<p><strong>ಚಂಡೀಗಡ</strong>: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹುತಾತ್ಮರ ದಿನದಂದು (ಬುಧವಾರ) ‘ಭ್ರಷ್ಟಾಚಾರ ತಡೆ ಸಹಾಯವಾಣಿ’ಯನ್ನು ಆರಂಭಿಸಿದರು. ಈ ಮೂಲಕ ಭ್ರಷ್ಟಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾನ್ ಅವರು ಮೊದಲ ಹೆಜ್ಜೆಯನ್ನು ಇಟ್ಟಿದ್ದಾರೆ.</p>.<p>ಟ್ವಿಟರ್ನಲ್ಲಿ ವಿಡಿಯೊ ಹಂಚಿಕೊಂಡಿರುವ ಮಾನ್ ಅವರು, ‘9501200200’ ಸಹಾಯವಾಣಿಯನ್ನು ನೀಡಿದ್ದಾರೆ.</p>.<p>‘ಯಾರಾದರೂ ಲಂಚ ಕೇಳಿದರೆ ನಾಗರಿಕರು ಇಲ್ಲವೆಂದು ಹೇಳಬಾರದು. ಇದರ ಬದಲಾಗಿ ಲಂಚ ತೆಗೆದುಕೊಳ್ಳುತ್ತಿರುವವರ ವಿಡಿಯೊ ಅಥವಾ ಆಡಿಯೊ ರೆಕಾರ್ಡ್ ಮಾಡಿಕೊಳ್ಳಿ ಹಾಗೂ ಈ ಸಂಖ್ಯೆಗೆ ಕಳುಹಿಸಿ’ ಎಂದು ಮಾನ್ ಹೇಳಿದ್ದಾರೆ.</p>.<p>‘ಈ ಸಂಖ್ಯೆಗೆ ಕಳುಹಿಸಲಾಗುವ ದೂರುಗಳನ್ನು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ಮಾಡಲಾಗುತ್ತದೆ. ತಪ್ಪಿತಸ್ಥರು ಯಾರೇ ಆಗಿರಲಿ ಶಿಕ್ಷೆಗೆ ಗುರಿಯಾಗುತ್ತಾರೆ. ಈ ಕಾರ್ಯಕ್ಕಾಗಿ 3 ಕೋಟಿ ಪಂಜಾಬಿಗಳ ಸಹಾಯ ಬೇಕು’ ಮಾನ್ ತಿಳಿಸಿದ್ದಾರೆ.</p>.<p>ಮಾರ್ಚ್ 23ರಂದು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಆ ಹಿನ್ನೆಲೆಯಲ್ಲಿ ಇಂದು ಹುತ್ಮಾತ್ಮರ ದಿನವನ್ನು ಆಚರಿಸಲಾಗುತ್ತದೆ.</p>.<p>ಭಗತ್ ಸಿಂಗ್ ಅವರ ಸ್ವಗ್ರಾಮವಾದ ಖಟಕಡಕಲಾನ್ನಲ್ಲಿ ಮಾರ್ಚ್ 16 ರಂದು ಪಂಜಾಬ್ನ 17ನೇ ಮುಖ್ಯಮಂತ್ರಿಯಾಗಿ ಮಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p>.<p>117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ</strong>: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹುತಾತ್ಮರ ದಿನದಂದು (ಬುಧವಾರ) ‘ಭ್ರಷ್ಟಾಚಾರ ತಡೆ ಸಹಾಯವಾಣಿ’ಯನ್ನು ಆರಂಭಿಸಿದರು. ಈ ಮೂಲಕ ಭ್ರಷ್ಟಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾನ್ ಅವರು ಮೊದಲ ಹೆಜ್ಜೆಯನ್ನು ಇಟ್ಟಿದ್ದಾರೆ.</p>.<p>ಟ್ವಿಟರ್ನಲ್ಲಿ ವಿಡಿಯೊ ಹಂಚಿಕೊಂಡಿರುವ ಮಾನ್ ಅವರು, ‘9501200200’ ಸಹಾಯವಾಣಿಯನ್ನು ನೀಡಿದ್ದಾರೆ.</p>.<p>‘ಯಾರಾದರೂ ಲಂಚ ಕೇಳಿದರೆ ನಾಗರಿಕರು ಇಲ್ಲವೆಂದು ಹೇಳಬಾರದು. ಇದರ ಬದಲಾಗಿ ಲಂಚ ತೆಗೆದುಕೊಳ್ಳುತ್ತಿರುವವರ ವಿಡಿಯೊ ಅಥವಾ ಆಡಿಯೊ ರೆಕಾರ್ಡ್ ಮಾಡಿಕೊಳ್ಳಿ ಹಾಗೂ ಈ ಸಂಖ್ಯೆಗೆ ಕಳುಹಿಸಿ’ ಎಂದು ಮಾನ್ ಹೇಳಿದ್ದಾರೆ.</p>.<p>‘ಈ ಸಂಖ್ಯೆಗೆ ಕಳುಹಿಸಲಾಗುವ ದೂರುಗಳನ್ನು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ಮಾಡಲಾಗುತ್ತದೆ. ತಪ್ಪಿತಸ್ಥರು ಯಾರೇ ಆಗಿರಲಿ ಶಿಕ್ಷೆಗೆ ಗುರಿಯಾಗುತ್ತಾರೆ. ಈ ಕಾರ್ಯಕ್ಕಾಗಿ 3 ಕೋಟಿ ಪಂಜಾಬಿಗಳ ಸಹಾಯ ಬೇಕು’ ಮಾನ್ ತಿಳಿಸಿದ್ದಾರೆ.</p>.<p>ಮಾರ್ಚ್ 23ರಂದು ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಆ ಹಿನ್ನೆಲೆಯಲ್ಲಿ ಇಂದು ಹುತ್ಮಾತ್ಮರ ದಿನವನ್ನು ಆಚರಿಸಲಾಗುತ್ತದೆ.</p>.<p>ಭಗತ್ ಸಿಂಗ್ ಅವರ ಸ್ವಗ್ರಾಮವಾದ ಖಟಕಡಕಲಾನ್ನಲ್ಲಿ ಮಾರ್ಚ್ 16 ರಂದು ಪಂಜಾಬ್ನ 17ನೇ ಮುಖ್ಯಮಂತ್ರಿಯಾಗಿ ಮಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p>.<p>117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>