<p><strong>ಚಂಡೀಗಢ:</strong> ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಬಳಿ ಗ್ರೆನೇಡ್ ಸ್ಫೋಟ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಇಂದು (ಶನಿವಾರ) ತಿಳಿಸಿದ್ದಾರೆ. </p><p>ಉತ್ತರ ಪ್ರದೇಶದ ಅಮ್ರೋಹ ನಿವಾಸಿ ಸೈದುಲ್ ಅಮೀನ್ ಬಂಧಿತ ಆರೋಪಿ. ಕೇಂದ್ರ ತನಿಖಾ ಸಂಸ್ಥೆ ಹಾಗೂ ದೆಹಲಿ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ.</p><p>ಏಪ್ರಿಲ್ 7ರಂದು ಮನೋರಂಜನ್ ಕಾಲಿಯಾ ಅವರ ಜಲಂಧರ್ ನಿವಾಸದ ಬಳಿ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ ವಾಹನಗಳು ಜಖಂಗೊಂಡಿದ್ದು, ಯಾರಿಗೂ ಗಾಯವಾಗಿರಲಿಲ್ಲ. </p><p>ಕಾಲಿಯಾ ಅವರ ನಿವಾಸದ ಮೇಲೆ ಗ್ರೆನೇಡ್ ದಾಳಿ ಪ್ರಕರಣದಲ್ಲಿ ಸೈದುಲ್ ಅಮೀನ್ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ. </p><p>ದಾಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಪ್ರಗತಿಯಲ್ಲಿದೆ. ವಿದೇಶಿ ಸಂಪರ್ಕ, ಹಣಕಾಸಿನ ಬೆಂಬಲ ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. </p><p>ಘಟನೆ ಬೆನ್ನಲ್ಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಪಂಜಾಬ್ನಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಲಾರೆನ್ಸ್ ಬಿಷ್ಣೋಯಿ ತಂಡ ಈ ಕೃತ್ಯಕ್ಕೆ ಸಂಚು ರೂಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಕೃತ್ಯಕ್ಕೆ ಬಳಸಿದ್ದ ಇ-ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. </p>.ಬಿಜೆಪಿ ನಾಯಕರ ನಿವಾಸದ ಬಳಿ ಗ್ರೆನೇಡ್ ಸ್ಫೋಟ.ಪಂಜಾಬ್: ಪಾಕಿಸ್ತಾನದ ಕಳ್ಳಸಾಗಣೆದಾರರು ಕಳುಹಿಸಿದ ಹೆರಾಯಿನ್ ವಶ; ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಬಳಿ ಗ್ರೆನೇಡ್ ಸ್ಫೋಟ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಇಂದು (ಶನಿವಾರ) ತಿಳಿಸಿದ್ದಾರೆ. </p><p>ಉತ್ತರ ಪ್ರದೇಶದ ಅಮ್ರೋಹ ನಿವಾಸಿ ಸೈದುಲ್ ಅಮೀನ್ ಬಂಧಿತ ಆರೋಪಿ. ಕೇಂದ್ರ ತನಿಖಾ ಸಂಸ್ಥೆ ಹಾಗೂ ದೆಹಲಿ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ.</p><p>ಏಪ್ರಿಲ್ 7ರಂದು ಮನೋರಂಜನ್ ಕಾಲಿಯಾ ಅವರ ಜಲಂಧರ್ ನಿವಾಸದ ಬಳಿ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ ವಾಹನಗಳು ಜಖಂಗೊಂಡಿದ್ದು, ಯಾರಿಗೂ ಗಾಯವಾಗಿರಲಿಲ್ಲ. </p><p>ಕಾಲಿಯಾ ಅವರ ನಿವಾಸದ ಮೇಲೆ ಗ್ರೆನೇಡ್ ದಾಳಿ ಪ್ರಕರಣದಲ್ಲಿ ಸೈದುಲ್ ಅಮೀನ್ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ. </p><p>ದಾಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಪ್ರಗತಿಯಲ್ಲಿದೆ. ವಿದೇಶಿ ಸಂಪರ್ಕ, ಹಣಕಾಸಿನ ಬೆಂಬಲ ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. </p><p>ಘಟನೆ ಬೆನ್ನಲ್ಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಪಂಜಾಬ್ನಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಲಾರೆನ್ಸ್ ಬಿಷ್ಣೋಯಿ ತಂಡ ಈ ಕೃತ್ಯಕ್ಕೆ ಸಂಚು ರೂಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಕೃತ್ಯಕ್ಕೆ ಬಳಸಿದ್ದ ಇ-ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. </p>.ಬಿಜೆಪಿ ನಾಯಕರ ನಿವಾಸದ ಬಳಿ ಗ್ರೆನೇಡ್ ಸ್ಫೋಟ.ಪಂಜಾಬ್: ಪಾಕಿಸ್ತಾನದ ಕಳ್ಳಸಾಗಣೆದಾರರು ಕಳುಹಿಸಿದ ಹೆರಾಯಿನ್ ವಶ; ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>