ ಎಎಪಿ ನಾಯಕತ್ವ ‘ಪಂಜಾಬ್ನಲ್ಲಿ ಕಾನೂನುಬಾಹಿರವಾಗಿ ಆಡಳಿತ ನಡೆಸುತ್ತಿದೆ’ ಎಂದು ಆರೋಪಿಸಿದ್ದರು.</p> .Lunar Eclipse: ಈ ವಾರದ ಚಂದ್ರಗ್ರಹಣ ಅಪಾಯ ತರುವ ರಕ್ತ ಚಂದ್ರಗ್ರಹಣವೇ?.Visual Story | ಗುಲಾಬಿ ಸೀರೆಯಲ್ಲಿ ಕಂಗೊಳಿಸಿದ ನಟಿ ಗೌತಮಿ ಜಾಧವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>